ಆಗಮಿಸುವವರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಆಗ್ರಹ
ಶಿರೂರು ಟೋಲ್ಗೇಟ್ಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ
Team Udayavani, May 15, 2020, 5:34 AM IST
ಬೈಂದೂರು: ಮುಂಬಯಿಯಿಂದ ಆಗಮಿಸುತ್ತಿರುವ ಕನ್ನಡಿಗರಿಗೆ ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಟೋಲ್ಗೇಟ್ನಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸದಿರುವ ಕುರಿತು ಮತ್ತು ತಪಾಸಣೆ ಗಂಟೆಗಟ್ಟಲೆ ವಿಳಂಬವಾಗುತ್ತಿರುವ ಕುರಿತು ಮುಂಬಯಿ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇಂದು ಶಿರೂರು ಟೋಲ್ಗೇಟ್ ಗಡಿಭಾಗಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಶಿರೂರು ಗಡಿಭಾಗದಲ್ಲಿ ಬರುವವರಿಗೆ ಯಾವುದೇ ತೊಂದರೆಯಾಗಬಾರದು ಅತ್ಯಂತ ಸಮರ್ಪಕ ಮಾಹಿತಿ ಮತ್ತು ಕ್ಷಿಪ್ರ ತಪಾಸಣೆ ಮೂಲಕ ಕ್ರಮ ಕೈಗೊಳ್ಳಬೇಕು ಸಮರ್ಪಕ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿದ್ದರು.
ಇಲ್ಲಿನ ಅವ್ಯವಸ್ಥೆ ಕುರಿತು ಸ್ಪಂದಿಸಿದ ಮುಂಬಯಿಯಲ್ಲಿರುವ ಶಿರೂರಿನ ಹೊಸ್ಮನೆ ಶ್ರೀನಿವಾಸ ಶೆಟ್ಟಿಯವರು ಪ್ರತ್ಯೇಕ ಬಿಸ್ಕೆಟ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಇದರ ಧನ ಸಹಾಯದ ಚೆಕ್ನ್ನು ಶಾಸಕರ ಮೂಲಕ ಹಸ್ತಾಂತರಿಸಲಾಯಿತು.
ಬೈಂದೂರು, ಕುಂದಾಪುರಕ್ಕೆ ಪ್ರತ್ಯೇಕ ವಾಹನ ವ್ಯವಸ್ಥೆ
ಪ್ರಸ್ತುತ ಎಲ್ಲ ತಪಾಸಣೆಯಾದ ಬಳಿಕ ಪೊಲೀಸ್ ಬೆಂಗಾವಲಿನಲ್ಲಿ ಕ್ವಾರಂಟೈನ್ ಕೇಂದ್ರಕ್ಕೆ ತೆರಳಲು ಎರಡು ಗಂಟೆ ಕಾಯಬೇಕಾಗಿದೆ. ಶಿರೂರಿನಿಂದ ಕಾರ್ಕಳದವರೆಗೆ ಒಂದೇ ಬಾರಿಗೆ ತೆರಳಬೇಕಾಗುತ್ತಿದೆ. ಹೀಗಾಗಿ ತಪಾಸಣೆಯಾದ ಬಳಿಕ ಕುಂದಾಪುರ ಮತ್ತು ಬೈಂದೂರು ತಾಲೂಕಿನವರಿಗೆ ಪ್ರತ್ಯೇಕ ಪೊಲೀಸ್ ವಾಹನ ನಿಯೋಜಿಸಿ ಕಳುಹಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ