ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ: ಸುಕುಮಾರ್ ಶೆಟ್ಟಿ
ಜಾಲಾಡಿ- ಸಂತೋಷನಗರ ಡಿವೈಡರ್ ಕ್ರಾಸಿಂಗ್ ಬೇಡಿಕೆ
Team Udayavani, Sep 29, 2020, 2:06 AM IST
ಕುಂದಾಪುರ: ಹೆಮ್ಮಾಡಿ ಸಮೀಪದ ಜಾಲಾಡಿ – ಸಂತೋಷನಗರ ಮಧ್ಯೆ “ಡಿವೈಡರ್ ಕ್ರಾಸಿಂಗ್’ಗೆ ಅನುಮತಿ ಕೊಡಲು ಹೆದ್ದಾರಿ ಪ್ರಾಧಿಕಾರ ನಿರಾಕರಿಸಿರುವ ವಿಚಾರವನ್ನು ಅಲ್ಲಿನ ಗ್ರಾಮಸ್ಥರು ಸೋಮವಾರ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರ ಗಮನಕ್ಕೆ ತಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕರು ಈ ಬಗ್ಗೆ ಕೂಡಲೇ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ, ಡಿವೈಡರ್ ಕ್ರಾಸಿಂಗ್ಗೆ ಅನುಮತಿ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಹೆಮ್ಮಾಡಿ ಸಮೀಪದ ಜಾಲಾಡಿ – ಸಂತೋಷನಗರ ಮಧ್ಯೆ “ಡಿವೈಡರ್ ಕ್ರಾಸಿಂಗ್’ಗೆ ಅಲ್ಲಿನ ಜನ ಬೇಡಿಕೆ ಸಲ್ಲಿಸಿದ್ದರೂ ಅದಕ್ಕೆ ಅನುಮತಿ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರಾಕರಿಸಿರುವ ಕುರಿತಂತೆ “ಉದಯವಾಣಿ ಸುದಿನ’ವು ಸೆ. 28ರಂದು ವಿಸ್ತೃತವಾದ ವರದಿ ಪ್ರಕಟಿಸಿತ್ತು. ಈ ವರದಿಯನ್ನು ಆಧರಿಸಿ ಜಾಲಾಡಿ, ಸಂತೋಷನಗರ, ಬುಗುರಿಕಡು ಪರಿಸರದ ಜನ ಶಾಸಕರ ಗಮನಕ್ಕೆ ತಂದಿದ್ದು, ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ.
ಜನರ ಬೇಡಿಕೆಯೇನು?
ಜಾಲಾಡಿ ಹಾಗೂ ಸಂತೋಷನಗರದ ಜನ ಹೆಮ್ಮಾಡಿ ಸರ್ಕಲ್ ಅಥವಾ ತಲ್ಲೂರು ಜಂಕ್ಷನ್ಗೆ ಹೋಗಿ ಸುತ್ತು ಬಳಸಿಕೊಂಡು ಬರಬೇಕಾಗಿದೆ. ಇಲ್ಲದಿದ್ದರೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸಬೇಕು ಅಥವಾ 3 ಕಿ.ಮೀ. ದೂರದ ತಲ್ಲೂರು ಪೇಟೆಗೆ ಹೋಗಿ ತಿರುಗಿಸಿ ಬರಬೇಕು. ಕೆಲವರು ಅನಿವಾರ್ಯವಾಗಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದು, ಇದು ಅಪಾಯಕಾರಿಯಾಗಿದ್ದು, ಅನಿರೀಕ್ಷಿತ ಅವ ಘಡಗಳು ಸಂಭವಿಸುತ್ತಿವೆ. ಈ ಕಾರಣಕ್ಕೆ ಹೆಮ್ಮಾಡಿ ಜಂಕ್ಷನ್ನಿಂದ ಜಾಲಾಡಿಯವರೆಗೆ ಸರ್ವಿಸ್ ರಸ್ತೆ ನಿರ್ಮಿಸಬೇಕು ಎನ್ನುವ ಬೇಡಿಕೆ ಇಲ್ಲಿನ ಜನರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ