ಎಸೆಸೆಲ್ಸಿ ಪರೀಕ್ಷೆ ನಾಳೆ ಆರಂಭ

ಬೈಂದೂರು, ಕುಂದಾಪುರದಲ್ಲಿ 4,980 ವಿದ್ಯಾರ್ಥಿಗಳು

Team Udayavani, Mar 27, 2022, 10:59 AM IST

sslc

ಕುಂದಾಪುರ: ಬೈಂದೂರು, ಕುಂದಾಪುರ ತಾಲೂಕಲ್ಲಿ ಮಾ. 28ರಿಂದ ಆರಂಭವಾಗಲಿರುವ ಎಸೆಸೆಲ್ಸಿ ಪರೀಕ್ಷೆಗೆ ಈಗಾಗಲೇ ಬಹುತೇಕ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಉಭಯ ತಾ|ನಲ್ಲಿ ಒಟ್ಟು 4,980 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕುಂದಾಪುರದಲ್ಲಿ 2,762 ಮಂದಿ ವಿದ್ಯಾರ್ಥಿಗಳು (13 ಪುನರಾವರ್ತಿತ) ಹಾಗೂ ಬೈಂದೂರಲ್ಲಿ 2,218 ವಿದ್ಯಾರ್ಥಿಗಳು (ಇಬ್ಬರು ಪುನರಾವರ್ತಿತ) ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ.

ಕುಂದಾಪುರ ತಾ|: 9 ಪರೀಕ್ಷಾ ಕೇಂದ್ರ

ಕುಂದಾಪುರ ತಾಲೂಕಿನಲ್ಲಿ ಕುಂದಾಪುರದ ಜೂನಿಯರ್‌ ಕಾಲೇಜು, ಸಂತ ಮೇರಿ ಪ್ರೌಢಶಾಲೆ, ವೆಂಕಟರಮಣ ಪ್ರೌಢಶಾಲೆ, ಕೋಟೇಶ್ವರ ಪಬ್ಲಿಕ್‌ ಶಾಲೆ, ಸರಸ್ವತಿ ವಿದ್ಯಾಲಯ ಪ.ಪೂ. ಕಾಲೇಜು, ಬಿದ್ಕಲ್‌ಕಟ್ಟೆ ಪಬ್ಲಿಕ್‌ ಶಾಲೆ, ಸಿದ್ದಾಪುರ ಸರಕಾರಿ ಪ್ರೌಢಶಾಲೆ ಹಾಗೂ ಶಂಕರನಾರಾಯಣ ಪ.ಪೂ. ಕಾಲೇಜಿನ ಪ್ರೌಢಶಾಲೆ ವಿಭಾಗ ಸೇರಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೈಂದೂರು ತಾ|: 9 ಪರೀಕ್ಷಾ ಕೇಂದ್ರ

ಬೈಂದೂರು ತಾ|ನಲ್ಲಿ ಬೈಂದೂರಿನ ಜೂ. ಕಾಲೇಜು, ರತ್ತುಬಾೖ ಜನತಾ ಪ್ರೌಢಶಾಲೆ, ಉಪ್ಪುಂದ ಪ.ಪೂ. ಕಾಲೇಜಿನ ಪ್ರೌಢಶಾಲೆ ವಿಭಾಗ, ಕಂಬದಕೋಣೆ ಸರಕಾರಿ ಪ.ಪೂ. ಕಾಲೇಜು, ನಾವುಂದ ಸರಕಾರಿ ಪ.ಪೂ. ಕಾಲೇಜು, ತಲ್ಲೂರು ಪ್ರೌಢಶಾಲೆ, ನೆಂಪು ಪಬ್ಲಿಕ್‌ ಶಾಲೆ, ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ ಹಾಗೂ ಕೊಲ್ಲೂರು ಸೇರಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ, ಎಸೆಸೆಲ್ಸಿ ಪರೀಕ್ಷಾ ನೋಡಲ್‌ ಅಧಿಕಾರಿ ಕರುಣಾಕರ ಶೆಟ್ಟಿ ಅವರು ಶನಿವಾರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿದರು.

ಮನೆಗೆ ತೆರಳಿ ಹಾಲ್‌ ಟಿಕೆಟ್‌ ವಿತರಣೆ

ಕುಂದಾಪುರ ಹಾಗೂ ಬೈಂದೂರು ಎರಡೂ ವಲಯದಲ್ಲಿಯೂ ಹಾಲ್‌ ಟಿಕೆಟ್‌ ಸಿಗದವರಿಗೆ ಮುಖ್ಯ ಶಿಕ್ಷಕರು, ಶಿಕ್ಷಕರು ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಹಾಲ್‌ ಟಿಕೆಟ್‌ ವಿತರಿಸಿದ್ದಾರೆ. ಉಭಯ ವಲಯಗಳಲ್ಲಿಯೂ ಈ ಬಾರಿಯ ಫಲಿತಾಂಶ ವೃದ್ಧಿಗೆ ಮನೆ ಭೇಟಿ, ವಿಷಯವಾರು ಕಾರ್ಯಾಗಾರ, ತಜ್ಞರಿಂದ ತರಬೇತಿ, ಪ್ರತೀದಿನ ಸಂಜೆ ವಿಶೇಷ ತರಗತಿ, ಮಾರ್ಗದರ್ಶಿ ಪುಸ್ತಕಗಳನ್ನು ನೀಡಿರುವುದು ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

2 ಕಡೆ ವಾಹನ ವ್ಯವಸ್ಥೆ

ಬೈಂದೂರು ತಾಲೂಕಿನಲ್ಲಿ ಕಂಬದಕೋಣೆ ಪರೀಕ್ಷಾ ಕೇಂದ್ರದಿಂದ ಬೋಳಂಬಳ್ಳಿಗೆ 35 ಮಕ್ಕಳಿಗಾಗಿ ಬೈಂದೂರು ರೋಟರಿ ಕ್ಲಬ್‌ ಸಹಕಾರ, ನಾವುಂದದಿಂದ ಬ್ಯಾಟ್ಯಾ ಯಿನಿಗೆ ನಾವುಂದ ಲಯನ್ಸ್‌ ಕ್ಲಬ್‌ನಿಂದ ವಾಹನ ವ್ಯವಸ್ಥೆ ಮಾಡಲಾಗಿದೆ. ಉಳಿದೆಡೆಗಳಲ್ಲಿ ಬಸ್‌ ಅಥವಾ ಇತರ ವಾಹನಗಳ ಸೌಕರ್ಯ ಇರಲಿದೆ.

ಸಿದ್ಧತೆ ಪೂರ್ಣ

ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಿ, ಸಿದ್ಧಗೊಳಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಪರೀಕ್ಷೆ ಬರೆಯಬಹುದು. ಯಾವುದೇ ಆತಂಕ ಬೇಡ. ಅರುಣ್‌ ಕುಮಾರ್‌ ಶೆಟ್ಟಿ, ಕುಂದಾಪುರ ಹಾಗೂ ಜಿ.ಎಂ. ಮುಂದಿನಮನಿ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.