ಕ್ವಾರಂಟೈನ್ ಮಾಹಿತಿಗೆ ಕಂಟ್ರೋಲ್ ರೂಂ ಆರಂಭ
Team Udayavani, May 21, 2020, 5:42 AM IST
ಕುಂದಾಪುರ: ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿಗೆ ಶಾಸಕರ ಸೂಚನೆಯಂತೆ ಇಲ್ಲಿನ ಪುರಸಭೆ ಕಟ್ಟಡದ ಮೊದಲ ಮಹಡಿಯಲ್ಲಿ ಬುಧವಾರದಿಂದ ಕಂಟ್ರೋಲ್ ರೂಂ ಆರಂಭವಾಗಿದೆ.
ಕ್ವಾರಂಟೈನ್ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿ, ದೂರು ಇತ್ಯಾದಿಗಳನ್ನು ಇಲ್ಲಿಗೆ ಕರೆ ಮಾಡುವ ಮೂಲಕ ಪಡೆಯಬಹುದು. ದೂರು ನೀಡಿದಾಗ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗುತ್ತದೆ.
ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್ ಕೇಂದ್ರದಲ್ಲಿ ಅನೇಕ ಸಮಸ್ಯೆಗಳಾಗುತ್ತಿದ್ದವು. ಆಹಾರ ತಡವಾಗಿ ತಲುಪುತ್ತಿತ್ತು. ನೀರಿನ ವ್ಯವಸ್ಥೆ, ವಿದ್ಯುತ್, ಊಟ ಶುಚಿತ್ವದ ವ್ಯವಸ್ಥೆ ಕುರಿತು ದೂರುಗಳಿದ್ದವು. ಇದಕ್ಕಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಕೇಂದ್ರ ತೆರೆಯಲು ಸೂಚಿಸಿದ್ದು ಅದರಂತೆ ಪುರಸಭೆ ಕೊಠಡಿಯೊಂದನ್ನು ಸಜ್ಜುಗೊಳಿಸಿ ನೀಡಿದೆ. ಇಲ್ಲಿ ಶಾಸಕರೇ ಸಿಬಂದಿನೇಮಿಸಿ ಇರಿಸಿದ್ದಾರೆ. ಶಾಸಕರು ಬುಧವಾರ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೊರರಾಜ್ಯಗಳಿಂದ ಬರುವವರು ಮಾಹಿತಿಗೆ, ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರು ದೂರುಗಳಿಗೆ ಈ ಕೇಂದ್ರವನ್ನು ಸಂಪರ್ಕಿಸಬಹುದು. ಪ್ರಸ್ತುತ ಸೇವಾಸಿಂಧು ಆ್ಯಪ್ ಮೂಲಕ ಹೊರರಾಜ್ಯಗಳಿಂದ ಬರುವ ಪ್ರಕ್ರಿಯೆ ತಡೆ ಹಿಡಿಯಲಾಗಿದೆ. ಕೆಲವು ದಿನಗಳಲ್ಲಿ ಮತ್ತೆ ಚಾಲನೆ ದೊರೆಯಲಿದೆ. ಈಗಾಗಲೇ ತಾಲೂಕಿನಲ್ಲಿ 44 ಕ್ವಾರಂಟೈನ್ ಕೇಂದ್ರಗಳಿವೆ. ಕ್ವಾರಂಟೈನ್ ಮಾಹಿತಿಗೆ ಸಂಪರ್ಕಿಸ ಬೇಕಾದ ಸಂಖ್ಯೆಗಳು: 7204018041, 7204018071,7619568072.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ