ಶಂಕರನಾರಾಯಣ – ಸಿದ್ದಾಪುರ ಮುಖ್ಯ ರಸ್ತೆ; ಹೊಂಡಗಳಿಂದ ಸವಾರರಿಗೆ ಸಂಕಷ್ಟ


Team Udayavani, Aug 7, 2022, 12:43 PM IST

6

ಶಂಕರನಾರಾಯಣ: ಸಿದ್ದಾಪುರದಿಂದ ಶಂಕರನಾರಾಯಣ ಕಡೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆಯ ಅಲ್ಲಲ್ಲಿ ಹಲವೆಡೆಗಳಲ್ಲಿ ಬೃಹದಾಕಾರದ ಹೊಂಡ-ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ. ಇದು ಮುಖ್ಯ ರಸ್ತೆ ಆಗಿರುವುದರಿಂದ ಈ ಮಾರ್ಗದಲ್ಲಿ ಬಸ್‌ ಗಳ ಸಹಿತ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ.

ಉಡುಪಿಯಿಂದ ಸಿದ್ದಾಪುರ – ಹೊಸಂಗಡಿ ಮಾರ್ಗವಾಗಿ ತೀರ್ಥಹಳ್ಳಿ, ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮಾತ್ರವಲ್ಲದೆ ಸಿದ್ದಾಪುರ, ಹೊಸಂಗಡಿ ಭಾಗದಿಂದ ಹಾಲಾಡಿ, ಗೋಳಿಯಂಗಡಿ, ಹೆಬ್ರಿ ಕಡೆಗೂ ಇದೇ ಮಾರ್ಗ ಹತ್ತಿರವಾಗಿದೆ.

ಹಲವೆಡೆ ಹೊಂಡ

ಸಿದ್ದಾಪುರದಿಂದ ಶಂಕರ ನಾರಾಯಣ ದವರೆಗೆ ಸುಮಾರು 8 ಕಿ.ಮೀ. ದೂರವಿದ್ದು, ಈ ಪೈಕಿ ಹಲವೆಡೆಗಳಲ್ಲಿ ಹೊಂಡ ಗುಂಡಿಗಳು ಕಾಣಿಸಿಕೊಂಡಿವೆ. ಅದರಲ್ಲೂ ಕೆಲವೆಡೆಯಂತೂ ದೊಡ್ಡ – ದೊಡ್ಡ ಗುಂಡಿಗಳಿದ್ದು, ದ್ವಿಚಕ್ರ ವಾಹನ ಸವಾರರಂತೂ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುಂತಾಗಿದೆ.

ಹೊಂಡ ಮುಚ್ಚಲು ಆಗ್ರಹ

ಜಿಲ್ಲಾ ಮುಖ್ಯ ರಸ್ತೆಯಾಗಿದ್ದರೂ, ಈ ಬಾರಿ ಮಳೆಗಾಲಕ್ಕೂ ಮುನ್ನ ಹೊಂಡ- ಗುಂಡಿಗಳಿದ್ದ ಕಡೆಗಳಲ್ಲಿ ತೇಪೆಯೇ ಹಾಕಿಲ್ಲ. ಇದರಿಂದಾಗಿ ಆಗ ಸಣ್ಣ- ಸಣ್ಣ ಹೊಂಡಗಳಿದ್ದುದು ಈಗ ಬೃಹದಾಕಾರದ ಗುಂಡಿಗಳಾಗಿವೆ. ಈಗ ಮಳೆ ಕಡಿಮೆಯಾದ ಬಳಿಕವಾದರೂ ಹೊಂಡ- ಗುಂಡಿ ಗಳನ್ನು ಮುಚ್ಚುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೈಗೊಳ್ಳಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತೇಪೆ ಕಾರ್ಯ: ಕಳೆದ ಬಾರಿ ತೇಪೆ ಹಾಕಲಾದ ಕಡೆಗಳಲ್ಲಿ ಈ ಬಾರಿ ಹೊಂಡ ಬಿದ್ದಿಲ್ಲ. ಈ ಬಾರಿ ಬೇರೆ ಕಡೆಗಳಲ್ಲಿ ಹೊಂಡ ಬಿದ್ದಿರುವ ಬಗ್ಗೆ ಗಮನದಲ್ಲಿದ್ದು, ಮಳೆ ಕಡಿಮೆಯಾದ ಬಳಿಕ ತೇಪೆ ಕಾರ್ಯ ಕೈಗೊಳ್ಳಲಾಗುವುದು. – ದುರ್ಗಾದಾಸ್‌, ಸಹಾಯಕ ಕಾರ್ಯಪಾಲಕ ಅಭಿಯಂತ, ಲೋಕೋಪಯೋಗಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Byndoor ಪೊಲೀಸರನ್ನು ಸತಾಯಿಸಿದವನ ಬಂಧನ

Byndoor ಪೊಲೀಸರನ್ನು ಸತಾಯಿಸಿದವನ ಬಂಧನ

Kundapura ಕಣ್ತಪ್ಪಿನಿಂದ ಹಣ ಕಳೆದುಕೊಂಡು ದೂರು ನೀಡಿ ವಂಚನೆಗೀಡಾದ!

Kundapura ಕಣ್ತಪ್ಪಿನಿಂದ ಹಣ ಕಳೆದುಕೊಂಡು ದೂರು ನೀಡಿ ವಂಚನೆಗೀಡಾದ!

Fraud Case; ಕೋಟ, ಬ್ರಹ್ಮಾವರ: ಆನ್‌ಲೈನ್‌ ವ್ಯವಹಾರದ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ

Fraud Case; ಕೋಟ, ಬ್ರಹ್ಮಾವರ: ಆನ್‌ಲೈನ್‌ ವ್ಯವಹಾರದ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ

Kundapura; ಕ್ರೆಡಿಟ್‌ ಕಾರ್ಡ್‌ ವಿವರ ಪಡೆದು ಲಕ್ಷಾಂತರ ರೂ. ವಂಚನೆ

Kundapura; ಕ್ರೆಡಿಟ್‌ ಕಾರ್ಡ್‌ ವಿವರ ಪಡೆದು ಲಕ್ಷಾಂತರ ರೂ. ವಂಚನೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.