

Team Udayavani, Jun 13, 2024, 12:00 AM IST
ಸಿದ್ದಾಪುರ: ಹೊಸಂಗಡಿ ಕೆಪಿಸಿ ಕಾಲನಿಯಲ್ಲಿ ವಾಸವಾಗಿರುವ ರಂಗಸ್ವಾಮಿ ಪತ್ನಿ ಸವಿತಾ (40) ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಲ್ಯದಿಂದಲೇ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶಿವಮೊಗ್ಗದ ಖಾಸಗಿಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಪ್ರಸ್ತುತ ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೆಪಿಸಿ ಕಾಲನಿಯ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕೆಲಸ ಮಾಡುತ್ತಿದ್ದರು.
ಮಾನಸಿಕ ಕಾಯಿಲೆ ಗುಣವಾಗದ ಹಿನ್ನೆಲೆಯಲ್ಲಿ ಮನನೊಂದು ಜೂ.10ರ ರಾತ್ರಿ ಕೆಪಿಸಿ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಂದೆ ಹೇಮಚಂದ್ರ ಭದ್ರಾವತಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
You seem to have an Ad Blocker on.
To continue reading, please turn it off or whitelist Udayavani.