35 ಕೋ.ರೂ. ವೆಚ್ಚದಲ್ಲಿ ಸುಬ್ಬರಡಿ ವೆಂಟೆಡ್‌ ಡ್ಯಾಂ ಕಾಮಗಾರಿ


Team Udayavani, Jan 18, 2021, 2:40 AM IST

35 ಕೋ.ರೂ. ವೆಚ್ಚದಲ್ಲಿ  ಸುಬ್ಬರಡಿ ವೆಂಟೆಡ್‌ ಡ್ಯಾಂ ಕಾಮಗಾರಿ

ಉಪ್ಪುಂದ: ಆರು ಗ್ರಾಮಗಳ ಜನರ ಮಹತ್ವಾಕಾಂಕ್ಷೆಯ ಯೋಜನೆಯಾದ ಸುಬ್ಬರಡಿ ವೆಂಟೆಡ್‌ ಡ್ಯಾಂ ಕಾಮಗಾರಿ ಭರದಿಂದ ಸಾಗುತ್ತಿದೆ.

ನೂರಾರು ವರ್ಷಗಳಿಂದ ಉಪ್ಪು ನೀರಿನ ದಾಂಗುಡಿಯಿಂದ ಹೈ ರಾಣಾಗಿರುವ ಉಪ್ಪುಂದ, ಬಿಜೂರು, ಯಡ್ತರೆ, ತಗ್ಗರ್ಸೆ, ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ ಸುಮನಾವತಿ ನದಿಗೆ ಅಡ್ಡಲಾಗಿ ಪಡುವರಿ ಗ್ರಾಮದ ಸುಬ್ಬರಡಿ ಬಳಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಮಹತ್ವಾಕಾಂಕ್ಷೆಯ ವೆಂಟೆಡ್‌ ಡ್ಯಾಂ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮುಂದಿನಮಳೆಗಾಲದೊಳಗೆ ಪೂರ್ಣಗೊಳ್ಳುವ ಭರವಸೆ ಇದೆ.ಈ ಭಾಗದ ಸಾವಿರಾರು ನಾಗರಿಕರ ಹಲವು ದಶಕಗಳ ಕನಸಾಗಿದ್ದ ಯೋಜನೆಗೆ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ.  ಮಾಧುಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದರು. ಕಾಮಗಾರಿ ಆರಂಭಗೊಂಡಿದ್ದು ಈಗಾಗಲೇ ಸುಮಾರು 2 ಕಿ.ಮೀ. ದೂರದ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣ ಗೊಂಡಿದ್ದು, ಸುಮನಾವತಿ ನದಿಯ ನೀರಿನ ಹರಿವಿಗೆ ಅಡ್ಡಲಾಗಿ ಮಣ್ಣು ಹಾಕುವ ಕಾರ್ಯ ಭರದಿಂದ ಸಾಗುತ್ತಿದೆ. ಮಳೆಗಾಲದಲ್ಲಿ ಈ ನದಿಯಲ್ಲಿ ನೀರಿನ ಹರಿವು ಅ ಧಿಕವಾಗಿರುವುದರಿಂದ ಮಳೆಗಾಲದೊಳಗೆ ಕಿಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ.

ಉಪ್ಪು ನೀರಿಗೆ ಮುಕ್ತಿ :

ವೆಂಟೆಡ್‌ ಡ್ಯಾಂ ನಿರ್ಮಾಣದಿಂದ ಸಿಹಿ ನೀರು ಸಂಗ್ರಹಗೊಳ್ಳುವುದರಿಂದ ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹೀಗಾಗಿ ಇಲ್ಲಿನ ನಿವಾಸಿಗಳು ಹಲವಾರು ವರ್ಷಗಳಿಂದ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲು ಮನವಿ

ಸಲ್ಲಿಸುತ್ತಾ ಬಂದಿದ್ದರು. ಇಲ್ಲಿನ ನಾಗರಿಕರ ಬಹುಕಾಲದ ಬೇಡಿಕೆಗೆ ಸ್ಪಂ ದಿಸಿದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಸುಬ್ಬರಡಿ ಬಳಿ ವೆಂಟೆಡ್‌ ಡ್ಯಾಂ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿದ್ದರು.

ಈ ಯೋಜನೆಯ ಸಾಕಾರದಿಂದಾಗಿ ಉಪ್ಪು ನೀರು ತಡೆಗೆ ಸಹಾಯಕವಾಗಿದ್ದು, ನದಿ ಪಾತ್ರ ನಿವಾಸಿಗಳ ಉಪ್ಪು ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಕ್ಕಂತಾಗುತ್ತದೆ.

ರೈತರಲ್ಲಿ ಮೂಡಿದ ಹರ್ಷ :

ಈ ಯೋಜನೆಯ ಕಾಮಗಾರಿಯಿಂದಾಗಿ ನದಿ ತೀರದ ಜನರಲ್ಲಿ ಸಂತಸ ಮನಮಾಡಿದೆ. ಸುಮಾರು 300 ಎಕರೆಗೂ ಅಧಿ ಕ ಕೃಷಿ ಭೂಮಿಯು ಉಪ್ಪು ನೀರಿನ ಹಾವಳಿಯಿಂದಾಗಿ ಹಡಿಲು ಬೀಳಿಸಲಾಗಿದೆ. ನೂರಾರು ವರ್ಷಗಳಿಂದ ಸುಮನಾವತಿ ನದಿಯ ಉಪ್ಪು ನೀರಿನಿಂದಾಗಿ ನದಿ ಭಾಗದ ಪಡುವರಿ, ತಗ್ಗರ್ಸೆ, ಬಿಜೂರು, ಯಡ್ತರೆ, ಉಪ್ಪುಂದ, ಬೈಂದೂರು ಗ್ರಾಮದ ನಿವಾಸಿಗಳು ಕಂಗೆಟ್ಟಿದ್ದರು. ಪ್ರತಿ ವರ್ಷ ಉಪ್ಪು ನೀರು ಕೃಷಿ ಭೂಮಿಗೆ ನುಗ್ಗಿ ಕಷ್ಟಪಟ್ಟು ಬೆಳೆದ ಬೆಳೆ ಸಂಪೂರ್ಣ ಹಾನಿಗೀಡಾಗಿ ನಷ್ಟ ಉಂಟಾಗುತ್ತಿತ್ತು. ಇನ್ನು ಮುಂದಿನ ದಿನಗಳಲ್ಲಿ ಸಿಹಿ ನೀರಿನ ಸಂಗ್ರಹದಿಂದ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗಲಿದೆ.

ಎರಡು ಕಿಂಡಿ ಅಣೆಕಟ್ಟು  :

ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು 200ಮೀ. ಉದ್ದ ಹೊಂದಿದ್ದು ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತದೆ. ಇದೇ ಅನುದಾನದಲ್ಲಿ ಉಪ್ಪು ನೀರು ತಡೆಯುವ ಮತ್ತೂಂದು ಕಿಂಡಿ ಅಣೆಕಟ್ಟು ಪಡುವರಿ ಗ್ರಾಮದ ಬೆಸ್ಕೂರಿನಲ್ಲಿ ಮಾಡಲಾಗುತ್ತದೆ. ಇದರ ನಿರ್ಮಾಣದ ಬಳಿಕ ನದಿಯಲ್ಲಿ ಹಿನ್ನೀರಿನ ಶೇಖರಣೆ ಅ ಧಿಕವಾಗಿ ನದಿ ದಂಡೆ ಕುಸಿಯವ ಸಾಧ್ಯತೆಯಿರುವುದರಿಂದ ನದಿಯ ಇಕ್ಕೆಲಗಳಲ್ಲಿ ಸುಮಾರು 2-3 ಕಿ.ಮೀ ದೂರದವರೆಗೆ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ.

 

ಸುಬ್ಬರಡಿ ಬಳಿ ವೆಂಟೆಡ್‌ ಡ್ಯಾಂ ನಿರ್ಮಿಸಬೇಕು ಎಂಬುದು ಸಾವಿರಾರು ನಾಗರಿಕರ ಕನಸಾಗಿತ್ತು. ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಇವರ ವಿಶೇಷ ಪ್ರಯತ್ನ ದಿಂದಾಗಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆಯಾಗಿ ಕೆಲಸ ನಡೆಯುತ್ತಿರುವುದು ಸಂತಸ ತಂದಿದೆ.- ಉದಯ ದೇವಾಡಿಗ ಯಡ್ತರೆ,  ಸ್ಥಳೀಯರು 

 

ಈ ಭಾಗದ ಜನತೆಯ ಪರವಾಗಿ ನನ್ನ ವಿಶೇಷ ಪ್ರಯತ್ನದಿಂದಾಗಿ   ಮುಖ್ಯಮಂತ್ರಿ ಹಾಗೂ ಸಂಸದರು ಅನುದಾನ ಬಿಡುಗಡೆ ಮಾಡಿದ್ದಾರೆ. ಡ್ಯಾಂನಿಂದಾಗಿ ಈ ಭಾಗದಲ್ಲಿ ಸಿಹಿ ನೀರಿನ ಅಂತರ್ಜಲ ಹೆಚ್ಚಾಗಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ.  -ಬಿ.ಎಂ.ಸುಕುಮಾರ್‌  ಶೆಟ್ಟಿ ಬೈಂದೂರು ಶಾಸಕರು

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.