ಹದಗೆಟ್ಟ ಸಬ್ಲಾಡಿ ರಸ್ತೆ ಅಭಿವೃದ್ಧಿಗೆ ಕೂಡಿ ಬಾರದ ಕಾಲ
Team Udayavani, Jan 23, 2021, 3:00 AM IST
ಕುಂದಾಪುರ: ತಲ್ಲೂರಿನಿಂದ ಸಬ್ಲಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಕಳೆದ ಹಲವು ವರ್ಷಗಳಿಂದ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಹೊಂಡಮಯವಾಗಿದ್ದು, ಇನ್ನೂ ಈ ರಸ್ತೆಯ ಅಭಿವೃದ್ಧಿಗೆ ಕಾಲ ಕೂಡಿ ಬಂದಿಲ್ಲ. ಈ ರಸ್ತೆಗೆ ದಶಕದಿಂದ ಹಿಂದೆ ಡಾಮರು ಕಾಮಗಾರಿಯಾಗಿದ್ದು, ಆ ಬಳಿಕ ಇಲ್ಲಿಯವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.
ಹಟ್ಟಿಯಂಗಡಿ ಗ್ರಾ.ಪಂ. ಹಾಗೂ ತಲ್ಲೂರು ಗ್ರಾ.ಪಂ.ಗಳೆರಡರ ವ್ಯಾಪ್ತಿಗೂ ಸಂಬಂಧಪಡುವ ರಸ್ತೆ ಇದಾಗಿದ್ದು, ತಲ್ಲೂರು ಗ್ರಾ.ಪಂ. ಕಚೇರಿ ಬಳಿಯಿಂದ ಸುಮಾರು 2 ಕಿ.ಮೀ. ಅಂತರವಿದೆ. ಅನೇಕ ಕಡೆಗಳಲ್ಲಿ ರಸ್ತೆಯ ಮಧ್ಯೆ ಡಾಮರೆಲ್ಲ ಕಿತ್ತು ಹೋಗಿ, ಗುಂಡಿಗಳಾಗಿದ್ದು, ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.
ದಶಕದ ಹಿಂದೆ ಕಾಮಗಾರಿ :
ಈ ಸಬ್ಲಾಡಿ ರಸ್ತೆ ಈ ಹಿಂದೆ ಅಭಿವೃದ್ಧಿಯಾಗಿದ್ದು ಸುಮಾರು 10 ವರ್ಷಗಳ ಹಿಂದೆ. ಆಗ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಈ ರಸ್ತೆಯ ಡಾಮರು ಹಾಗೂ ಕೆಲವೆಡೆಗಳಲ್ಲಿ ಕಾಂಕ್ರೀಟ್ ಕಾಮ ಗಾ ರಿಗೆ 1 ಕೋ.ರೂ. ಅನುದಾನ ಮಂಜೂರಾಗಿತ್ತು. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆಯಲ್ಲಿ ಸುಮಾರು 200-250 ಮೀ.ವರೆಗೆ ಕಾಂಕ್ರೀಟ್, ಉಳಿದೆಡೆಗಳಲ್ಲಿ ಆಗ ಡಾಮರು ಕಾಮಗಾರಿ ಮಾಡಲಾಗಿತ್ತು.
100ಕ್ಕೂ ಮಿಕ್ಕಿ ಮನೆ :
ತಲ್ಲೂರು ಪಂಚಾಯತ್ ಕಚೇರಿ ಬಳಿಯಿಂದ ಸಬ್ಲಾಡಿಯವರೆಗೆ, ಅಲ್ಲಿಂದ ಪಾರ್ಥಿಕಟ್ಟೆ ಮಾರ್ಗಕ್ಕೂ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಸಬ್ಲಾಡಿ ಭಾಗದಲ್ಲಿ 100 ಕ್ಕೂ ಮಿಕ್ಕಿ ಮನೆಗಳಿದ್ದು, ಅವರೆಲ್ಲ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಪ್ರತಿ ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ.
ಸಬ್ಲಾಡಿ ರಸ್ತೆಯು ಅಭಿವೃದ್ಧಿಯು ದುರಸ್ತಿಯಾಗದೇ ಹಲವು ವರ್ಷಗಳೇ ಕಳೆದಿವೆ. 10 ವರ್ಷಗಳ ಹಿಂದೆ ಈ ರಸ್ತೆ ಅಭಿವೃದ್ಧಿಪಡಿಸಲಾಗಿತ್ತು. ಆ ಬಳಿಕ ಇಲ್ಲಿಯವರೆಗೆ ಯಾವುದೇ ಡಾಮರು ಅಥವಾ ಕಾಂಕ್ರೀಟ್ ಕಾಮಗಾರಿ ಆಗಿಲ್ಲ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಮಂಜೂರಾಗಲಿ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. – ಸಂತೋಷ್ ಶೆಟ್ಟಿ ಸಬ್ಲಾಡಿ, ಸ್ಥಳೀಯ ಗ್ರಾ.ಪಂ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ