Rishabh Foundation ಕಲಿತ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್‌ ಶೆಟ್ಟಿ

ರಿಷಬ್‌ ಫೌಂಡೇಶನ್‌ನಿಂದ ಕನ್ನಡ ಶಾಲೆಗಳ ಉಳಿಸಿ ಅಭಿಯಾನ

Team Udayavani, Dec 17, 2023, 11:49 PM IST

rRishabh Foundation ಕಲಿತ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್‌ ಶೆಟ್ಟಿ

ಕುಂದಾಪುರ: ಪ್ರಾಥಮಿಕ ಶಿಕ್ಷಣವನ್ನು ಕಲಿತ ಕೆರಾಡಿಯ ಸರಕಾರಿ ಹಿ. ಪ್ರಾ. ಕನ್ನಡ ಮಾಧ್ಯಮ ಶಾಲೆಯನ್ನು ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಮುಂದಿನ ಐದು ವರ್ಷಗಳ ಅವಧಿಗೆ ದತ್ತು ಪಡೆದಿದ್ದಾರೆ. ರಿಷಬ್‌ ಫೌಂಡೇಶನ್‌ನಿಂದ ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ಮಾಡುವ ಯೋಜನೆಯನ್ನು ಹೊಂದಿರುವ ಅವರು ಫೌಂಡೇಶನ್‌ ಮೂಲಕ ಕನ್ನಡ ಶಾಲೆ ಉಳಿಸಿ ಅಭಿಯಾನವನ್ನು ಸಹ ಕೈಗೊಂಡಿದ್ದಾರೆ.

ಕೆರಾಡಿ ಶಾಲೆಗೆ ಭೇಟಿ
ಕಾಂತಾರ ಪ್ರೀಕ್ವೆಲ್‌ ಚಿತ್ರದ ಚಿತ್ರೀಕರಣದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ರಿಷಬ್‌ ಶೆಟ್ಟಿ ಸದ್ಯ ಹುಟ್ಟೂರಾದ ಕೆರಾಡಿಯಲ್ಲಿದ್ದಾರೆ. ರವಿವಾರ ತಾನು ಕಲಿತ ಶಾಲೆಗೆ ಭೇಟಿ ನೀಡಿದರು. ಶಾಲೆ ದತ್ತು ಪಡೆಯುವ ಬಗ್ಗೆ ಪೂರ್ವಭಾವಿ ಚರ್ಚೆ ನಡೆಸಿದ್ದಲ್ಲದೆ, ಅಲ್ಲಿನ ಮಕ್ಕಳು, ಶಿಕ್ಷಕರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು. ಈ ವೇಳೆ ತಾನು ಕಲಿತ ಶಾಲೆಯನ್ನು ದತ್ತು ಪಡೆಯುವುದಾಗಿ ಘೋಷಿಸಿದರು.

ಸರ್ವಾಂಗೀಣ ಅಭಿವೃದ್ಧಿ
ಈ ಶಾಲೆಯಲ್ಲಿ ಪ್ರಸ್ತುತ 71 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಒಬ್ಬರು ಖಾಯಂ ಶಿಕ್ಷಕರಿದ್ದಾರೆ. ಉಳಿದವರು ಗೌರವ ಶಿಕ್ಷಕರಾಗಿದ್ದಾರೆ. ನಾನು ಸ್ವತಃ ಈ ಶಾಲೆಯ ಸ್ಥಿತಿಗತಿಯನ್ನು ತಿಳಿದುಕೊಂಡಿದ್ದು, ರಿಷಬ್‌ ಫೌಂಡೇಶನ್‌ ಮುಂದಿನ ಶೈಕ್ಷಣಿಕ ವರ್ಷದಿಂದ 5 ವರ್ಷಗಳ ಅವಧಿಗೆ ಈ ಶಾಲೆಯನ್ನು ದತ್ತು ಪಡೆದಿದೆ. ಮೂಲಭೂತ ಸೌಕರ್ಯ ಸಹಿತ ಕೊಠಡಿ, ಪ್ರತೀ ತರಗತಿಗೆ ಶಿಕ್ಷಕರು, ಆವರಣ ಗೋಡೆ, ಅಗತ್ಯವಿದ್ದರೆ ವಾಹನದ ವ್ಯವಸ್ಥೆ ಕಲ್ಪಿಸಲಿದೆ. ಇದಲ್ಲದೆ ಎಲ್‌ಕೆಜಿ – ಯುಕೆಜಿ, ನ್ಪೋಕನ್‌ ಇಂಗ್ಲಿಷ್‌ ಕಲಿಕೆ ಆರಂಭಿಸುವ ಯೋಜನೆಯಿದೆ ಎನ್ನುವುದಾಗಿ ರಿಷಬ್‌ ಶೆಟ್ಟಿ ಇದೇ ವೇಳೆ ತಿಳಿಸಿದ್ದಾರೆ.

ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್‌ ನಾಯ್ಕ ಮಾತನಾಡಿ, ಕನ್ನಡ ಮಾತ್ರವಲ್ಲದೆ ದೇಶದ ಚಲನಚಿತ್ರ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ರಿಷಬ್‌ ಶೆಟ್ಟಿ ಅವರು ಕನ್ನಡ ಶಾಲೆಗಳ ಮೇಲೆತ್ತುವಿಕೆ ನಿಟ್ಟಿನಲ್ಲಿ ತಾನು ಕಲಿತ ಶಾಲೆಯನ್ನು ದತ್ತು ಪಡೆದಿರುವುದು ನಿಜಕ್ಕೂ ಮಾದರಿ ಕಾರ್ಯ. ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಈ ಸಂದರ್ಭ ಕೆರಾಡಿ ಗ್ರಾ.ಪಂ. ಅಧ್ಯಕ್ಷ ಸುದರ್ಶನ ಶೆಟ್ಟಿ, ಉಪಾಧ್ಯಕ್ಷೆ ಕುಸುಮಾ ಪೂಜಾರಿ, ವರಸಿದ್ಧಿ ವಿನಾಯಕ ಪ.ಪೂ. ಕಾಲೇಜಿನ ನಿರ್ದೇಶಕ ಪ್ರದೀಪ್‌ ಶೆಟ್ಟಿ, ವಕೀಲ ಪ್ರಸನ್ನ ಕುಮಾರ್‌ ಶೆಟ್ಟಿ ಕೆರಾಡಿ, ಸಿ.ಎ. ಬ್ಯಾಂಕ್‌ ನಿರ್ದೇಶಕ ಭುಜಂಗ ಶೆಟ್ಟಿ, ಉದ್ಯಮಿ ಬಿ.ಎಸ್‌. ಸುರೇಶ್‌ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಸತೀಶ್‌ ಕೊಠಾರಿ ಸ್ವಾಗತಿಸಿ, ಶಾಲೆಯ ಮುಖ್ಯ ಶಿಕ್ಷಕ ವಿಜಯ ಶೆಟ್ಟಿ ನಿರೂಪಿಸಿದರು.

ಕೈರಂಗಳ ಶಾಲೆ ಅಭಿವೃದ್ಧಿ
ಸರಕಾರಿ ಹಿ. ಪ್ರಾ. ಶಾಲೆಯ ಕಾಸರಗೋಡು ಚಿತ್ರದ ಚಿತ್ರೀಕರಣಕ್ಕಾಗಿ ಬಂಟ್ವಾಳ ತಾಲೂಕಿನ ಕೈರಂಗಳ ಸರಕಾರಿ ಹಿ.ಪ್ರಾ. ಶಾಲೆಯನ್ನು ಬಳಸಿದ್ದರು. ಈ ಚಿತ್ರದಲ್ಲಿ ಗಡಿನಾಡ ಕನ್ನಡ ಶಾಲೆಗಳ ದುಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದರು. ಆಗ 42 ಮಕ್ಕಳಿದ್ದು, ಆ ಬಳಿಕ ಮಕ್ಕಳ ಸಂಖ್ಯೆ 17ಕ್ಕೆ ಕುಸಿದು, ಮುಚ್ಚುವ ಹಂತದಲ್ಲಿತ್ತು. ಆದರೆ ತನ್ನ ಸಿನೆಮಾಕ್ಕಾಗಿ ಬಳಸಿ, ಕೈ ಕಟ್ಟಿ ಕುಳಿತುಕೊಳ್ಳದೇ, ಈ ಕೈರಂಗಳ ಶಾಲೆಯನ್ನು ದತ್ತು ಪಡೆದು, ಮಾದರಿ ಶಾಲೆಯಾಗಿ ರೂಪಿಸುವ ಪಣ ತೊಟ್ಟಿದ್ದರು. ಅದರಂತೆ ಶಾಲೆಗೆ ಹೊಸ ರೂಪ ನೀಡಿ, ಮಕ್ಕಳ ಸಂಖ್ಯೆಯನ್ನು ವರ್ಷದೊಳಗೆ 84ಕ್ಕೆ ಏರಿಸುವಲ್ಲಿ ಯಶಸ್ವಿಯಾಗಿದ್ದರು. ಈಗ ರಿಷಬ್‌ ಕೂಡ ತಾನು ಕಲಿತ ಶಾಲೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ದತ್ತು ಪಡೆದುಕೊಳ್ಳಲು ಮುಂದಾಗಿದ್ದಾರೆ.

ಕನ್ನಡ ಶಾಲೆ ಉಳಿಸುವ ಉದ್ದೇಶ
ಕನ್ನಡ ಶಾಲೆಗಳು ಮುಚ್ಚುತ್ತಿವೆ ಎನ್ನುವುದನ್ನು ಮನಗಂಡು ಸರಕಾರಿ ಹಿ.ಪ್ರಾ. ಶಾಲೆ ಕಾಸರಗೋಡು ಚಿತ್ರ ಮಾಡಿದೆ. ಅದರ ಮುಂದುವರಿದ ಭಾಗವಾಗಿ ಈ ಕೈಂಕರ್ಯವನ್ನು ನಮ್ಮಿಂದ ಕೈಗೊಂಡಿದ್ದೇವೆ. ಕನ್ನಡ ಶಾಲೆಗಳ ಉನ್ನತೀಕರಣ ರಿಷಬ್‌ ಫೌಂಡೇಶನ್‌ನ ಉದ್ದೇಶ. ಅದರ ಮೊದಲ ಹಂತವಾಗಿ ನನ್ನ ಹುಟ್ಟೂರಿನ ಶಾಲೆಯನ್ನು 5 ವರ್ಷಗಳ ಅವಧಿಗೆ ದತ್ತು ಪಡೆದಿದ್ದೇನೆ. ಇನ್ನು ಮುಂದಿನ ದಿನಗಳಲ್ಲಿ ಮುಚ್ಚುವ ಹಂತದಲ್ಲಿರುವ, ಹಿಂದುಳಿದಿರುವ ಕನ್ನಡ ಶಾಲೆಗಳನ್ನು ಉಳಿಸಿ, ಬೆಳೆಸುವ ಯೋಜನೆ ಈ ಫೌಂಡೇಶನ್‌ನದ್ದಾಗಿದೆ.
– ರಿಷಬ್‌ ಶೆಟ್ಟಿ, ನಟ, ನಿರ್ದೇಶಕ

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.