ಶಾಸ್ತ್ರಿ ಸರ್ಕಲ್‌: ಹೈಮಾಸ್ಟ್‌ ಸ್ಥಳಾಂತರ ಆರಂಭ


Team Udayavani, Dec 3, 2022, 11:19 AM IST

ಶಾಸ್ತ್ರಿ ಸರ್ಕಲ್‌: ಹೈಮಾಸ್ಟ್‌ ಸ್ಥಳಾಂತರ ಆರಂಭ

ಕುಂದಾಪುರ: ವಿನೂತನ ಮಾದರಿಯಲ್ಲಿ ರಚನೆಯಾಗುತ್ತಿರುವ ಇಲ್ಲಿನ ಶಾಸಿŒ  ಸರ್ಕಲ್‌ ಕಾಮಗಾರಿಗೆ ಅಡ್ಡಿಯಾಗಿದ್ದ ಹೈ ಮಾಸ್ಟ್‌ ದೀಪವನ್ನು ತೆರವುಗೊಳಿಸಲಾಗಿದೆ.

ಶೀಘ್ರ ಕಂಚಿನ ಪುತ್ಥಳಿ ಬರಲಿದೆ:

ಮೈಸೂರು ಜಯಚಾಮರಾಜೇಂದ್ರ ವೃತ್ತದ ಮಾದರಿಯಲ್ಲಿ ವಿನ್ಯಾಸವಾಗಲಿದೆ ಎನ್ನಲಾಗಿದ್ದರೂ ಮೊತ್ತದ ಏರಿಕೆಯಾಗುವ ಭೀತಿಯಿಂದ ಈಗಿನ ರೂಪ ತಳೆಯ

ಲಾಗಿದೆ. ಈ ವೃತ್ತದ ಒಳಗೆ ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಕಂಚಿನ ಪುತ್ಥಳಿ ಬರಲಿದೆ. ಅದನ್ನು 15 ಲಕ್ಷ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು ಕೆಲವೇ ದಿನಗಳಲ್ಲಿ ಕುಂದಾಪುರಕ್ಕೆ ಆಗಮಿಸಲಿದೆ.

ಜನಪ್ರಿಯ ಸರ್ಕಲ್‌:

ಕುಂದಾಪುರ ಶಾಸ್ತ್ರಿ ಸರ್ಕಲ್‌, ಶಾಸ್ತ್ರಿ  ಪಾರ್ಕ್‌ ಹೆಸರು ವಾಸಿ. ಕುಂದಾಪುರಕ್ಕೆ ಎಲ್ಲಿಂದಲೇ ಬಂದರೂ ಬಸ್ಸಿನಿಂದಿಳಿಯಲು ಸೂಚನೆ ಕೊಡುವುದು ಇದೇ ವೃತ್ತವನ್ನು. ಯಾವುದೇ ಸ್ಥಳದ ಗುರುತು ಪರಿಚಯ ಹೇಳಬೇಕಾದರೂ ಶಾಸ್ತ್ರಿ ಸರ್ಕಲನ್ನು ಹೆಸರಿಸುತ್ತಾರೆ. ಇಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಕನ್‌ಸ್ಟ್ರಕ್ಷನ್ಸ್‌ ಕಂಪೆನಿ ಮೂಲಕ ನೀಡಿದ ಲಾಲ್‌ಬಹದ್ದೂರ್‌ ಶಾಸಿŒಗಳ

ಸುಂದರ ಪ್ರತಿಮೆಯಿತ್ತು. ಹಸುರು ಹುಲ್ಲಿನ ನಡುವೆ ಶಿಲೆಯ ಮೇಲೆ ಕೂರಿಸಲ್ಪಟ್ಟ ಶಾಸಿŒ ವಿಗ್ರಹವುಳ್ಳ ಸರ್ಕಲ್‌ ಈಚಿನ ದಿನಗಳಲ್ಲಿ ಬೀಡಾಡಿಗಳ ತಾಣವಾಗಿತ್ತು. ಹೊಸ ಪ್ರತಿಮೆ ಬರುವ ಹಿನ್ನೆಲೆಯಲ್ಲಿ ಇಲ್ಲಿದ್ದ ಹಳೆ  ವಿಗ್ರಹವನ್ನು ಈಗ ಫೆರಿ ಪಾರ್ಕ್‌ನಲ್ಲಿ ಇರಿಸಲಾಗಿದೆ.

ತೆರವು:

ಸರ್ಕಲ್‌ನ ಸುತ್ತ ಬೇಲಿ ಹಾಗೂ ಉದ್ಯಾನ ಮಾಡುವ ಚಿಂತನೆ ಪುರಸಭೆಗಿದೆ. ಇದಕ್ಕೆ ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿಯವರು ಅಳವಡಿಸಿದ ಬೃಹತ್‌ ದೀಪಗಳು ಅಡ್ಡಿಯಾಗಿದ್ದವು. ಅವುಗಳನ್ನು ತೆರವು ಮಾಡಲು ಈ ಹಿಂದೆಯೇ ಮನವಿ ಮಾಡಲಾಗಿತ್ತು. ವೆಚ್ಚ ಭರಿಸುವ ಭರವಸೆ ನೀಡಲಾಗಿತ್ತು. ಅದರಂತೆ ಈಗ ಹೈಮಾಸ್ಟ್‌ ದೀಪ ತೆರವಾಗಿದೆ. ಇನ್ನು ತಡೆಬೇಲಿ, ಪಾರ್ಕ್‌ ರಚನೆಯಾಗಲಿದೆ. ಇದರಿಂದ ಪ್ರತಿಮೆಗೆ ಸೂಕ್ತ ಭದ್ರತೆ ಇಲ್ಲ ಎನ್ನುವ ಕೊರಗು ಮರೆಯಾಗಲಿದೆ. ಶಾಸ್ತ್ರಿ ಸರ್ಕಲ್‌ನ ಸೌಂದರ್ಯ ಹೆಚ್ಚಿಸಬೇಕೆಂದು ಅನೇಕ ಸಮಯದಿಂದ ಬೇಡಿಕೆ ಇದೆ.  ಇದರ ಸೌಂದರ್ಯ ಕಂಡೇ ಸುಂದರ ಕುಂದಾಪುರ ಕಲ್ಪನೆಗೆ ಪೂರಕ ಮನಸ್ಥಿತಿ ನಿರ್ಮಾಣವಾಗುತ್ತದೆ ಎಂದು ಆಡಳಿತ ಇಂತಹ ಕೆಲಸಕ್ಕೆ ಕೈ ಹಾಕಿತ್ತು. ಆದರೆ ಆರಂಭ ವಿಘ್ನ ಎಂಬಂತೆ ಟೆಂಡರ್‌ ವಹಿಸಿಕೊಳ್ಳಲು ಯಾರೂ ಮುಂದಾಗದೇ ಬಳಿಕ ಎರಡನೆ ಟೆಂಡರ್‌, ಸಿಂಗಲ್‌ ಟೆಂಡರ್‌ ಎಂದೆಲ್ಲ ಆಗಿ ಕಾಮಗಾರಿ ಆರಂಭವಾದ ಬಳಿಕ ಆರೋಪಗಳ ಸರಮಾಲೆಯೇ ಬಂದು ಆಡಳಿತ ಅನೇಕ ಬಾರಿ ಮುಜುಗರಕ್ಕೆ ಒಳಗಾಗಿದೆ.

ತಾಂತ್ರಿಕವಾಗಿ ಇದು ಹೆದ್ದಾರಿ :

ಶಾಸ್ತ್ರಿ ಸರ್ಕಲ್‌ ಪುರಸಭೆ ವ್ಯಾಪ್ತಿಗೆ ಬರುತ್ತದೆ. ಅದರ ಉಸ್ತುವಾರಿ, ನಿರ್ವಹಣೆ, ನವೀಕರಣ ಎಲ್ಲವೂ ಪುರಸಭೆ ಪಾಲಿಗೆ. ಆದರೆ ಈವರೆಗೆ ನವೀಕರಣ ಕಾರ್ಯ ನಡೆದಿರಲಿಲ್ಲ. 10 ವರ್ಷಗಳ ಕಾಲ ಇಲ್ಲಿ ಹೆದ್ದಾರಿ ಕಾಮಗಾರಿ ಎಂದು ದಿನದೂಡಿದ ಪರಿಣಾಮ, ಕಾಮಗಾರಿಯ ವಸ್ತುಗಳನ್ನು ತಂದು ಹಾಕಿದ ಕಾರಣ, ರಸ್ತೆ ಅಗೆದು ಹೊಸ ರಸ್ತೆ ಮಾಡದೇ ಬಾಕಿಯಾದ ಕಾರಣ ವೃತ್ತದ ಆಧುನೀಕರಣ ಮಾಡಲು ಸಾಧ್ಯವಾಗಿರ‌ಲಿಲ್ಲ. ಕಳೆದ ವರ್ಷ ಎಪ್ರಿಲ್‌ವರೆಗೆ ಅಂದರೆ ಫ್ಲೈಓವರ್‌ ಕಾಮಗಾರಿ ಪೂರ್ಣವಾಗುವವರೆಗೆ ಈ ವೃತ್ತದ ಸಮೀಪ ಹಾದು ಹೋದ ರಸ್ತೆಯೇ ರಾಷ್ಟ್ರೀಯ ಹೆದ್ದಾರಿಯಾಗಿತ್ತು. ಈಗಲೂ ವೃತ್ತದ ಸಮೀಪ ಹೋದ ರಸ್ತೆ ಸರ್ವಿಸ್‌ ರಸ್ತೆಯಾದರೂ ಕಾಮಗಾರಿ ಪೂರ್ಣಗೊಂಡು ಪ್ರಾಧಿಕಾರಕ್ಕೆ ಹಸ್ತಾಂತರವಾಗದ ಕಾರಣ ತಾಂತ್ರಿಕವಾಗಿ ಇದು ಹೆದ್ದಾರಿಯೇ ಆಗಿದೆ.

ಹೈಮಾಸ್ಟ್‌ ದೀಪ ತೆರವಾದ ಬಳಿಕ ತಡೆಬೇಲಿ ರಚನೆ ಆಗಲಿದೆ. ಪ್ರತಿಮೆ ನಿರ್ಮಾಣ ಮುಗಿದ ಕೂಡಲೇ ಕುಂದಾಪುರಕ್ಕೆ ತಂದು ಮುಂದಿನ ಕಾರ್ಯ ನಡೆಯಲಿವೆ. -ಗಿರೀಶ್‌ ಜಿ.ಕೆ.,ಸ್ಥಾಯೀ ಸಮಿತಿ ಅಧ್ಯಕ್ಷ, ಪುರಸಭೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.