ಶಂಕರನಾರಾಯಣ : ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ : ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
Team Udayavani, Jun 30, 2022, 6:30 PM IST
ಶಂಕರನಾರಾಯಣ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಗ್ರಾಮದ ಕುಳ್ಳಂಜೆಯಲ್ಲಿ ನಡೆದಿದೆ.
ಶಂಕರನಾರಾಯಣ ಸರಕಾರಿ ಕಾಲೇಜು ನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮಾನಸ ಕುಲಾಲ (17) ಆತ್ಮಹತ್ಯೆ ಮಾಡಿಕೊಂಡಿರುವಾಕೆ .
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಳು ಬಳಿಕ ಮರು ಪರೀಕ್ಷೆ ಬರೆದಿದ್ದಳು ಆದರೆ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಳು ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಶಾಲೆ ಬಳಿಯ ನಿವಾಸಿ ಬಾಬ್ಬಣ್ಣ ಕುಲಾಲ ಅವರಿಗೆ ಇಬ್ಬರು ಮಕ್ಕಳಿದ್ದು ಒಬ್ಬ ಪುತ್ರ ಕೆಲವು ವರ್ಷದ ಹಿಂದೆ ಬ್ರೈನ್ ಟ್ಯೂಮ್ಮರ್ ನಿಂದ ಮೃತ ಪಟ್ಟಿದ್ದಾನೆ. ಇದೀಗ ಮಗಳ ಸಾವಿನಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.
ಬಾಬಣ್ಣ ಕುಲಾಲ ಅವರಿಗೆ ಅಪಘಾತವಾಗಿ ದುಡಿಯಲು ಕೂಡ ಆಗುತ್ತಿರಲಿಲ್ಲ. ತಾಯಿ ಅಕ್ಷರ ದಾಸೋಹ ಕೆಲಸ ಮಾಡಿ ಸಂಸಾರ ನಡೆಸುತಿದ್ದರು. ಮಾನಸ ಅವರ ವಿದ್ಯಾಭ್ಯಾಸಕ್ಕೆ ಒಬ್ಬರು ದಾನಿಗಳು ಸಹಾಯ ಮಾಡುತಿದ್ದರು. ಈ ಎಲ್ಲಾ ಹಿನ್ನಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶಂಕರನಾರಾಯಣ ಪೊಲೀಸ್ ರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್