ಶಾಲೆ ದುರಸ್ತಿಗೆ ಪ್ರಥಮ ಆದ್ಯತೆ

ಕುಂದಾಪುರ ತಾಲೂಕು ಪಂಚಾಯತ್‌ ಸಾಮಾನ್ಯ ಸಭೆ

Team Udayavani, May 20, 2022, 12:26 PM IST

meeting

ಕುಂದಾಪುರ: ಈಗ ಎಲ್ಲೆಡೆ ಮಳೆಯಾಗುತ್ತಿದ್ದು ದುರಸ್ತಿ ಅವಶ್ಯ ವಿರುವ ಶಾಲಾ ಕಟ್ಟಡಗಳಿದ್ದರೆ ತತ್‌ಕ್ಷಣ ಕ್ರಮ ಕೈಗೊಳ್ಳಲಾಗುವುದು. ಅಪಾಯ ಕಾರಿ ಮರಗಳ ತೆರವು ಆಗಬೇಕಿದ್ದಲ್ಲಿ ಅವುಗಳ ಮಾಹಿತಿ ನೀಡಿ. ಹಾಸ್ಟೆಲ್‌ಗ‌ಳಲ್ಲಿ ಮಕ್ಕಳಿಗೆ ಬಟ್ಟೆ ಒಣಗಿಸಲು ಪ್ರತ್ಯೇಕ ವ್ಯವಸ್ಥೆ ಆಗಬೇಕಿದ್ದರೂ ಅದಕ್ಕೆ ಅನುದಾನ ಒದಗಿಸಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗು ವುದು ಎಂದು ಜಿ.ಪಂ. ಯೋಜನಾ ನಿರ್ದೇಶಕ, ತಾ.ಪಂ. ಆಡಳಿತಾಧಿಕಾರಿ ಶ್ರೀನಿವಾಸ ರಾವ್‌ ಹೇಳಿದರು.

ಅವರು ಗುರುವಾರ ಇಲ್ಲಿ ತಾ.ಪಂ. ಸಭೆ ನಡೆಸಿ, ಹಾಸ್ಟೆಲ್‌ಗ‌ಳು ಸುವ್ಯವಸ್ಥಿತ ವಾಗಿ ಇರುವಂತೆ ನೋಡಿಕೊಳ್ಳಬೇಕು. ಮೂಲ ಸೌಕರ್ಯ ಉತ್ತಮವಾಗಿ ಇರಬೇಕು. ಅಡುಗೆ ಮನೆ, ಲೈಬ್ರರಿ ಇತ್ಯಾದಿಗಳು ಸರಿ ಇರಬೇಕು ಎಂದು ಬಿಸಿಎಂ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದರು. ಹಾಸ್ಟೆಲ್‌ ಮಾಡಿಗೆ ಶೀಟ್‌ ಹಾಕಿಸುವುದಾದರೆ ಶಬ್ದ ಬರದಂತಹ ಶೀಟ್‌ ಹಾಕಿಸಿ. ಶಾಲೆ ದುರಸ್ತಿ ಹಾಗೂ ಹಾಸ್ಟೆಲ್‌ ಮೂಲಸೌಕರ್ಯಕ್ಕೆ ಅವಶ್ಯವಿದ್ದರೆ ಮಾಹಿತಿಕೊಡಿ ಎಂದು ಬಿಸಿಎಂ ಅಧಿಕಾರಿ ನರಸಿಂಹ ಪೂಜಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್‌ ಅವರಲ್ಲಿ ಮಾಹಿತಿ ಪಡೆದರು.

ಮುಂಜಾಗರೂಕತೆ ವಹಿಸಿ

ಬೈಂದೂರು ತಾಲೂಕಿಗೆ ಶಿಕ್ಷಣ ಇಲಾಖೆ ಪ್ರತ್ಯೇಕವಾದ ಕಾರಣ ರಾಜ್ಯಮಟ್ಟದಲ್ಲಿ ಅನುದಾನ ವಿಂಗಡಿಸುವಾಗ ತಪ್ಪಾಗಿ ಹಂಚಿಕೆಯಾಗಿದೆ. ಅದನ್ನು ಜಿ.ಪಂ. ಹಂತದಲ್ಲಿ ಸರಿಪಡಿಸಲಾಗಿದೆ ಎಂದರು. ಶಾಲೆಗಳಲ್ಲಿ ಟೊಮೆಟೊ ಜ್ವರ ಇದೆಯೇ ಎಂದು ಶಿಕ್ಷಣಾಧಿಕಾರಿಗಳಾದ ಅರುಣ್‌ ಕುಮಾರ್‌ ಶೆಟ್ಟಿ, ಮುಂದಿನ ಮನಿ ಅವರನ್ನು ಪ್ರಶ್ನಿಸಿದರು. ಶಾಲೆಗಳಲ್ಲಿ ಖಾಯಿಲೆ ಬಂದರೆ, ಮುದೂರು ಪರಿಸರದಂತೆ ಡೆಂಗ್ಯೂ ಬಂದರೆ ತತ್‌ಕ್ಷಣ ಅದು ಎಲ್ಲ ಮಕ್ಕಳಿಗೂ ಹರಡದಂತೆ ಮುಂಜಾಗರೂಕತೆ ವಹಿಸಿ. ಅನಾರೋಗ್ಯಪೀಡಿತ ವಿದ್ಯಾರ್ಥಿಗೆ ರಜೆ ನೀಡಿ ಎಂದರು.

ಹಾಸ್ಟೆಲ್‌ ಆವರಣದಲ್ಲೂ ಗಿಡ ನೆಡಿ

ಶಾಲೆಗಳಲ್ಲಿ ವನಮಹೋತ್ಸವ ನಡೆಸಲು ಸಮಾಜಿಕ ಅರಣ್ಯ ಇಲಾಖೆಯಿಂದ ಗಿಡಗಳನ್ನು ಪಡೆದುಕೊಳ್ಳ ಬಹುದು. ಬೇಡಿಕೆಗಳ ಪಟ್ಟಿ ನೀಡಿ. ಪಂಚಾಯತ್‌ ಹಂತದಲ್ಲಿ ವಿಂಗಡಿಸಿ ನೀಡಿದರೆ ಸಾಗಾಟದ ವೆಚ್ಚ ಪಂಚಾಯತ್‌ ಗಳಿಂದ ಪಡೆಯಬಹುದು. ಹಾಸ್ಟೆಲ್‌ ಗಳ ಆವರಣದಲ್ಲೂ ಗಿಡಗಳನ್ನು ನೆಡಬಹುದು. ದೊಡ್ಡ ಪ್ರಮಾಣದಲ್ಲಿ ಗಿಡಗಳನ್ನು ನೆಡುವುದಾದರೆ ನರೇಗಾ ಯೋಜನೆಯನ್ನು ಬಳಸಬಹುದು ಎಂದು ಸಾಮಾಜಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ತುಳಸಿ, ನರೇಗಾ ಸಹಾಯಕ ನಿರ್ದೇಶಕ ರಾಜೇಶ್‌ ಕೆ.ಸಿ. ಅವರಿಂದ ಮಾಹಿತಿ ಪಡೆದರು.

15ನೆಯ ಹಣಕಾಸು ಯೋಜನೆಯಲ್ಲಿ ಅನುದಾನ ಇದೆ, ಕೊರತೆ ಇಲ್ಲ. ಯಾವುದೇ ಇಲಾಖೆಗಳದ್ದು ಅಭಿವೃದ್ಧಿ, ಜನಪರ ಸೌಕರ್ಯದ ಬೇಡಿಕೆಗಳಿದ್ದರೆ ಪಟ್ಟಿಕೊಡಿ. ಆದರೆ ಸೂಕ್ತ ದಾಖಲೆ, ಛಾಯಾಚಿತ್ರಗಳಿರಬೇಕು ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.