ಸಾಸ್ತಾನ ಮೀನು ಮಾರುಕಟ್ಟೆ ಗೊಂದಲದ ನಡುವೆ ಕಾರ್ಯಾರಂಭ; ಸ್ಥಳಾವಕಾಶಕ್ಕಾಗಿ ಕಿತ್ತಾಟ


Team Udayavani, May 11, 2020, 5:35 AM IST

ಸಾಸ್ತಾನ ಮೀನು ಮಾರುಕಟ್ಟೆ ಗೊಂದಲದ ನಡುವೆ ಕಾರ್ಯಾರಂಭ; ಸ್ಥಳಾವಕಾಶಕ್ಕಾಗಿ ಕಿತ್ತಾಟ

ಕೋಟ: ಕಾಮಗಾರಿ ಪೂರ್ಣಗೊಂಡು ಹಲವು ಸಮಯ ಕಳೆದರೂ ಆಡಳಿತ ವ್ಯವಸ್ಥೆ ಹಾಗೂ ಮೀನುಗಾರ ಮಹಿಳೆಯರ ನಡುವಿನ ಹಗ್ಗ-ಜಗ್ಗಾಟದಿಂದ ಮುಂದೂಡಲ್ಪಟ್ಟಿದ್ದ ಸಾಸ್ತಾನ ಮೀನು ಮಾರುಕಟ್ಟೆಯ ಉದ್ಘಾಟನೆ ರವಿವಾರ ದಿಢೀರ್‌ ಆಗಿ ನಡೆಯಿತು ಹಾಗೂ ಒಂದಷ್ಟು ಗದ್ದಲ, ಗೊಂದಲಗಳಿಗೆ ಕಾರಣವಾಯಿತು.

ಸುಮಾರು 1.80 ಕೋ.ರೂ. ಅನುದಾನದಲ್ಲಿ ನಿರ್ಮಾಣಗೊಂಡ ಈ ಮಾರುಕಟ್ಟೆಯ ಕಾಮಗಾರಿ ವ್ಯವಸ್ಥಿತ ವಾಗಿಲ್ಲ ಹಾಗೂ ವಿನ್ಯಾಸದಲ್ಲಿ ದೋಷವಿದೆ. ಎಲ್ಲಾ ಮೀನು ಮಾರಾಟಗಾರರಿಗೆ ಸªಳಾವಕಾಶದ ಕೊರñಯಾಗಲಿದೆ ಎನ್ನುವ ಕಾರಣಕ್ಕೆ ಉದ್ಘಾಟನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅನಂತರ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್‌ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದರು. ಆದರೆ ಎಷ್ಟೇ ಪ್ರಯತ್ನಪಟ್ಟರು ಸಮಸ್ಯೆ ಬಗೆಹರಿದಿರಲಿಲ್ಲ.

ಇದೀಗ ಸ್ಥಳೀಯ ಗ್ರಾ.ಪಂ. ಹಾಗೂ ಮೀನುಗಾರ ಪ್ರಮುಖರು ಮಾತುಕತೆ ನಡೆಸಿ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನಿರ್ದೇಶನದಂತೆ ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ, ಐರೋಡಿ ಗ್ರಾ.ಪಂ. ಅಧ್ಯಕ್ಷ ಮೊಸೆಸ್‌ ರೋಡಿಗ್ರಸ್‌ ಉಪಸ್ಥಿತಿಯಲ್ಲಿ ವ್ಯಾಪಾರಕ್ಕೆ ವ್ಯವಸ್ಥೆಗೊಳಿಸಲಾಯಿತು.

ಪ್ರತಿದಿನ ಸ್ಥಳ ಬದಲಾವಣೆ, ಖಾಯಂ ಆಗಿ ಮಾರುವವರಿಗೆ ಮೊದಲು ಆಧ್ಯತೆ ನೀಡಿ ಎನ್ನುವ ಬೇಡಿಕೆ ಕೇಳಿಬಂತು ಆದರೆ ಈ ಕುರಿತು ಸ್ಪಷ್ಟ ನಿರ್ಧಾರ ವ್ಯಕ್ತವಾಗಲಿಲ್ಲ. ಹೀಗಾಗಿ ಮೀನು ಮಾರಾಟ ಮಾಡುವ ಆರು ಮಂದಿ ಮಹಿಳೆಯರಿಗೆ ನಾಯಕತ್ವ ನೀಡಿ ಪ್ರತಿ ದಿನ ಸುಂಕ ವಸೂಲಿ, ಜಾಗ ಹಂಚಿಕೆ ಜವಬ್ದಾರಿ ನೀಡಲಾಯಿತು. ಈ ಸಂದರ್ಭ ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ವಿಫಲವಾದ ಕಾರಣ ಸುಮಾರು 2 ಗಂಟೆಗೂ ಹೆಚ್ಚು ಕಾಲ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರವನ್ನು ಮಾಯವಾಗಿ ಕಿಕ್ಕಿರಿದ ಜನಸಂದಣಿ ಇತ್ತು.
ಐರೋಡಿ ಗ್ರಾ.ಪಂ. ಅಧ್ಯಕ್ಷ ಮೊಸೆಸ್‌ ರೋಡಿಗ್ರಸ್‌, ಸದಸ್ಯರಾದ ಆನಂದ ಗಾಣಿಗ, ಶಿವರಾಮ ಶ್ರೀಯಾನ್‌, ಸುಧಾಕರ ಪೂಜಾರಿ, ಮೀನುಗಾರ ಪ್ರತಿನಿಧಿಗಳಾಗಿ ಸಂದೀಪ್‌ ಕುಂದರ್‌ ಕೋಡಿ ಕನ್ಯಾಣ, ಮಹಾಬಲ ಕುಂದರ್‌, ಗಂಗಾಧರ, ಪ್ರಭಾಕರ ಕುಂದರ್‌, ಮೀನುಗಾರಿಕಾ ಮಹಿಳೆಯರಾದ ಜ್ಯೋತಿ ಖಾರ್ವಿ, ಸರೋಜ, ಗಂಗೆ, ಕುಸುಮ, ಬೇಬಿ, ಕಮಲಾ ಮುಂತಾದವರು ಉಪಸ್ಥಿತರಿದ್ದರು.

ಸ್ಥಳಾವಕಾಶಕ್ಕಾಗಿ ಕಿತ್ತಾಟ
ನೂತನ ಮಾರುಕಟ್ಟೆಯಲ್ಲಿ ಸ್ಥಳ ಹಂಚಿಕೆ ಮಾಡುತ್ತಿದ್ದಂತೆ ಗೊಂದಲಮಯ ವಾತಾವರಣ ನಿರ್ಮಾಣಗೊಂಡಿತು. ಮಾರುಕಟ್ಟೆಯ ಒಳಗೆ ಸುಮಾರು 80 ಮಂದಿಗೆ ಮೀನು ಮಾರಾಟ ಮಾಡಲು ಸ್ಥಳ ಗುರುತು ಮಾಡಿದ್ದು, 150ಕ್ಕೂ ಹೆಚ್ಚು ಮೀನುಗಾರಿಕಾ ಮಹಿಳೆಯರು ಆಗಮಿಸಿದ್ದರಿಂದ ಸುಮಾರು 70 ಮಂದಿಗೆ ಸ್ಥಳಾವಕಾಶ ಸಿಗದೆ ಅತಂತ್ರರಾದರು ಹಾಗೂ ಖಾಯಂ ಆಗಿ ಮೀನು ಮಾರಾಟ ಮಾಡುವ ಮಹಿಳೆಯರಿಗೆ ಸ್ಥಳ ಸಿಗದೇ ಅಪರೂಪಕ್ಕೊಮ್ಮೆ ಮೀನು ಮಾರಾಟಕ್ಕೆ ಬರುವ ಮಹಿಳೆಯರು ಸ್ಥಳವನ್ನು ಆಕ್ರಮಿಸಿಕೊಂಡಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ನಡೆಯಿತು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.