Kundapura: ಚುನಾವಣ ಅಕ್ರಮ ತಡೆಗೆ ಕಡಲಿನಲ್ಲೂ ಕಣ್ಗಾವಲು

ಸಮುದ್ರದಲ್ಲಿ ಕರಾವಳಿ ಕಾವಲು ಪಡೆಯಿಂದ ನಿಗಾ ; ನಿತ್ಯ ಕನಿಷ್ಠ 4 ಗಂಟೆ ಗಸ್ತು

Team Udayavani, Mar 30, 2024, 10:15 AM IST

3-kundapura

ಕುಂದಾಪುರ: ಸಮುದ್ರ ಮಾರ್ಗವಾಗಿಯೂ ಚುನಾವಣ ಅಕ್ರಮಗಳನ್ನು ಎಸಗುವ ಸಾಧ್ಯತೆ ಇರುವುದರಿಂದ ರಾಜ್ಯದ ಕರಾವಳಿ ಕಾವಲು ಪಡೆಯು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ನಿಗಾ ವಹಿಸಿದೆ. ಕರಾವಳಿಯ 3 ಜಿಲ್ಲೆಗಳ 320 ಕಿ.ಮೀ. ವ್ಯಾಪ್ತಿಯಲ್ಲಿ 13 ಬೋಟ್‌ಗಳಲ್ಲಿ ದಿನಕ್ಕೆ ಕನಿಷ್ಠ 4 ಗಂಟೆ ಗಸ್ತು (ಪ್ಯಾಟ್ರೋಲಿಂಗ್‌) ನಡೆಸಲಾಗುತ್ತಿದೆ.

ರಸ್ತೆ ಮಾರ್ಗವಾಗಿ ಮಾತ್ರವಲ್ಲದೆ ಸಮುದ್ರದ ಮೂಲಕವೂ ಮತದಾರರಿಗೆ ಕೊಡಲು ಹಣ, ಮದ್ಯ, ಇನ್ನಿತರ ಉಡುಗೊರೆ ಗಳನ್ನು ಸಾಗಿಸುವ ಸಾಧ್ಯತೆ ಇರುವುದರಿಂದ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರಾವಳಿ ಕಾವಲು ಪಡೆಯ ಪೊಲೀಸರು ಕಡಲಿನಲ್ಲಿ ಮುಂಜಾಗ್ರತೆ ವಹಿಸಿದ್ದಾರೆ.

ರ್‍ಯಾಂಡಮ್‌ ತಪಾಸಣೆ: ಕರಾವಳಿಯ 3 ಜಿಲ್ಲೆಗಳಲ್ಲಿ 115 ಅಧಿಕೃತ ಹಾಗೂ 44 ಅನಧಿಕೃತ ಮೀನು ಇಳಿಸುವ ತಂಗುದಾಣಗಳಿವೆ. ಇಲ್ಲಿಗೆ ಬರುವ ಬೋಟು, ದೋಣಿಗಳ ಮೇಲೆ ನಿಗಾ ಇಡಲಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ 29, ಉಡುಪಿಯಲ್ಲಿ 34 ಹಾಗೂ ಉ.ಕ.ದಲ್ಲಿ 96 ಫಿಶ್‌ ಲ್ಯಾಂಡಿಂಗ್‌ ಪಾಯಿಂಟ್‌ ಗಳಿವೆ. ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ, ಹೆಜಮಾಡಿ, ಶಿರೂರು, ಕಾರವಾರ, ಹೊನ್ನಾವರ, ಭಟ್ಕಳ, ಬೇಲೆಕೇರಿ, ತದಡಿ ಪ್ರಮುಖವಾಗಿವೆ. ಇದಿಷ್ಟೇ ಅಲ್ಲದೆ ಸಮುದ್ರದಲ್ಲಿ ಗಸ್ತು ತಿರುಗುವ ಕರಾವಳಿ ಕಾವಲು ಪಡೆಯ ಪೊಲೀಸರು ಸಹ ರ್‍ಯಾಂಡಮ್‌ ಆಗಿ ಬೋಟು, ದೋಣಿಗಳನ್ನು ತಪಾಸಣೆ ಮಾಡುತ್ತಿದ್ದಾರೆ.

13 ಬೋಟ್‌ಗಳಿಂದ ನಿತ್ಯ ಗಸ್ತು

ಒಟ್ಟು 12 ಕರಾವಳಿ ಕಾವಲು ಪಡೆ ಠಾಣೆಗಳ ದ.ಕ. 1, ಉಡುಪಿ 3 ಹಾಗೂ ಉ.ಕ.ದಲ್ಲಿ 9 ಸೇರಿ ಒಟ್ಟು 13 ಬೋಟುಗಳಿವೆ. ಮಲ್ಪೆಯಲ್ಲಿ ಮಾತ್ರ ಹೆಚ್ಚುವರಿ ಬೋಟಿದೆ. ಕಾಸರಗೋಡು ಗಡಿಯಿಂದ ಕಾರವಾರದವರೆಗಿನ ರಾಜ್ಯದ 320 ಕಿ.ಮೀ. ಕರಾವಳಿಯಲ್ಲಿ ನಿತ್ಯ ದಿನದಲ್ಲಿ 4 ಗಂಟೆ ಕರಾವಳಿ ಕಾವಲು ಪಡೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಗೋವಾದಿಂದ ಮದ್ಯ ಸಾಗಾಟ ಪತ್ತೆ

ಚುನಾವಣ ನೀತಿ ಸಂಹಿತೆ ಆರಂಭವಾದ ಬಳಿಕ ಸಮುದ್ರದಲ್ಲಿ ಅಕ್ರಮ ಎಸಗಿರುವ ಮೊದಲ ಪ್ರಕರಣ ಎರಡು ದಿನದ ಹಿಂದೆ ಪತ್ತೆಯಾಗಿದೆ. ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಬೋಟನ್ನು ಕಾರವಾರದಲ್ಲಿ ಕಾವಲು ಪಡೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಬಾರಿಯೂ ಕಾರವಾರದಲ್ಲಿ ಬೋಟ್‌ ಮೂಲಕ ಅಕ್ರಮವಾಗಿ ಮದ್ಯ ಸಾಗಾಟ ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು.

ಫಿಶ್‌ ಲ್ಯಾಂಡಿಂಗ್‌ ಪಾಯಿಂಟ್‌ ಗಳಲ್ಲಿ ನಿತ್ಯವೂ ನಿಗಾ ವಹಿಸಲಾಗುತ್ತಿದೆ. ಇದಲ್ಲದೆ ಸಮುದ್ರದಲ್ಲಿ ಗಸ್ತು ತಿರು ಗುವ ವೇಳೆಯೂ ರ್‍ಯಾಂಡಮ್‌ ತಪಾಸಣೆಯೂ ಮಾಡ ಲಾಗುತ್ತಿದೆ. ಗೋವಾ ಗಡಿ ಭಾಗದಲ್ಲಿ ಮಾತ್ರ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ನಿತ್ಯ ಪ್ಯಾಟ್ರೋಲಿಂಗ್‌ ಮಾಡಲಾ ಗುತ್ತಿದೆ. – ಮಿಥುನ್‌ ಎಚ್‌.ಎನ್‌. ಕರಾವಳಿ ಕಾವಲು ಪಡೆ ಎಸ್ಪಿ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.