ಶಾಸಕರಿಂದ ಶಾಲೆ ದತ್ತು ಸ್ವೀಕಾರ; ಕುಂದಾಪುರದಲ್ಲಿ ವಿಶಿಷ್ಟ ಯೋಜನೆ, ಬೈಂದೂರಿನಲ್ಲಿ 3 ಶಾಲೆ


Team Udayavani, Jul 23, 2020, 2:45 PM IST

ಶಾಸಕರಿಂದ ಶಾಲೆ ದತ್ತು ಸ್ವೀಕಾರ; ಕುಂದಾಪುರದಲ್ಲಿ ವಿಶಿಷ್ಟ ಯೋಜನೆ, ಬೈಂದೂರಿನಲ್ಲಿ 3 ಶಾಲೆ

ಕುಂದಾಪುರ: ರಾಜ್ಯದ ಎಲ್ಲ ಶಾಸಕರು (ಸಚಿವರ ಸಹಿತ)  2020-21ನೇ ಸಾಲಿನಿಂದ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆದು, ಮೂಲಸೌಕರ್ಯ ಅಭಿವೃದ್ಧಿ ಪಡಿಸಬೇಕು ಎನ್ನುವ ಯೋಜನೆಗೆ ಕುಂದಾಪುರ ಕ್ಷೇತ್ರದಲ್ಲಿ ವಿಶಿಷ್ಟ ಯೋಜನೆ ರೂಪಿಸಲಾಗಿದೆ. ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರದ ನಿರ್ದೇಶನದಂತೆ ಮೂರು ಶಾಲೆಗಳನ್ನು ಆಯ್ಕೆ ಮಾಡಲಾಗಿದೆ.

ಎಲ್ಲ ಶಾಲೆಗಳ ದತ್ತು
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 432 ಶಾಲೆಗಳಿದ್ದು ಸರಕಾರದ ಯೋಜನೆಯಂತೆ ಕೇವಲ ಮೂರು ಶಾಲೆಗಳನ್ನು ದತ್ತು ಎಂದು ಸ್ವೀಕರಿಸುವುದಿಲ್ಲ. ನನ್ನ ವಿಧಾನಸಭಾ ಕ್ಷೇತ್ರದ ಎಲ್ಲ ಶಾಲೆಗಳೂ ಅಭಿವೃದ್ಧಿಯಾಗಬೇಕೆನ್ನುವುದು ನನ್ನ ನಿಲುವು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ.

ಮೂರು ಶಾಲೆಗಳಳು
ಬೈಂದೂರು ವಿಧಾನಸಭಾ ಕ್ಷೇತ್ರ ದಲ್ಲಿ ಮೂರು ಶಾಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ. ಸರಕಾರಿ ಪ್ರೌಢಶಾಲೆ ಸಿದ್ದಾಪುರ, ಕರ್ನಾಟಕ ಪಬ್ಲಿಕ್‌ ಶಾಲೆ ನೆಂಪು, ಸರಕಾರಿ ಪ್ರೌಢಶಾಲೆ ಉಪ್ಪುಂದ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡಲಾಗು ವುದು ಎಂದಿದ್ದಾರೆ.

ವಿಶೇಷ ಅನುದಾನ ಇಲ್ಲ
ಶಾಲಾ ದತ್ತು ಸ್ವೀಕಾರಕ್ಕೆ ವಿಶೇಷ ಅನುದಾನ ಇಲ್ಲ. ಶಾಸಕರಿಗೆ ಈಗಾಗಲೇ ಬರುವ ಪ್ರದೇಶಾಭಿವೃದ್ಧಿ ನಿಧಿಯಲ್ಲೇ ಈ ಶಾಲೆಗಳ ಅಭಿವೃದ್ಧಿಗೂ ಅನುದಾನ  ನೀಡಬೇಕು. ಜಿಲ್ಲಾಧಿಕಾರಿ ಮೇಲುಸ್ತುವಾರಿಯನ್ನು ಆಯಾ ಜಿಲ್ಲಾಧಿಕಾರಿಗಳೇ ವಹಿಸಿಕೊಳ್ಳಬೇಕು ಹಾಗೂ ಅನುದಾನ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಪ್ರತಿ ತಿಂಗಳ ವರದಿಯನ್ನು ಇಲಾಖಾ ಆಯುಕ್ತರಿಗೆ ಸಲ್ಲಿಸಬೇಕು.

ವಿಶೇಷ ಅನುದಾನ ಇಲ್ಲದ್ದು ಶಾಸಕರಿಗೂ ಸಂಕಷ್ಟ ತಂದಿದೆ. ಕ್ಷೇತ್ರದ ಇತರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆಯಾಗಲಿದೆ ಎಂಬ ಆತಂಕವಿದೆ. ಪ್ರದೇಶಾಭಿವೃದ್ಧಿ ನಿಧಿ ಬಳಸಿ ಆ ಶಾಲೆಯ ಕಟ್ಟಡ ನಿರ್ಮಾಣ, ಕೊಠಡಿ ದುರಸ್ತಿ, ಕಂಪ್ಯೂಟರ್‌ ಲ್ಯಾಬ್‌ ಅಥವಾ ಕಂಪ್ಯೂಟರ್‌ ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವುದು, ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಜತೆಗೆ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗುವಂತೆ ಮಾಡುವುದು ಇದರ ಉದ್ದೇಶ. ಶಾಲಾಭಿವೃದ್ಧಿ ಸಮಿತಿ, ಪೋಷಕರು, ದಾನಿಗಳ ನೆರವಿನಿಂದ ಹಣ ಹೊಂದಿಸಬೇಕಿದೆ. ಈಗಾಗಲೇ ಖಾಸಗಿ ಶಾಲೆಗಳು ಆನ್‌ಲೈನ್‌ ಶಿಕ್ಷಣ ಆರಂಭಿಸಿದ್ದರೆ ಸರಕಾರಿ ಶಾಲೆಗಳಿಗೆ ಶೇ.70ರಷ್ಟು ಪುಸ್ತಕ ವಿತರಿಸಲಾಗಿದೆ.

ಎಲ್ಲ ಶಾಲೆಗಳ ದತ್ತು
ಕ್ಷೇತ್ರ ವ್ಯಾಪ್ತಿಯ 432 ಶಾಲೆಗಳಲ್ಲೂ ಮೂಲ ಸೌಕರ್ಯಕ್ಕೆ  ಕೊರತೆಯಾಗದಂತೆ ಆದ್ಯತೆಯಲ್ಲಿ ನೋಡಿಕೊಳ್ಳಲಾಗುವುದು.  ಒಂದೆರಡು ಶಾಲೆಗೆ ಮಾತ್ರ ಸೀಮಿತ ಶಾಸಕ ನಾನಲ್ಲ. ಎಲ್ಲ ಶಾಲೆಗಳ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ.
-ಹಾಲಾಡಿ ಶ್ರೀನಿವಾಸ ಶೆಟ್ಟಿ, , ಕುಂದಾಪುರ ಶಾಸಕರು

ಮೂರು ಶಾಲೆ ದತ್ತು
ಕ್ಷೇತ್ರ ವ್ಯಾಪ್ತಿಯ ನೆಂಪು, ಸಿದ್ದಾಪುರ, ಉಪ್ಪುಂದ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲಾಗುವುದು. ಶೈಕ್ಷಣಿಕ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಮಗುವಿಗೂ ಶಿಕ್ಷಣ ದೊರೆಯುವಂತಾಗಬೇಕು ಎನ್ನುವುದು ನಮ್ಮ ಆಶಯ.
-ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.