ಬಗೆಹರಿಯಬೇಕಿದೆ “ಡೀಮ್ಡ್ ‘, ನಿವೇಶನ ರಹಿತರ ಸಮಸ್ಯೆ

ನಾಳೆ ಹಳ್ಳಿಹೊಳೆಯಲ್ಲಿ ಡಿಸಿ ಗ್ರಾಮವಾಸ್ತವ್ಯ

Team Udayavani, Sep 16, 2022, 12:27 PM IST

9

ಹಳ್ಳಿಹೊಳೆ: ಗ್ರಾಮದ 200 ಕುಟುಂಬಗಳು ಡೀಮ್ಡ್ ಫಾರೆಸ್ಟ್‌ ಸಮಸ್ಯೆಯಿಂದ ಹೈರಾಣಾಗಿದ್ದರೆ, 30ಕ್ಕೂ ಅಧಿಕ ಮಂದಿ ನಿವೇಶನ ರಹಿತರಿದ್ದಾರೆ. ಗ್ರಾಮೀಣ ರಸ್ತೆಗಳು ಅಭಿವೃದ್ಧಿ ನಿರೀಕ್ಷೆಯಲ್ಲಿವೆ. ಗ್ರಾಮದ ಬಹುಭಾಗ ಇನ್ನು ಸಹ ನೆಟ್‌ವರ್ಕ್‌ ಸಂಪರ್ಕದಿಂದ ವಂಚಿತವಾಗಿದೆ.

ಇದು ಸೆ. 17ರಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅವರು ವಾಸ್ತವ್ಯ ಹೂಡಲಿರುವ ಹಳ್ಳಿಹೊಳೆ ಗ್ರಾಮದ ಜನರ ಪ್ರಮುಖ ಅಹವಾಲುಗಳು.

200 ಕುಟುಂಬಕ್ಕೆ ಸಮಸ್ಯೆ

ಹೈಕೋರ್ಟ್‌ ಡೀಮ್ಡ್ ಫಾರೆಸ್ಟ್‌ ಅನ್ನುವ ಪದವೇ ಅಪ್ರಯೋಜಕ ಎಂದರೂ, ಹಳ್ಳಿಹೊಳೆ ಗ್ರಾಮದ 200 ಕುಟುಂಬಗಳಿಗೆ ಮಾತ್ರ ಡೀಮ್ಡ್ ಫಾರೆಸ್ಟ್‌ ಎನ್ನುವ ಸಮಸ್ಯೆಯಿಂದ ಮಾತ್ರ ಈವರೆಗೆ ಮುಕ್ತಿ ಸಿಕ್ಕಿಲ್ಲ. ಈ ಕುಟುಂಬಗಳಿಗೆ ಪಡಿತರವೊಂದು ಹೊರತುಪಡಿಸಿ, 20-30 ವರ್ಷಗಳಿಂದ ವಾಸಿಸುತ್ತಿದ್ದರೂ, ಬೇರೆ ಯಾವುದೇ ಸರಕಾರಿ ಸೌಲಭ್ಯಗಳು ಸಿಗುತ್ತಿಲ್ಲ. ಕಿಸಾನ್‌ ಸಮ್ಮಾನ್‌, ಬ್ಯಾಂಕ್‌ ಸಾಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ನಿವೇಶನ ರಹಿತರು

ಗ್ರಾಮದಲ್ಲಿ 638 ಕುಟುಂಬಗಳಿದ್ದು, ಇನ್ನು 30 ಮಂದಿ ನಿವೇಶನ ರಹಿತರಿದ್ದು, ಅವರಿಗೆ ಜಾಗ ಕೊಡಲು ಸರಕಾರಿ ಜಮೀನೇ ಇಲ್ಲದ ಸ್ಥಿತಿಯಿದೆ. ಅನೇಕ ವರ್ಷಗಳಿಂದ ಈ ಕುಟುಂಬಗಳು ನಿವೇಶನಕ್ಕಾಗಿ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ.

ಗ್ರಾಮೀಣ ರಸ್ತೆಗಳ ಪಾಡು

ಗ್ರಾಮದ ಇನ್ನೊಂದು ಪ್ರಮುಖ ಸಮಸ್ಯೆಯೆಂದರೆ ಗ್ರಾಮೀಣ ರಸ್ತೆಗಳ ಪಾಡು. ಈಗಾಗಲೇ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮುತುವರ್ಜಿಯಲ್ಲಿ ಗ್ರಾಮದ ಸಾಕಷ್ಟು ರಸ್ತೆ ಅಭಿವೃದ್ಧಿಯಾಗಿದ್ದರೂ, ಇನ್ನು ಕೆಲವು ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಡೀಮ್ಡ್ ಫಾರೆಸ್ಟ್‌ ನಿಯಮ ಅಡ್ಡಿಯಾಗಿದೆ. ಪ್ರಮುಖವಾಗಿ ವಾಟೆಬಚ್ಚಲು – ಶೆಟ್ಟಿಪಾಲು ರಸ್ತೆ ಅಭಿವೃದ್ಧಿ, ಕಮಲ ಶಿಲೆ – ಹಳ್ಳಿಹೊಳೆ -ಪಾರೆ ಮುಖ್ಯ ರಸ್ತೆ ವಿಸ್ತರಣೆಗೂ ಅರಣ್ಯ ಇಲಾಖೆಯೇ ತೊಡಕಾಗಿ ಪರಿಣಮಿಸಿದೆ.

ದೇವರಬಾಳು ರಸ್ತೆ

ಬಾಚುಗುಳಿ – ದೇವರಬಾಳು ರಸ್ತೆಯು ಹದಗೆಟ್ಟು ಅನೇಕ ವರ್ಷಗಳೇ ಕಳೆದಿವೆ. 8 ಕಿ.ಮೀ. ದೂರದ ಈ ರಸ್ತೆಯ ಸುಮಾರು 1 ಕಿ.ಮೀ.ದೂರದವರೆಗೆ ಮಾತ್ರ ಅಭಿವೃದ್ಧಿಯಾಗಿದೆ. ಬಾಕಿ ಉಳಿದ ರಸ್ತೆಯಲ್ಲಿ ಮಳೆಗಾಲದಲ್ಲಿ ಹೊಂಡ-ಗುಂಡಿಮಯವಾಗಿದ್ದು, ಸಂಚರಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ಅನೇಕ ಮಂದಿ ದ್ವಿಚಕ್ರ ವಾಹನ ಸವಾರರು ಬಿದ್ದ ನಿದರ್ಶನವೂ ಇದೆ. ಸುಮಾರು 50 ಕ್ಕೂ ಮಿಕ್ಕಿ ಕುಟುಂಬಗಳು ಈ ರಸ್ತೆಯನ್ನು ಆಶ್ರಯಿಸಿವೆ. ದೇವರಬಾಳು ರಸ್ತೆ ಹಾಗೂ ವಾಟೆಬಚ್ಚಲು ರಸ್ತೆ ಆದಷ್ಟು ಬೇಗ ಅಭಿವೃದ್ಧಿಯಾಗಬೇಕಿದೆ. ವಾಟೆಬಚ್ಚಲು- ಕಟ್ಟಿನಮನೆಯಲ್ಲಿ ತಾತ್ಕಾಲಿಕ ಮರದ ಕಿರು ಸೇತುವೆ ಮಳೆಗೆ ಕೊಚ್ಚಿಕೊಂಡು ಹೋಗಿದ್ದು, ಕಾಲು ಸಂಕ ಬೇಡಿಕೆಯಿದೆ ಎನ್ನುವುದಾಗಿ ಗ್ರಾ.ಪಂ. ಸದಸ್ಯ ಪ್ರಭಾಕರ ನಾಯ್ಕ ಒತ್ತಾಯಿಸಿದ್ದಾರೆ.

ಪ್ರೌಢಶಾಲೆ ಬೇಡಿಕೆ

ಹಳ್ಳಿಹೊಳೆ ಗ್ರಾಮದ ದೇವರಬಾಳು, ವಾಟೆಬಚ್ಚಲು 2 ಕಿ.ಪ್ರಾ. ಶಾಲೆ, ಹಳ್ಳಿಹೊಳೆ ಶೆಟ್ಟಿಪಾಲು, ಚಕ್ರಾ ಮೈದಾನ, ಹೊಸಬಾಳು, ಇರಿಗೆಯಲ್ಲಿ 4 ಹಿ.ಪ್ರಾ. ಶಾಲೆಗಳು ಸೇರಿ ಒಟ್ಟು 6 ಶಾಲೆಗಳಿವೆ. ದೇವರಬಾಳು, ಕಟ್ಟಿನಾಡಿ, ಕಬ್ಬಿನಾಲೆ, ಇರಿಗೆ ಕಲ್ಸಂಕ, ವಾಟೆಬಚ್ಚಲುವಿನಿಂದ ಸರಕಾರಿ ಪ್ರೌಢಶಾಲೆಗೆ ಹೋಗಬೇಕಾದರೆ ಸುಮಾರು 20 ಕಿ.ಮೀ. ದೂರದ ಸಿದ್ದಾಪುರಕ್ಕೆ ಬರಬೇಕು. 5 ಕಿ.ಮೀ. ದೂರದ ಕಮಶಿಲೆಯಲ್ಲಿ ಅನುದಾನಿತ ಪ್ರೌಢಶಾಲೆಯೊಂದಿದೆ. ಕಳೆದ 10 ವರ್ಷಗಳಲ್ಲಿ ಈವರೆಗೆ ಕನಿಷ್ಠವೆಂದರೂ 100ಕ್ಕೂ ಹೆಚ್ಚು ಮಂದಿ ಅನಿವಾರ್ಯವಾಗಿ ಪ್ರಾಥಮಿಕ ಶಾಲೆಗೆ ಶಿಕ್ಷಣವನ್ನು ಮೊಟಕುಗೊಳಿಸಿದ್ದಾರೆ.

ಉದಯವಾಣಿ ವರದಿ

ಕಳೆದ ವರ್ಷ “ಉದಯವಾಣಿ’ಯು ಗ್ರಾಮಭಾರತ ಸರಣಿಯಲ್ಲಿ ಹಳ್ಳಿಹೊಳೆ ಗ್ರಾಮದ ಸಮಸ್ಯೆಗಳ ಕುರಿತಂತೆ ಸಮಗ್ರ ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಆ ಬಳಿಕ ಕಬ್ಬಿನಾಲೆಗೆ ಸೇತುವೆ, ಖಾಯಂ ಗ್ರಾಮಕರಣಿಕರು, ಬಸ್‌ ಸೌಕರ್ಯ, ಒಂದು ಕಡೆ ಟವರ್‌ ಮಂಜೂರಾಗಿದೆ. ಎರಡು ಕಡೆ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾಗಿದೆ.

ನೆಟ್‌ವರ್ಕ್‌ ಸಮಸ್ಯೆ

ಹಳ್ಳಿಹೊಳೆ ಗ್ರಾಮದ ಇರಿಗೆ ಕಲ್ಸಂಕ, ಕಬ್ಬಿನಾಲೆ, ದೇವರಬಾಳು, ಕಟ್ಟಿನಾಡಿ, ರಾಮನಹಕ್ಲು, ಕಾರೇಬೈಲು ಭಾಗದಲ್ಲಿ ಎಲ್ಲಿಯೂ ಸಹ ಸರಿಯಾದ ನೆಟ್‌ವರ್ಕ್‌ ಇಲ್ಲ. ನೆಟ್‌ವರ್ಕ್‌ ಇರುವ ಕಡೆಗಳಲ್ಲಿಯೂ ವಿದ್ಯುತ್‌ ಕೈಕೊಟ್ಟರೆ ಅಲ್ಲಿಗೂ ನೆಟ್‌ ವರ್ಕ್‌ ಇರಲ್ಲ.

ಅನೇಕ ಬೇಡಿಕೆ: ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಬರುತ್ತಿದ್ದು, ಇಲ್ಲಿನ ಡೀಮ್ಡ್ ಫಾರೆಸ್ಟ್‌, ನಿವೇಶನ ರಹಿತರ ಸಮಸ್ಯೆ, ರಸ್ತೆ ಅಭಿವೃದ್ಧಿ, ನೆಟ್‌ವರ್ಕ್‌ ಸಮಸ್ಯೆ ಕುರಿತಂತೆ ಅವರಿಗೆ ಮನವಿ ಸಲ್ಲಿಸಲಾಗುವುದು. ಮುಖ್ಯವಾಗಿ ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಇತ್ಯರ್ಥಗೊಳ್ಳಬೇಕಿದೆ. –ಪ್ರದೀಪ್‌ ಕೆ., ಅಧ್ಯಕ್ಷರು, ಹಳ್ಳಿಹೊಳೆ ಗ್ರಾ.ಪಂ., ಮಂಜುನಾಥ ಶೆಟ್ಟಿ, ಉಪಾಧ್ಯಕ್ಷರು

-ಪ್ರಶಾಂತ್‌ ಪಾದೆ

 

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.