ಶಿಲಾಯುಗ ಸಂಸ್ಕೃತಿಯ ಕಲ್ಲಿನ ಆಯುಧ ಪತ್ತೆ
ಶಿರ್ವ: ಉಡುಪಿ ಜಿಲ್ಲೆ
Team Udayavani, Jun 9, 2020, 5:03 AM IST
ಕುಂದಾಪುರ: ತಾಲೂಕಿನ ಇಡೂರು- ಕುಂಜಾಡಿ ಸಮೀಪದ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದ ಒಳಭಾಗ ದಲ್ಲಿರುವ ಒಂದು ದೊಡ್ಡ ಪಾರೆಯಲ್ಲಿ ರವಿವಾರ ಸೂಕ್ಷ್ಮ ಶಿಲಾಯುಗ ಸಂಸ್ಕೃತಿಯ ಕಲ್ಲಿನ ಆಯುಧಗಳು ಪತ್ತೆಯಾಗಿವೆ ಎಂದು ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ| ಟಿ.ಮುರುಗೇಶಿ ತಿಳಿಸಿದ್ದಾರೆ.
ಈ ನಿವೇಶನಕ್ಕೆ ಸಮೀಪದಲ್ಲಿಯೇ ಇರುವ ಅವಲಕ್ಕಿಪಾರೆಯಲ್ಲಿ ಆದಿ ಕಾಲದ ಕುಟ್ಟು ಚಿತ್ರಗಳು ಕಂಡುಬಂದಿವೆ. ಈ ಆಯುಧೋಪಕರಣಗಳಲ್ಲಿ ಕೊರೆಯುಳಿಗಳು, ಬ್ಲೇಡ್ಗಳು, ಫ್ಲೂಟೆಡ್ ಕೋರ್ಗಳು, ಹೆರೆಗತ್ತಿಗಳು ಹಾಗೂ ಬಾಣದ ಮೊನೆಗಳು ಕಂಡುಬಂದಿವೆ.
ಇವು ದ.ಕ. ಜಿಲ್ಲೆಯ ಉಪ್ಪಿನಂಗಡಿ ಮತ್ತು ಮಾಣಿಗಳಲ್ಲಿ ದೊರೆತ ಕಲ್ಲಿನ ಆಯುಧಗಳನ್ನು ಹೋಲುತ್ತವೆ. ಈ ಸಂಶೋಧನೆಯಲ್ಲಿ ಕೊಲ್ಲೂರಿನ ಮುರಳೀಧರ ಹೆಗಡೆ ಅವರು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ