ಕೊಲ್ಲೂರು ಪರಿಸರದಲ್ಲಿ ಶಿಲಾಯುಗದ ಅವಶೇಷ ಪತ್ತೆ
ಮೂಕಾಸುರನ ಬೆಟ್ಟದ ಬುಡದಲ್ಲಿ ನಿಲ್ಸ್ಕಲ್ ಸ್ಮಾರಕ ಶಿಲೆ, ಬಾವಿ ಇನ್ನಿತರ ಕುರುಹು
Team Udayavani, Jul 20, 2020, 1:11 PM IST
ಉಡುಪಿ: ಕೊಲ್ಲೂರಿನ ಮೂಕಾಂಬಿಕೆಯ ದೇವಾಲಯಕ್ಕೆ ಸಮೀಪದಲ್ಲಿರುವ ಮೂಕಾಸುರನ ಬೆಟ್ಟದ ಬುಡದಲ್ಲಿ, ಬೃಹತ್ ಶಿಲಾಯುಗ ಕಾಲದ ನಿಲ್ಸ್ಕಲ್ ಸ್ಮಾರಕಶಿಲೆ, ಕಲ್ಗುಳಿ, ಮುರಕಲ್ಲಿನಲ್ಲಿ ಕೊರೆದು ಮಾಡಿರುವ ಬಾವಿ ಮತ್ತು ಮಡಕೆಯ ಅವಶೇಷಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯಲ್ಲಿ ಪತ್ತೆಯಾಗಿವೆ ಎಂದು ಶಿರ್ವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ ಪೊ›| ಟಿ. ಮುರುಗೇಶಿ ತಿಳಿಸಿದ್ದಾರೆ.
ಕೊಲ್ಲೂರಿನ ಬೃಹತ್ ಶಿಲಾಯುಗ ನಿವೇಶನದ ಶೋಧ, ಕೊಲ್ಲೂರು ಮತ್ತು ಕೊಲ್ಲೂರಿನ ಮೂಕಾಂಬಿಕೆಯ ಪ್ರಾಚೀನತೆಯನ್ನು ಸುಮಾರು ಕ್ರಿ.ಪೂ. 1000 ವರ್ಷಗಳಷ್ಟು ಪ್ರಾಚೀನ ಪರಂಪರೆ ಎಂಬುದನ್ನು ದೃಡೀಕರಿಸಲಿದೆ. ದೇವಿ ಪುರಾಣದ ಪ್ರಕಾರ ಮೂಕಾಸುರನನ್ನು ದೇವಿ ಸಂಹರಿಸಿ ಮೂಕಾಂಬಿಕೆ ಎಂಬ ಅಭಿದಾನವನ್ನು ಪಡೆದುಕೊಂಡು ಕೊಲ್ಲೂರಿನಲ್ಲಿ ನೆಲೆಸಿದ್ದಾಳೆ. ಬಹುಶಃ ಮೂಕಾಸುರನ ಸಮಾಧಿಯ ಸಮೀಪ ಆತನ ಸ್ಮಾರಕವಾಗಿ ಈ ಶಿಲೆಯನ್ನು ನಿಲ್ಲಿಸಿರಬಹುದು.
ಕೊಲ್ಲೂರಿಗೆ ಸಮೀಪದಲ್ಲಿರುವ ಹೊಸನಗರ ತಾಲೂಕಿನ ಬೈಸೆ, ನಿಲ್ಸ್ಕಲ್ ಮತ್ತು ಹೆರಗಲ್ನಲ್ಲಿ ಸುಮಾರು 40 ನಿಲ್ಸ್ಕಲ್ ಮಾದರಿ ಸ್ಮಾರಕಶಿಲೆಗಳು ವಿಶೇಷವಾಗಿ ಕಂಡುಬಂದಿರುವುದನ್ನು ವಿದ್ವಾಂಸರು ಈಗಾಗಲೇ ವರದಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಸುಭಾಸ್ನಗರದ ಬಗ್ಗಡಿಕಲ್ ಸಮೀಪ 4, ನಿಟ್ಟೂರಿನ ಅಡ್ಕದಕಟ್ಟೆಯಲ್ಲಿ 1 ಹಾಗೂ ಬುದ್ಧನಜೆಡ್ಡುವಿನಲ್ಲಿ 1, ಕೊಡಗಿನ ಅರಸಿಣಗುಪ್ಪೆಯಲ್ಲಿ 1 ಹಾಗೂ ಹಾಸನದ ಅರಸೀಕೆರೆಯಲ್ಲಿ 3 ನಿಲ್ಸ್ಕಲ್ ಮಾದರಿ ಸ್ಮಾರಕಶಿಲೆಗಳನ್ನು ಸಂಶೋಧಿಸಿ ವರದಿ ಮಾಡಿದ್ದೇನೆ. ಉಡುಪಿ ಜಿಲ್ಲೆಯಲ್ಲಿ ಇದು 7ನೇ ಶೋಧವಾಗಿದೆ ಎಂದವರು ತಿಳಿಸಿದ್ದಾರೆ.
ನಿಲ್ಸ್ಕಲ್ ಎಂದರೆ ಏನು?
ಬೃಹತ್ ಶಿಲಾಯುಗ ಕಾಲದ ಸಮಾಧಿಗಳ ಸಮೀಪದಲ್ಲಿ ಮೃತ ವ್ಯಕ್ತಿಗಳ ನೆನಪಿಗಾಗಿ ನೆಟ್ಟಿರುವ ಸ್ಮಾರಕಶಿಲೆಗಳಿವು. ಸುಮಾರು 1.5 ಮೀ.ನಿಂದ 3 ಮೀ. ಎತ್ತರದವರೆಗಿನ ಕಲ್ಲುಗಳನ್ನು ಬಹುತೇಕ ಪೂರ್ವದ ದಿಕ್ಕಿಗೆ ಸ್ವಲ್ಪ ವಾಲಿದಂತೆ ನಿಲ್ಲಿಸಲಾಗಿದೆ. ನಿಲ್ಸ್ಕಲ್ ಹೆಸರೇ ಸೂಚಿಸುವಂತೆ ಇವು ನಿಲ್ಲಿಸಿದ ಕಲ್ಲು. ಇವು ಸುಮಾರು 2.10 ಮೀ. ಎತ್ತರವಾಗಿದ್ದು, ಬುಡದಲ್ಲಿ 0.65 ಮೀ., ತುದಿಯಲ್ಲಿ 0.55 ಮೀ. ಅಗಲವಾಗಿದೆ. ಗ್ರಾನೈಟ್ ಶಿಲೆಯನ್ನೇ ಈ ನಿಲ್ಸ್ಕಲ್ಗೆ ಬಳಸಲಾಗಿದೆ. ಬೃಹತ್ ಶಿಲಾಯುಗದ ಜನ ದಕ್ಷಿಣ ಭಾರತದಾದ್ಯಂತ ಗ್ರಾನೈಟ್ ಶಿಲೆಯನ್ನೇ ಸಮಾಧಿಗಳ ರಚನೆಗಾಗಿ ಬಳಸಿಕೊಂಡಿರುವುದು ಸಂಸ್ಕೃತಿಯ ವೈಶಿಷ್ಟ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್