ಕಾಡು ಪ್ರಾಣಿಗಳ ಉಪಟಳ : ಗದ್ದೆಗೆ “ಸೋಲಾರ್‌ ಬೇಲಿ’

ಬೆಳೆ ರಕ್ಷಣೆಗೆ ಪರಿಹಾರ ಕಂಡುಕೊಂಡ ಅಮಾಸೆಬೈಲು ಭಾಗದ ರೈತರು

Team Udayavani, Oct 13, 2020, 5:35 AM IST

KUD-Solar

ಮರೂರು ಭಾಗದಲ್ಲಿ ಕೃಷಿಗೆ ಸೋಲಾರ ಬೇಲಿ ಅಳವಡಿಕೆ.

ಕುಂದಾಪುರ: ಭತ್ತದ ಗದ್ದೆಗೆ ಕಾಡು ಹಂದಿ, ಜಿಂಕೆ, ಕಡವೆ, ನವಿಲು, ಕಾಡುಕೋಣಗಳ ಉಪಟಳದಿಂದಾಗಿ ಕುಂದಾಪುರ, ಬೈಂದೂರು ಭಾಗದ ಅನೇಕ ಕಡೆಗಳಲ್ಲಿ ರೈತರು ಹೈರಾಣಾಗಿ ಹೋಗಿದ್ದಾರೆ. ಕಾಡು ಪ್ರಾಣಿಗಳಿಂದ ಬೆಳೆ ರಕ್ಷಣೆಯೇ ರೈತರಿಗೆ ಸವಾಲು. ಅದಕ್ಕೀಗ ಅಮಾಸೆಬೈಲು, ಹಾಲಾಡಿ ಮತ್ತಿತರ ಭಾಗದ ರೈತರು ಕಡಿಮೆ ವೆಚ್ಚದಲ್ಲಿ ಪರಿಹಾರ ಹುಡುಕಿದ್ದು, ಇದರಲ್ಲಿ ಯಶ ಕಂಡಿದ್ದಾರೆ. ಭತ್ತದ ಗದ್ದೆಗಳ ಸುತ್ತ ಸೋಲಾರ್‌ ಬೇಲಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಕಾಡು ಪ್ರಾಣಿಗಳು ಬರದಂತೆ ರಕ್ಷಣೆ ಮಾಡುತ್ತಿದ್ದಾರೆ.

ಕುಂದಾಪುರ, ಬೈಂದೂರು ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನ ಪ್ರದೇಶಗಳಾದ ಅಮಾಸೆಬೈಲು, ಬೆಳ್ವೆ, ಹೆಂಗವಳ್ಳಿ, ನಡಂಬೂರು, ಹೊಸಂಗಡಿ, ಮಚ್ಚಟ್ಟು, ಶೇಡಿಮನೆ, ಮಡಾಮಕ್ಕಿ, ಕೊಲ್ಲೂರು, ಜಡ್ಕಲ್‌, ಮುದೂರು, ಹಳ್ಳಿಹೊಳೆ, ಕಮಲಶಿಲೆ, ಯಡಮೊಗೆ, ಉಳ್ಳೂರು -74, ಆಜ್ರಿ, ಕೊಡ್ಲಾಡಿ, ಮತ್ತಿತರ ಭಾಗಗಳಲ್ಲಿ ಪ್ರತಿ ವರ್ಷವೂ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಯನ್ನು ರಕ್ಷಿಸಲು ಹರಸಾಹಸ ಪಡುತ್ತಾರೆ. ಈ ಭಾಗದ ರೈತರು ಏನೇ ಪ್ರಯೋಗ ಮಾಡಿದರೂ ಕಾಡು ಪ್ರಾಣಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ಗದ್ದೆಗಳಿಗೆ ಸೋಲಾರ್‌ ಬೇಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಎಲ್ಲೆಲ್ಲ ಅಳವಡಿಕೆ?
ಹಾಲಾಡಿ, ಅಮಾಸೆಬೈಲು, ಬೆಳ್ವೆ, ಜಡ್ಡಿನಗದ್ದೆ, ತೊಂಭತ್ತು, ಕುಳ್ಳುಂಜೆ, ರಟ್ಟಾಡಿ, ಮರೂರು, ಶೇಡಿಮನೆ ಸೇರಿದಂತೆ ಈ ಭಾಗದ ಸುಮಾರು 35 ಮಂದಿ ತಮ್ಮ ಗದ್ದೆಗಳಿಗೆ ಈ ಸೋಲಾರ್‌ ಬೇಲಿಯನ್ನು ಅಳವಡಿಸಿದ್ದಾರೆ. ಅದರಲ್ಲೂ ಅಮಾಸೆಬೈಲು ಭಾಗದಲ್ಲೇ 15 ಕ್ಕೂ ಹೆಚ್ಚು ಮಂದಿ ಈ ಸೋಲಾರ್‌ ಬೇಲಿಯನ್ನು ಅಳವಡಿಕೆ ಮಾಡಿಕೊಂಡಿದ್ದಾರೆ.

ಕೃಷಿಗೆ ಯಾವುದೇ ಹಾನಿಯಾಗಿಲ್ಲ
ಹಿಂದೆ ಕೃಷಿಗೆ ಕಾಡುಪ್ರಾಣಿಗಳು ನಿರಂತರವಾಗಿ ದಾಂಗುಡಿಯಿಡುತ್ತಿದ್ದವು. ಆದರೆ ಈ ಸಲ ಸೋಲಾರ್‌ ಬೇಲಿ ಅಳವಡಿಸಿದ್ದೇವೆ. ಈ ಬಾರಿ ಯಾವುದೇ ಪ್ರಾಣಿಗಳಿಂದ ಕೃಷಿಗೆ ಹಾನಿಯಾಗಿಲ್ಲ ಎನ್ನುವುದಾಗಿ ಜಡ್ಡಿನಗದ್ದೆಯ ಕೃಷಿಕರಾದ ಗಿರಿಜಾ ಹೇಳುತ್ತಾರೆ.

ವಿದ್ಯುತ್‌ ಆಧಾರಿತ ಬೇಲಿಗಿಂತ ಸೌರ ಶಕ್ತಿ ಆಧಾರಿತ ಬೇಲಿ ಅತ್ಯಂತ ಸುರಕ್ಷಿತ ಹಾಗೂ ಮಿತ ವ್ಯಯಿ. ರೈತರ ಹೊಸ ಆಶಾಕಿರಣವಾಗಿದೆ. ಅರಣ್ಯ ಇಲಾಖೆಯಿಂದಲೂ ಸೋಲಾರ್‌ ಐಬೆಕ್ಸ್‌ ಬೇಲಿಗೆ ಹೆಚ್ಚು ಆದ್ಯತೆ ಸಿಗುತ್ತಿದೆ. ಕುಂದಾಪುರದ ಗ್ರಾಮೀಣ ಭಾಗದ ರೈತರು ಸೌರ ಶಕ್ತಿ ಆಧಾರಿತ ಸೋಲಾರ್‌ ಬೇಲಿ ಅಳವಡಿಕೆಗೆ ಮುಂದಾಗುತ್ತಿದ್ದಾರೆ ಎನ್ನುತ್ತಾರೆ ಸೆಲ್ಕೋ ಸಂಸ್ಥೆಯ ಸೀನಿಯರ್‌ ಮ್ಯಾನೇಜರ್‌ ಶೇಖರ್‌ ಶೆಟ್ಟಿ.

ಕಡಿಮೆ ವೆಚ್ಚ
ಗದ್ದೆಗಳಿಗೆ ವಿದ್ಯುತ್‌ ತಂತಿ ಅಳವಡಿಕೆ ಅಪಾಯಕಾರಿ ಹಾಗೂ ದುಬಾರಿಯೂ ಹೌದು. ಆದರೆ ಸೋಲಾರ್‌ ಬೇಲಿಯಿಂದ ಯಾವುದೇ ಅಪಾಯವಿಲ್ಲ. ಶಾಕ್‌ ತಗುಲಿ, ಹೆದರಿ ಓಡುತ್ತವೆ. ಇದರಿಂದ ಪ್ರಾಣಿಗಳು ಅಥವಾ ಯಾರ ಜೀವಕ್ಕೆ ಏನು ಅಪಾಯ ಇರುವುದಿಲ್ಲ. ವಿದ್ಯುತ್‌ ತಂತಿಗಳಿಗೆ ಆದರೆ ಕಲ್ಲಿನ ಅಥವಾ ಕಾಂಕ್ರೀಟ್‌ ಕಂಬಗಳು ಬೇಕಾಗುತ್ತವೆ. ಆದರೆ ಗದ್ದೆಯ ಸುತ್ತ ಅಡಿಕೆ ಮರದ ಕಂಬಗಳನ್ನು ದೂರ – ದೂರ ಹಾಕಿ, ಈ ಸೋಲಾರ್‌ ತಂತಿ ಎಳೆಯಲಾಗುತ್ತದೆ. ಹೆಚ್ಚೆಂದರೆ 10 -15 ಸಾವಿರ ರೂ. ವೆಚ್ಚದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸೆಲ್ಕೋ ಸೋಲಾರ್‌ ಸಂಸ್ಥೆಯ ಸಹಕಾರದೊಂದಿಗೆ ಸೋಲಾರ್‌ ತಂತಿಯನ್ನು ಅಳವಡಿಸಿಕೊಳ್ಳಬಹುದು. ಗದ್ದೆ ಕಾಯಲು ನಿರ್ಮಿಸಿದ ಹಳ್ಳಿ ಮನೆಗಳ ಮೇಲೆ ಸೋಲಾರ್‌ನ ಪ್ಯಾನಲ್‌ ಅಳವಡಿಸಬಹುದು. ಅದರ ಬ್ಯಾಟರಿಯನ್ನು ಹಳ್ಳಿಮನೆಯೊಳಗೆ ಇಡಬಹುದು.

35 ಮಂದಿ ಅಳವಡಿಕೆ
ಕೃಷಿಯಲ್ಲಿ ನಷ್ಟವಾಗಲು ಕಾಡು ಪ್ರಾಣಿಗಳ ಹಾವಳಿ ಕೂಡ ಪ್ರಮುಖವಾದುದು. ಇದಕ್ಕಾಗಿ ಕಡಿಮೆ ಖರ್ಚಿನಲ್ಲಿ ಗದ್ದೆಗೆ ಭದ್ರತೆ ಕೊಡಲು ಈ ಸೋಲಾರ್‌ ಬೇಲಿ ಅಳವಡಿಕೆಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯು ಸೆಲ್ಕೋ ಸೋಲಾರ್‌ ಸಂಸ್ಥೆಯ ಮೂಲಕ ರೈತರಿಗೆ ನೆರವಾಗುತ್ತಿದೆ. ಇದಕ್ಕಾಗಿ ಯೋಜನೆಯ ಫಲಾನುಭವಿಗಳಿಗೆ ಸಾಲವನ್ನು ನೀಡಲಾಗುತ್ತಿದೆ. ಈಗಾಗಲೇ 35 ರೈತರು ಸೋಲಾರ್‌ ಬೇಲಿಯನ್ನು ಅಳವಡಿಸಿಕೊಂಡಿದ್ದಾರೆ. ಮತ್ತಷ್ಟು ಮಂದಿ ಉತ್ಸುಕರಾಗಿದ್ದಾರೆ.
-ಚೇತನ್‌ ಕುಮಾರ್‌, ಕೃಷಿ ಅಧಿಕಾರಿ, ಧ. ಗ್ರಾ. ಯೋಜನೆ ಕುಂದಾಪುರ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.