ಶಿರೂರು ಟೋಲ್‌ ಪ್ಲಾಜಾ ದುರಂತ: ಚಾಲಕನ ವಿರುದ್ಧ ಕೇಸು ದಾಖಲು


Team Udayavani, Jul 22, 2022, 7:15 AM IST

ಶಿರೂರು ಟೋಲ್‌ ಪ್ಲಾಜಾ ದುರಂತ: ಚಾಲಕನ ವಿರುದ್ಧ ಕೇಸು ದಾಖಲು

ಕುಂದಾಪುರ: ಶಿರೂರು ಟೋಲ್‌ ಪ್ಲಾಜಾದ ಕಂಬಕ್ಕೆ ಆ್ಯಂಬುಲೆನ್ಸ್‌ ಢಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಅವಘಢದಲ್ಲಿ ಗಾಯಗೊಂಡ ಐವರ ಪೈಕಿ ಚಾಲಕ ರೋಶನ್‌ ರೋಡ್ರಿಗಸ್‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಬಾಕಿ ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಆ್ಯಂಬುಲೆನ್ಸ್‌ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.

ಹೊನ್ನಾವರದಿಂದ ರೋಗಿ ಯೊಬ್ಬರನ್ನು ಬುಧವಾರ ಸಂಜೆ ತುರ್ತು ಚಿಕಿತ್ಸೆಗೆಂದು ಉಡುಪಿಗೆ ಕರೆತರುತ್ತಿದ್ದಾಗ ಶಿರೂರಿನ ಟೋಲ್‌ಗೇಟಿನ ಕಂಬಕ್ಕೆ ಢಿಕ್ಕಿ ಹೊಡೆದು ಆ್ಯಂಬುಲೆನ್ಸ್‌ ಪಲ್ಟಿಯಾಗಿ, ಅದರೊಳಗಿದ್ದವರು ರಸ್ತೆಗೆ ಎಸೆಯಲ್ಪಟ್ಟು, ರೋಗಿ ಸಹಿತ ನಾಲ್ವರು ಸಾವನ್ನಪ್ಪಿದ್ದರು. ಮೃತಪಟ್ಟವರೆಲ್ಲರೂ ಹೊನ್ನಾವರ ನಿವಾಸಿಗಳಾಗಿದ್ದರು.

ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಗೀತಾ, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಗಣೇಶ್‌, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಶಾಂಕ್‌, ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಟೋಲ್‌ ಸಿಬಂದಿ ಸಂಬಾಜೆ ಘೋರ್ಪಡೆ ಚೇತರಿಸಿಕೊಳ್ಳುತ್ತಿದ್ದಾರೆ.

ಚಾಲಕನ ಮೇಲೆ ಕೇಸು :

ಅಪಘಾತಕ್ಕೆ ಸಂಬಂಧಿಸಿದಂತೆ ಟೋಲ್‌ ಸಿಬಂದಿ ದೀಪಕ್‌ ಶೆಟ್ಟಿ ಎನ್ನುವವರು ನೀಡಿದ ದೂರಿನಂತೆ ಆ್ಯಂಬುಲೆನ್ಸ್‌ ಚಾಲಕ ರೋಶನ್‌ ರೋಡ್ರಿಗಸ್‌ ವಿರುದ್ಧ ಕೇಸು ದಾಖಲಾಗಿದೆ. ಚಾಲಕನ ವೇಗದ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅವಘಢ ಸಂಭವಿಸಿದ್ದು, ಅದರಂತೆ ಬೈಂದೂರು ಠಾಣೆಯಲ್ಲಿ ಸೆಕ್ಷನ್‌ 279, 338, 304 ರಡಿ ಪ್ರಕರಣ ದಾಖಲಾಗಿದೆ.

ಟೋಲ್‌ ಸಿಬಂದಿ ನಿರ್ಲಕ್ಷ್ಯವೂ ಕಾರಣವಾಯಿತೇ? :

ನಾಲ್ವರ ಸಾವಿಗೆ ಕಾರಣವಾದ ಆ್ಯಂಬುಲೆನ್ಸ್‌ ದುರಂತಕ್ಕೆ ಮೇಲ್ನೋಟಕ್ಕೆ ಚಾಲಕನ ವೇಗದ ಚಾಲನೆ ಕಾರಣ ಎನ್ನಲಾಗಿದ್ದರೂ, ಟೋಲ್‌ಗೇಟ್‌ನ ಸಿಬಂದಿಯ ನಿರ್ಲಕ್ಷ್ಯವೂ ಕಾರಣವಾಯಿತೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಟೋಲ್‌ಗೇಟ್‌ನ ತುರ್ತು ನಿರ್ಗಮನ (ಆ್ಯಂಬುಲೆನ್ಸ್‌, ಗಣ್ಯರ ವಾಹನ ತೆರಳಲು ಇರುವ ಗೇಟು) ಗೇಟಿನ ಟ್ರ್ಯಾಕ್‌ನಲ್ಲಿ ದನವೊಂದು ಮಲಗಿತ್ತು. ಇದಲ್ಲದೆ ತುರ್ತು ನಿರ್ಗಮನ ಗೇಟ್‌ನಲ್ಲಿ ಎರಡೆರಡು ಕಡೆಗಳಲ್ಲಿ ಬ್ಯಾರಿಕೇಡ್‌ ಇಟ್ಟಿರುವುದು ಯಾಕೆ? ಸುಮಾರು 500 ಮೀ. ದೂರದವರೆಗೆ ಆ್ಯಂಬುಲೆನ್ಸ್‌ ಸೈರನ್‌ ಶಬ್ದ ಕೇಳುವುದು ಸಾಮಾನ್ಯವಾಗಿದ್ದರೂ, ಆ್ಯಂಬುಲೆನ್ಸ್‌ ಅಷ್ಟೊಂದು ಹತ್ತಿರ ಬರುವವರೆಗೆ ಕಾದದ್ದು ಯಾಕೆ? ಎನ್ನುವ ಪ್ರಶ್ನೆಗಳೆಲ್ಲ ಸಾರ್ವಜನಿಕರು ಕೇಳುತ್ತಿದ್ದಾರೆ.

ಎಬಿಎಸ್‌ ಬ್ರೇಕ್‌ ಇರಲಿಲ್ಲವೇ?:

ಚಾಲಕ ಬ್ರೇಕ್‌ ಹಾಕಿದ್ದ ನಿಯಂತ್ರಣಕ್ಕೆ ಸಿಗದ ಕಾರಣ ಹ್ಯಾಂಡ್‌ ಬ್ರೇಕ್‌ ಹಾಕಿದ್ದ. ಕಾಂಕ್ರೀಟ್‌ ರಸ್ತೆಯಲ್ಲಿ ನೀರು ನಿಂತ ಕಾರಣ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. 3 ವರ್ಷ ಹಿಂದಿನ ಟಾಟಾ ವಿಂಗರ್‌ ಆ್ಯಂಬುಲೆನ್ಸ್‌ ಇದಾಗಿದ್ದು, ಎಬಿಎಸ್‌ ಬ್ರೇಕ್‌ ಇರಬೇಕು. ಬಿಎಎಸ್‌ -4 ವಾಹನಗಳಲ್ಲಿ ಎಬಿಎಸ್‌ ಬ್ರೇಕ್‌ ಇರುತ್ತದೆ. ಅದು ವಾಹನವನ್ನು ನಿಯಂತ್ರಣಕ್ಕೆ ತರುತ್ತದೆ. ಆದರೆ ಇಲ್ಲಿ ಆ್ಯಂಬುಲೆನ್ಸ್‌ ವಾಹನ ಬ್ರೇಕ್‌ ಒತ್ತಿದಾಗ ನಿಲ್ಲದೆ, ಪಲ್ಟಿಯಾಗಿದೆ. ಹಾಗಾಗಿ ಎಬಿಎಸ್‌ ಬ್ರೇಕ್‌ ಇರಲಿಲ್ಲವೇ? ಎನ್ನುವ ಪ್ರಶ್ನೆ ಉದ್ಭವಿಸಿದೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

8-JPh

LS Polls: ನಾನು ಮಾಡಿದ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ : ಕೆ.ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.