ಕಬ್ಬು ಫಸಲು ಕಡಿಮೆ; ಭಾರೀ ಬೇಡಿಕೆ ನಿರೀಕ್ಷೆ

ಗಣೇಶ ಚತುರ್ಥಿ ಹಬ್ಬಕ್ಕೆ ಸಿದ್ಧತೆ

Team Udayavani, Aug 24, 2022, 2:42 PM IST

3

ಹೆಮ್ಮಾಡಿ: ಸಕಲ ಸಂಕಷ್ಟಗಳ ನಿವಾರಕ, ಪ್ರಥಮ ಪೂಜಿತ, ವಿಘ್ನವಿನಾಶಕನಾದ ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದ್ದು, ಈಗಾಗಲೇ ಎಲ್ಲೆಡೆ ಭರದ ಸಿದ್ಧತೆಗಳು ನಡೆಯುತ್ತಿವೆ. ಚೌತಿ ಆಚರಣೆಯಲ್ಲಿ ಕಬ್ಬಿಗೆ ವಿಶೇಷ ಪ್ರಾಶಸ್ತ್ಯ. ಹೆಮ್ಮಾಡಿಯ ಬುಗುರಿಕಡು ಎಂಬಲ್ಲಿ ಪ್ರತೀ ವರ್ಷ ಚೌತಿ ಚೌತಿ, ತುಳಸಿ ಹಬ್ಬಕ್ಕೆಂದೇ ಕಬ್ಬು ಬೆಳೆಯುತ್ತಾರೆ. ಆದರೆ ಈ ಬಾರಿ ಫಸಲು ಕಡಿಮೆಯಿದ್ದು, ಬೆಳೆದ ಕಬ್ಬಿಗೆ ಭಾರೀ ಬೇಡಿಕೆ ಬರುವ ನಿರೀಕ್ಷೆ ಬೆಳೆಗಾರರದ್ದಾಗಿದೆ.

ಕಳೆದೆರಡು ವರ್ಷ ಗಳಿಂದ ಕೊರೊನಾ ಕಾರಣದಿಂದ ಗಣೇಶ ಚತುರ್ಥಿ ಹಬ್ಬದ ಅದ್ದೂರಿ ಆಚರಣೆ ಯಿಲ್ಲದ ಕಾರಣ, ಕಬ್ಬು ಬೆಳೆದವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿತ್ತು. ಆ ಕಾರಣದಿಂದ ಹೆಮ್ಮಾಡಿ ಗ್ರಾಮದ ಸಂತೋಷನಗರ ಸಮೀಪದ ಬುಗುರಿಕಡು ಎಂಬಲ್ಲಿ ಈ ಬಾರಿ ಕೆಲವರು ಕಬ್ಬು ಬೆಳೆಯುವುದನ್ನೇ ಬಿಟ್ಟಿದ್ದಾರೆ.

ಒಬ್ಬರು ಮಾತ್ರ

ಬುಗುರಿಕಡುವಿನಲ್ಲಿ ಪ್ರತೀ ವರ್ಷ ಗೌರಿ ಹಬ್ಬ, ಗಣೇಶ ಚತುರ್ಥಿ, ನವರಾತ್ರಿ, ದೀಪಾವಳಿ, ಕೋಡಿ ಹಬ್ಬ ಹೀಗೆ ಹಬ್ಬಗಳಿಗೆಂದೇ ಕಬ್ಬು ಬೆಳೆಯುವ ಸಾಕಷ್ಟು ಮಂದಿ ರೈತರಿದ್ದರು. ಕಳೆದ 7-8 ವರ್ಷಗಳಿಂದ ಕನಿಷ್ಠ 10 ಮಂದಿ ಕಬ್ಬು ಬೆಳೆಗಾರರಿದ್ದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಕಾಲದಲ್ಲಿ ಇಲ್ಲಿ 15ಕ್ಕೂ ಹೆಚ್ಚು ಮಂದಿ ಕಬ್ಬು ಬೆಳೆಗಾರರಿದ್ದರು. ಕೊರೊನಾ, ನೀರಿನ ಸಮಸ್ಯೆ, ಕೂಲಿ ಕೆಲಸಕ್ಕೆ ಜನ ಸಿಗದಿರುವ ಕಾರಣಗಳಿಂದಾಗಿ ಈ ಬಾರಿ ಇಲ್ಲಿ ಬೆಳೆದಿರುವುದು ಶೀನ ಪೂಜಾರಿ ಅವರು ಮಾತ್ರ. ಇವರು ಕಳೆದ 40 ವರ್ಷಗಳಿಂದ ಕಬ್ಬು ಬೆಳೆಯುತ್ತಿದ್ದು, ಈ ಬಾರಿಯೂ 1 ಎಕರೆ ಕೃಷಿ ಪ್ರದೇಶದಲ್ಲಿ ಕಬ್ಬು ಬೆಳೆದಿದ್ದಾರೆ. ಇವರು ಕೂಡ ಹಿಂದಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಬೆಳೆದಿದ್ದು, ಗಂಗೊಳ್ಳಿ, ಕುಂದಾಪುರ, ಬೈಂದೂರು, ಹೆಮ್ಮಾಡಿ ಸಹಿತ ಆಸುಪಾಸಿನ ಊರುಗಳಿಂದ ಈಗಾಗಲೇ ಬೇಡಿಕೆ ಬಂದಿದೆ.

ಕರಾವಳಿಯಲ್ಲಿ ಕಡಿಮೆ

ಸಾಮಾನ್ಯವಾಗಿ ಕಬ್ಬು ಬೆಳೆಯಲು ಆರಂಭಿಸುವುದು ಫೆಬ್ರವರಿಯಲ್ಲಿ. ಆಗ ನೆಟ್ಟು, ಆ ಬಳಿಕ ಆಗಸ್ಟ್‌ನಿಂದ ಕಟಾವು ಆರಂಭವಾಗುತ್ತದೆ. ಮೊದಲ 3-4 ತಿಂಗಳು ಕಬ್ಬು ಬೆಳೆಗೆ ಹೆಚ್ಚು ನೀರು ಬೇಕಾಗುತ್ತದೆ. ಆದರೆ ಕರಾವಳಿ ಭಾಗದಲ್ಲಿ ಮಾರ್ಚ್‌, ಎಪ್ರಿಲ್‌, ಮೇಯಲ್ಲಿ ನೀರಿನ ಅಭಾವ ಹೆಚ್ಚಿರುವುದರಿಂದ ಕಷ್ಟವಾಗುತ್ತದೆ. ಆ ಕಾರಣಕ್ಕೆ ಇಲ್ಲೆಲ್ಲ ಕಬ್ಬು ಬೆಳೆಯುವುದು ಕಡಿಮೆ. ಇದಲ್ಲದೆ ಕಳೆದೆರಡು ವರ್ಷಗಳಿಂದ ಕಬ್ಬು ಫಸಲು ಬಂದಿದ್ದರೂ, ಅಷ್ಟೊಂದು ಬೇಡಿಕೆ ಇರಲಿಲ್ಲ. ಈ ಬಾರಿಯು ಅದೇ ರೀತಿಯಾದರೆ ನಷ್ಟವೇ ಹೆಚ್ಚು ಎಂದು, ಬಹುತೇಕ ರೈತರು ಕಬ್ಬು ಬೆಳೆಗೆ ಮುಂದಾಗಿಲ್ಲ.

ಬೇಡಿಕೆ ಹೆಚ್ಚಿದೆ… ಈ ಬಾರಿ ಕಳೆದ ಬಾರಿಗಿಂತ ಸ್ವಲ್ಪ ಕಡಿಮೆ ಬೆಳೆದಿದ್ದೇನೆ. ಈ ಸಲ ಉತ್ತಮ ವಾತಾವರಣ ಇದ್ದುದದರಿಂದ ಫಸಲು ಉತ್ತಮ ಬಂದಿದೆ. ಈ ಬಾರಿ ರೋಗಭಾದೆ ಅಷ್ಟೊಂದು ಇರಲಿಲ್ಲ. ಹಿಂದಿನ ವರ್ಷಕ್ಕಿಂತ ಈ ಬಾರಿ ಹೆಚ್ಚು ಬೇಡಿಕೆ ನಿರೀಕ್ಷೆಯಿದೆ. ಈಗಾಗಲೇ ಹಲವೆಡೆಗಳಿಂದ ಬೇಡಿಕೆ ಬಂದಿದೆ. ಇನ್ನೀಗ ಕಟಾವು ಆರಂಭಿಸಬೇಕು. – ಶೀನ ಪೂಜಾರಿ ಬುಗುರಿಕಡು, ಕಬ್ಬು ಬೆಳೆಗಾರರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.