ಕೇರಳದಲ್ಲಿ ಸಿಲುಕಿದ್ದ ಜಿಲ್ಲೆ ಯ 41 ಬೋಟ್ಗಳ ಬಿಡುಗಡೆ ಯಶಸ್ವಿ
Team Udayavani, May 15, 2020, 5:44 AM IST
ಕೋಟ: ಜಿಲ್ಲೆಯ 41 ಬೋಟುಗಳು ಲಾಕ್ಡೌನ್ ಹಿನ್ನೆಲೆಯಲ್ಲಿ ಕೇರಳದ ಚರ್ವತ್ತೂರು, ಚೆಂಬಲ್ ಮತ್ತು ಕಣ್ಣೂರಿನಲ್ಲಿ ಸಿಲುಕಿದ್ದು ಸಂಕಷ್ಟದಲ್ಲಿದ್ದ ಮೀನುಗಾರರ ಮನವಿ ಮೇರೆಗೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೊಂದಿಗೆ ಚರ್ಚಿಸಿ ಕೇರಳದೊಂದಿಗೆ ಸಂಪರ್ಕ ಬೆಳೆಸಿ ಬೋಟ್ಗಳನ್ನು ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಎರಡೂ ರಾಜ್ಯಗಳ ನಡುವೆ ಒಪ್ಪಂದವಾಗಿದ್ದು ಬೋಟ್ಗಳನ್ನು ಮರಳಿ ತರಲು ಗುರುವಾರ ಅಪರಾಹ್ನ ಹಂಗಾರಕಟ್ಟೆ ಮೀನುಗಾರಿಕೆ ಜಟ್ಟಿಯಿಂದ ಸುಮಾರು 78 ಮಂದಿಯೊಳನ್ನೊಳಗೊಂಡ ಕಾರ್ಮಿಕರು ಮತ್ತು ಬೋಟುಗಳ ಮಾಲಕರ ನಿಯೋಗ ಮೂರು ವಿಶೇಷ ಯಾಂತ್ರೀಕೃತ ಬೋಟುಗಳ ಮೂಲಕ ಕೇರಳಕ್ಕೆ ಪ್ರಯಾಣ ಬೆಳೆಸಿತು. ಮೀನುಗಾರಿಕೆ ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಪ್ರಯಾಣ ವೆಚ್ಚ ಭರಿಸಲು ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ಬೋಟ್ಗಳು ಮರಳಿ ಕರ್ನಾಟಕ ಸೇರಲಿವೆ. ಕರಾವಳಿ ಕಾವಲುಪಡೆಯ ಉಪನಿರೀಕ್ಷಕ ವಾಸಪ್ಪ ನಾಯ್ಕ, ಪೇದೆ ಮೋನು, ಮೀನುಗಾರ ಪ್ರಮುಖರಾದ ಶಂಕರ ಮರಕಾಲ, ಶೇಖರ ರಘು ಕಾಂಚನ್, ನರಸಿಂಹ ಕಾಂಚನ್, ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರವೀಶ್, ಕಾರ್ಯದರ್ಶಿ ರಾಘವೇಂದ್ರ , ಗೋಪಾಲ ಬಂಗೇರ ಕೋಟ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್