ಎಸ್ಎಸ್ಎಲ್ ಸಿ ಸಾಧಕರು: 624 ಅಂಕ ಗಳಿಸಿದ ಉಪ್ಪುಂದದ ಸುರಭಿ ಎಸ್ ಶೆಟ್ಟಿ
Team Udayavani, Aug 10, 2020, 4:42 PM IST
ಕುಂದಾಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯದಲ್ಲಿ ರ್ಯಾಂಕ್ ಪಡೆದಿರುವ ಉಡುಪಿ ಜಿಲ್ಲೆಯ ಕಿರಿಮಂಜೇಶ್ವರದ ಸಂದೀಪನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುರಭಿ ಎಸ್ ಶೆಟ್ಟಿ ತನ್ನ ಉದಯವಾಣಿ ಜೊತೆಗೆ ಮಾತನಾಡಿದ್ದು, 625 ಅಂಕವನ್ನು ನಿರೀಕ್ಷಿಸಿದ್ದೆ. ಆದರೆ 624 ಅಂಕ ಬಂದಿದೆ. ಆದರೂ ಸಂತೋಷವಾಗಿದೆ ಎಂದಿದ್ದಾರೆ.
ಪ್ರತಿದಿನ ಆರರಿಂದ ಎಂಟು ಗಂಟೆ ಅಭ್ಯಾಸ ಮಾಡುತ್ತಿದ್ದೆ. ಪೋಷಕರು ಮತ್ತು ಶಿಕ್ಷಕರು ಉತ್ತಮ ಪ್ರೋತ್ಸಾಹ ನೀಡಿದ್ದಾರೆ. ಸ್ನೇಹಿತೆಯ ಜೊತೆಗೆ ಮಾದರಿ ಪ್ರಶ್ನೆ ಪತ್ರಿಕೆಗಳ ಸಹಾಯದಿಂದ ಅಭ್ಯಾಸ ನಡೆಸುತ್ತಿದ್ದೆ. ಎಲ್ಲಾ ಪರೀಕಗ್ಷೆಗಳು ಸುಲಭವಿತ್ತು. 625 ಅಂಕ ಪಡೆಯುವ ನಿರೀಕ್ಷೆಯಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಒಂದು ಅಂಕ ಕಡಿಮೆಯಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವೆ ಎಂದಿದ್ದಾರೆ.
ಚಮ್ಮಟೆಹರ್ಲು ಉಪ್ಪುಂದದ ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಮತ್ತು ಸೀಮಾ ಸುರೇಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಮುಂದುವರಿಸಲಿದ್ದು, ವೈದ್ಯಕೀಯ ಶಿಕ್ಷಣದಲ್ಲಿ ಆಸಕ್ತಿಯಿದೆ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ