ರಜೆಯಲ್ಲಿ ತರಗತಿ ನಡೆಸಿ ಪಠ್ಯ ಪೂರ್ಣಗೊಳಿಸಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
Team Udayavani, Oct 9, 2021, 6:15 AM IST
ಕೋಟ: ಕೋವಿಡ್ ಕಾರಣದಿಂದ ತರಗತಿ ಆರಂಭ ವಿಳಂಬವಾಗಿದ್ದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಕಡಿತ ಮಾಡುವ ಚಿಂತನೆ ಸರಕಾರದ ಮುಂದಿಲ್ಲ. ಮುಂದಿನ ವರ್ಷ ಶೈಕ್ಷಣಿಕ ವೇಳಾಪಟ್ಟಿಯಂತೆಯೇ ಪರೀಕ್ಷೆ, ತರಗತಿಗಳನ್ನು ಆರಂಭಿಸಬೇಕು ಎನ್ನುವ ಉದ್ದೇಶವಿದ್ದು, ಇದಕ್ಕಾಗಿ ಶನಿವಾರ, ರವಿವಾರ ಮತ್ತು ರಜಾ ದಿನಗಳಲ್ಲೂ ತರಗತಿ ಗಳನ್ನು ನಡೆಸಿ ಪಠ್ಯಕ್ರಮವನ್ನು ಆದಷ್ಟು ಶೀಘ್ರ ಪೂರ್ತಿಗೊಳಿಸಬೇಕು ಎಂದು ಶಿಕ್ಷಕ ಮಿತ್ರರಲ್ಲಿ ವಿನಂತಿಸಿ ಕೊಂಡಿದ್ದೇನೆ.ಶಿಕ್ಷಕರಿಂದಲೂ ಪೂರಕ ಪ್ರತಿಕ್ರಿಯೆ ಬಂದಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಕೋಟ ಮಣೂರು-ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮ ಗಳೊಂದಿಗೆ ಅವರು ಮಾತನಾಡಿದರು. ಕೋವಿಡ್ ಪರಿಣಾಮದಿಂದಾಗಿ ಪಠ್ಯ ಚಟುವಟಿಕೆಗೆ ಸಾಕಷ್ಟು ಹಿನ್ನಡೆಯಾಗಿದೆ. ಹೀಗಾಗಿ ಪಿಯುಸಿ, ಪದವಿ ತರಗತಿಗಳಿಗೆ ದಸರಾ ರಜೆಯನ್ನು ನೀಡಬಾರದು ಎನ್ನುವುದು ಶಿಕ್ಷಣ ಇಲಾಖೆಯ ಬಯಕೆಯಾಗಿತ್ತು.
ಆದರೆ ಈಗ ಹಬ್ಬದಲ್ಲಿ ಭಾಗವಹಿಸಬೇಕು ಎನ್ನುವ ಬೇಡಿಕೆ ಕೇಳಿಬರುತ್ತಿರುವುದರಿಂದ ರಜೆಯನ್ನು ಈ ವಿಭಾಗಕ್ಕೂ ವಿಸ್ತರಿಸುವ ಚಿಂತನೆ ಇದೆ ಎಂದರು.
ಇದನ್ನೂ ಓದಿ:ಐಟಿ ದಾಳಿಗೆ ಮುಖ್ಯಮಂತ್ರಿ ಉತ್ತರದಾಯಿ: ಕಾಂಗ್ರೆಸ್ ಟ್ವೀಟ್
ಎನ್.ಇ.ಪಿ. ವಿಸ್ತರಣೆ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗಾಗಲೇ ಪದವಿ ಹಂತದಲ್ಲಿ ಜಾರಿಗೆ ತರಲಾಗಿದೆ. ಇದನ್ನು ಪಿಯುಸಿ ಮತ್ತು ಪ್ರೌಢಶಾಲೆ ಮುಂತಾದ ಕೆಳಹಂತದ ವಿಭಾಗಗಳಿಗೂ ವಿಸ್ತರಿಸುವ ಉದ್ದೇಶವಿದೆ. ಈ ಬಗ್ಗೆ ಟಾಸ್ಕ್ ಪೋರ್ಸ್ಗಳನ್ನು ರಚಿಸಲಾಗಿದ್ದು, ಅವು ಸಾಧಕ-ಬಾಧಕಗಳನ್ನು ಅಧ್ಯಯನ ನಡೆಸಿ ಸರಕಾರಕ್ಕೆ ನೀಡಲಿವೆ. ಅನಂತರ ಕೆಳಹಂತಕ್ಕೂ ಇದನ್ನು ವಿಸ್ತರಿಸಲಾಗುತ್ತದೆ ಎಂದರು.
ದಸರಾ ಬಳಿಕ 1ನೇ ತರಗತಿ ಆರಂಭ
ದಸರಾ ಅನಂತರ 1ನೆಯಿಂದ ಎಲ್ಲರಿಗೂ ಭೌತಿಕ ತರಗತಿಗಳನ್ನು ಆರಂಭಿಸುವ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಬಿಸಿಯೂಟವನ್ನೂ ಆರಂಭಿಸ ಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…