ಕರಾವಳಿಗೆ 94ಡಿ ಸೌಲಭ್ಯಕ್ಕೆ ಸರಕಾರದ ಉದಾಸೀನ

ಆದೇಶ ಮಾರ್ಪಾಟಾಗಿ ಬಂದಿಲ್ಲ ; ಡಿಸಿಯಿಂದ ಸರಕಾರಕ್ಕೆ ಪತ್ರ ; ಸಚಿವರಿಂದ ಭರವಸೆ

Team Udayavani, Oct 21, 2020, 4:34 AM IST

Kudಕರಾವಳಿಗೆ 94ಡಿ ಸೌಲಭ್ಯಕ್ಕೆ ಸರಕಾರದ ಉದಾಸೀನ

ಸಾಂದರ್ಭಿಕ ಚಿತ್ರ

ಕುಂದಾಪುರ: ಸಿದ್ದರಾಮಯ್ಯ ನೇತೃತ್ವದ ಸರಕಾರ ಇದ್ದಾಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಅವರು ಮಹತ್ವಾಕಾಂಕ್ಷೆಯಿಂದ ಮಾಡಿದ 94 ಡಿ ಸೌಲಭ್ಯ ಕರಾವಳಿಗರ ಪಾಲಿಗೆ ಗಗನಕುಸುಮವಾಗಿದೆ.

ಏನಿದು 94 ಡಿ
2017 ಡಿ. 16ರಂದು ಆದೇಶವಾಗಿದ್ದು, ವಾಸಿಸುವವನೇ ಮನೆಯ ಒಡೆಯ ಉದ್ದೇಶದ 1964ರ ಕಲಂ 94 ಕರ್ನಾಟಕ ಭೂ ಕಂದಾಯ ಕಾಯ್ದೆಗೆ 94ಡಿ ತಿದ್ದುಪಡಿ ತರುವ ಮೂಲಕ ಸರಕಾರಿ ಒಡೆತನದ ಜಾಗವನ್ನೂ ಕಂದಾಯ ಗ್ರಾಮರಹಿತ ಜನವಸತಿಗಳಲ್ಲಿ ಹಾಲಿ ವಾಸವಿರುವವರಿಗೆ ಹಸ್ತಾಂತರಿಸಲು ಅವಕಾಶ ಕಲ್ಪಿಸಲಾಗಿದೆ. ಕಂದಾಯ ಗ್ರಾಮವಲ್ಲದ ಅನಧಿಕೃತ ಬಡಾವಣೆಗಳಾದ ಲಂಬಾಣಿ ತಾಂಡಾ, ಗೊಲ್ಲರ ಹಟ್ಟಿ, ವಡ್ಡರಹಟ್ಟಿ, ಕುರುಬರ ಹಟ್ಟಿ, ನಾಯಕರಹಟ್ಟಿ, ಮಜಾರೆ ಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್‌, ಕಾಲನಿಯಂತಹ ರಾಜ್ಯದ 58 ಸಾವಿರಕ್ಕೂ ಅಧಿಕ ಜನವಸತಿ ಪ್ರದೇಶಗಳ ಮನೆಗಳು ಸರಕಾರಿ ಭೂಮಿಯಾಗಿದ್ದಲ್ಲಿ ಈಗಾಗಲೇ ವಾಸಿಸುತ್ತಿರುವವರಿಗೆ ಷರತ್ತಿಗೆ ಒಳಪಟ್ಟು ವಿತರಿಸಲು, 1979ರ ಪೂರ್ವದಲ್ಲಿ ವಾಸಿಸುತ್ತಿರುವವರ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಮಂಜೂರಾತಿಯು 4 ಸಾವಿರ ಚ. ಅಡಿ ಮಿತಿಗೆ ಒಳಪಟ್ಟಿದೆ.

ಖಾರ್ವಿಕೇರಿಯಲ್ಲಿ
ಇಲ್ಲಿನ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯ 150ಕ್ಕೂ ಅಧಿಕ ಮಂದಿಗೆ ನಿವೇಶನವೇ ಇಲ್ಲ. ಈ ಕುರಿತು ಸಾಕಷ್ಟು ಹೋರಾಟಗಳಾಗಿವೆ. ಪುರಸಭೆಗೂ ಬೇಡಿಕೆ ಪಟ್ಟಿ ಮಂಡಿಸಲಾಗಿದೆ. ಆದರೆ ಬೇಡಿಕೆ ಈಡೇರಿಲ್ಲ. ಪುರಸಭಾ ವಾರ್ಡ್‌ ಸದಸ್ಯರಾಗಿದ್ದ ರವಿರಾಜ್‌ ಖಾರ್ವಿ, ಈಗಿನ ಸದಸ್ಯ ಚಂದ್ರಶೇಖರ್‌ ಖಾರ್ವಿ ನಿವೇಶನರಹಿತರ ಹೋರಾಟದ ಜತೆಗೆ ಅವರೂ ನೇತೃತ್ವ ವಹಿಸಿ ನಿವೇಶನ ದೊರಕಿಸಿಕೊಡಲು ಪ್ರಯತ್ನಿಸಿದ್ದರು.

ಡಿಸಿಯಿಂದ ಪತ್ರ
ಖಾರ್ವಿಕೇರಿಯಲ್ಲಿ ವಾಸಿಸುವವರಿಗೆ ಹಕ್ಕುಪತ್ರ ಇಲ್ಲದಿದ್ದರೂ ಅವರಿಗೆ ಈ ನಿಯಮದಡಿ ಭೂಮಿ ನೀಡಲು ಕಾನೂನಿನ ತೊಡಕಿದೆ. ಪುರಸಭೆ ವ್ಯಾಪ್ತಿ ಯಲ್ಲಿ 94ಸಿಸಿ ಅಸ್ತಿತ್ವದಲ್ಲಿರುವುದು. 94ಡಿಯಲ್ಲಿ ಮೀನುಗಾರ ಕುಟುಂಬಗಳಿಗೆ ನೀಡಲು ಅವಕಾಶ ಇಲ್ಲ. ತಾಂಡಾ ಪ್ರದೇಶ ಗುರುತಿಸಿ ನೋಟಿಫಿಕೇಶನ್‌ ಮಾಡಿದ ರಷ್ಟೇ ನಿವೇಶನ ಹಂಚಲು ಸಾಧ್ಯ. ಈ ಬದಲಾವಣೆ ಮಾಡಬೇಕು ಎಂದು ಉಡುಪಿ ಡಿಸಿ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರಕಾರದಿಂದ ಇದಕ್ಕೆ ಈವರೆಗೂ ಯಾವುದೇ ಸ್ಪಂದನ ದೊರೆತಿಲ್ಲ.

ಕರಾವಳಿಗಿಲ್ಲ
ನಿಯಮದಲ್ಲಿ ವಿವರಿಸಿದ ಮಾದರಿಯ ಪಂಗಡ ದ.ಕ., ಉಡುಪಿ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ದೊರೆಯದ ಕಾರಣ ಯಾವುದೇ ಹಕ್ಕುಪತ್ರ ವಿತರಣೆಯಾಗಿಲ್ಲ. ಜನಪ್ರತಿನಿಧಿಗಳು ಖುದ್ದು ಆಸಕ್ತಿ ವಹಿಸಿ ಈ ಕಾಯ್ದೆಯಲ್ಲಿ ಸ್ವಲ್ಪ ತಿದ್ದುಪಡಿಗೆ ಸೂಚಿಸುತ್ತಿದ್ದರೂ ಸಾವಿರಾರು ಮಂದಿಗೆ ಇದು ಪ್ರಯೋಜನಕ್ಕೆ ದೊರೆಯುತ್ತಿತ್ತು. ಕೃಷಿಕೂಲಿ ಕಾರ್ಮಿಕರು, ಮೀನುಗಾರ ಕುಟುಂಬದವರು, ಆದಿವಾಸಿಗಳು ಮೊದಲಾದವರನ್ನು ಸೇರಿಸುತ್ತಿದ್ದರೆ ಇಲ್ಲಿಯೂ ಅರ್ಹರ ಸಂಖ್ಯೆ ಇತ್ತು.

ಸಚಿವರ ಭರವಸೆ
ಈ ಹಿಂದಿನ ಎಸಿ ಭೂಬಾಲನ್‌ ಅವರು ಖಾರ್ವಿಕೇರಿ ಜನರಿಗೆ ಹಕ್ಕುಪತ್ರ ಕೊಡಿಸಬೇಕೆಂದು ಪ್ರಯತ್ನಿಸಿದರು. 127 ಮಂದಿ ಅರ್ಜಿ ನೀಡಿದ್ದು ಜಿಲ್ಲಾಧಿಕಾರಿಗೆ ಮುಂದಿನ ಕ್ರಮಕ್ಕೆ ಕಳುಹಿಸಿದ್ದರು. ಅಲ್ಲಿಂದ ಕಡತ ಎಸಿ ಕಚೇರಿಗೆ ಬಂದಿದ್ದು ಎಸಿ ಆಗಿರುವ ಕೆ. ರಾಜು ಅವರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ ಅವರಿಗೆ ರವಾನಿಸಿದ್ದರು. 8-10 ಮಾತ್ರ ಆಕ್ಷೇಪಣೆಗಳು ಬಂದಿದ್ದು ಇತರ ಅರ್ಜಿಗಳಿಗೆ ಸಮಸ್ಯೆಯಿರಲಿಲ್ಲ. ಖುದ್ದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಕೂಡ ಅಧಿಕಾರಿಗಳ ಬಳಿ ಈ ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದ್ದರು.

ಇಂದು ಸಭೆ
94ಡಿ ಸೌಲಭ್ಯವನ್ನು ಕರಾವಳಿ ಜಿಲ್ಲೆಗೆ ಒದಗಿಸಿಕೊಡಲು ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಮಾಡಬೇಕಾಗುತ್ತದೆ. 10 ಮನೆಗಳಿಗಿಂತ ಹೆಚ್ಚು ಇರುವ ತಾಂಡಾದಂತಹ ಪ್ರದೇಶ ಈ ಭಾಗದಲ್ಲಿ ಇಲ್ಲ. ಈ ನಿಟ್ಟಿನಲ್ಲಿ ಅ.21ರಂದು ಅಧಿಕಾರಿಗಳ ಸಭೆ ನಡೆಸುತ್ತೇನೆ. ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತೇನೆ. – ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ, ಮೀನುಗಾರಿಕ ಸಚಿವರು

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.