ತಾಂತ್ರಿಕ ಸಮಸ್ಯೆಯಿಂದ ಸೇವಾ ಸಿಂಧು ಸ್ಥಗಿತ
ದಾಖಲೆ ಪಡೆಯಲು ಜನಸಾಮಾನ್ಯರ ಪರದಾಟ
Team Udayavani, Oct 10, 2020, 6:45 AM IST
ಸಾಂದರ್ಭಿಕ ಚಿತ್ರ
ಕೋಟ: ಸರಕಾರದ ಎಲ್ಲ ಯೋಜನೆಗಳನ್ನು ಒಂದೇ ಸೂರಿನಡಿ ಒದಗಿಸುವ ಸೇವಾ ಸಿಂಧು ಆನ್ಲೈನ್ ತಂತ್ರಾಂಶದಲ್ಲಿ ಒಂದು ತಿಂಗಳಿಂದ ತಾಂತ್ರಿಕ ಸಮಸ್ಯೆ ಎದುರಾಗಿದೆ. ಶುಲ್ಕ ಪಾವತಿಸುವ ವ್ಯಾಲೆಟ್ ಸ್ಥಗಿತಗೊಂಡು ಯಾವುದೇ ಅರ್ಜಿಗಳು ಸಲ್ಲಿಕೆಯಾಗುತ್ತಿಲ್ಲ. ಯಾವುದೇ ದಾಖಲೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಜನರಿಗೆ ತೊಂದರೆಯಾಗಿದೆ.
ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸುವಾಗ ಸರಕಾರ ನಿಗದಿಪಡಿಸಿದ ಶುಲ್ಕ ಪಾವತಿಸಬೇಕು. ಆದರೆ ಪ್ರಸ್ತುತ ಅರ್ಜಿದಾರನ ವಿವರಗಳನ್ನು ನಮೂದಿಸಲು ಮಾತ್ರ ಅವಕಾಶವಿದೆ. ಶುಲ್ಕ ಪಾವತಿಸುವ ವ್ಯಾಲೆಟ್ ಕಾರ್ಯಾಚರಿಸದಿರುವುದರಿಂದ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ.
ಕೆಲವು ಇಲಾಖೆಗಳು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವುದನ್ನು ಕಡ್ಡಾಯ ಮಾಡಿರುವುದರಿಂದ ಜನರ ಸಮಸ್ಯೆ ಮತ್ತಷ್ಟು ಸಮಸ್ಯೆ ಹೆಚ್ಚಿದೆ. ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಹಿರಿಯ ನಾಗರಿಕರ ಕಾರ್ಡ್, ವಿದ್ಯಾರ್ಥಿ ವೇತನ, ಆರೋಗ್ಯ ಸೇವೆ, ಹಿರಿಯ ನಾಗರಿಕರ ಸವಲತ್ತು ಮುಂತಾದ ಪ್ರಮುಖ ಸೇವೆಗಳನ್ನು ಪಡೆಯಲು ಕಚೇರಿಗಳಿಗೆ ಹಲವಾರು ಬಾರಿ ಅಲೆದಾಡಬೇಕಿದೆ.
ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡುತ್ತಿರುವುದರಿಂದ ಸೇವಾ ಕೇಂದ್ರದವರು ಕೂಡ ಸಾಕಷ್ಟು ಪ್ರಮಾಣದಲ್ಲಿ ಅರ್ಜಿಗಳನ್ನು ಪಡೆದು ಕಾಯ್ದಿರಿಸಿಕೊಂಡಿದ್ದಾರೆ. ಅವು ವಿಲೇವಾರಿಯಾಗಲು ಬಾಕಿ ಇವೆ. ಜನರು ತಮ್ಮ ಅರ್ಜಿಗಳ ಸ್ಥಿತಿಗತಿ ತಿಳಿಯಲು ಪ್ರತೀ ದಿನ ಸಾಮಾನ್ಯ ಸೇವಾಕೇಂದ್ರಗಳಿಗೆ ಭೇಟಿ ನೀಡುವಂತಹ ಸ್ಥಿತಿಯಿದೆ.
ಮತ್ತೆ ಮತ್ತೆ ಸರಕಾರಿ ಕಚೇರಿಗೆ ಅಲೆದಾಟ
ಸೇವಾ ಸಿಂಧು ಮೂಲಕ ದಾಖಲೆ ನೀಡಿಕೆ ಕ್ರಮ ಜಾರಿಗೆ ತಂದದ್ದರಿಂದ ಭ್ರಷ್ಟಾಚಾರ, ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವುದು ಕಡಿಮೆಯಾಗಿತ್ತು. ಈಗ ಅದು ಸ್ಥಗಿತಗೊಂಡಿದ್ದು, ಜನಸಾಮಾನ್ಯರು ಮತ್ತೆ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ಸಣ್ಣ-ಪುಟ್ಟ ದಾಖಲೆಗಳನ್ನು ಪಡೆಯುವುದಕ್ಕೂ ಪರದಾಡಬೇಕಿದೆ.
ಸಮಸ್ಯೆ ಸರಿಪಡಿಸಲಾಗುತ್ತಿದೆ
ತಾಂತ್ರಿಕ ಸಮಸ್ಯೆಯಿಂದ ಸೇವಾಸಿಂಧು ಕಾರ್ಯನಿರ್ವಹಣೆ ಸ್ಥಗಿತಗೊಂಡಿದೆ. ಈಗಾಗಲೇ ತಂತ್ರಾಂಶದ ದೋಷ ವನ್ನು ಗುರುತಿಸಿ ಸರಿಪಡಿಸುವ ಕಾರ್ಯದಲ್ಲಿ ತಜ್ಞರ ತಂಡ ತೊಡಗಿಕೊಂಡಿದ್ದು, ಶೀಘ್ರದಲ್ಲಿ ಸಮಸ್ಯೆ ಇತ್ಯರ್ಥವಾಗುವ
ಸಾಧ್ಯತೆ ಇದೆ.
ಎಸ್.ಪಿ. ಕುಲಕರ್ಣಿ, ಖಾಸಗಿ ಸೇವಾ ಕೇಂದ್ರಗಳ ರಾಜ್ಯ ಮುಖ್ಯಸ್ಥರು
ರಾಜೇಶ್ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು