Surathkal ಖಾಸಗಿ ಬಸ್ ಅತಿವೇಗಕ್ಕೆ ಇಬ್ಬರು ಯುವಕರು ಗಂಭೀರ! ವಿಡಿಯೋ ವೈರಲ್
Team Udayavani, Sep 17, 2023, 7:44 PM IST
ಸುರತ್ಕಲ್: ಖಾಸಗಿ ಎಕ್ಸ್ ಪ್ರಸ್ ಬಸ್ಸನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.
ಗಾಯಗೊಂಡವರನ್ನು ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಅರ್ಫಾನ್,ಹಳೆಯಂಗಡಿ ಇಂದಿರಾ ನಗರ ನಿವಾಸಿ ಅಮೀರ್ ತಿಳಿದು ಬಂದಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟುಎಂಬಲ್ಲಿ ಬೆಳಗ್ಗೆ 7.55ಕ್ಕೆ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರಸ್ ಬಸ್ ಡಿವೈಡರ್ ಬಳಿ ನಿಯಂತ್ರಣ ತಪ್ಪಿ ರಸ್ತೆದಾಟಲು ಕಾಯುತ್ತಿದ್ದ ಯುವಕರಿಗೆ ಡಿಕ್ಕಿ
ಹೊಡೆಯಿತೆನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್ ಆಗಿತ್ತು.ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
View this post on Instagram