ನಗರ ಯೋಜನ ಪ್ರಾಧಿಕಾರದ ಮಾಸ್ಟರ್‌ ಪ್ಲ್ಯಾನ್ ಇನ್ನೂ ಇಲ್ಲ!

 2009ರಲ್ಲಿ ಯೋಜನ ಪ್ರಾಧಿಕಾರ ರಚನೆ, 13 ವರ್ಷ ಕಳೆದರೂ ನಡೆಯದ ಮಹಾಯೋಜನೆ

Team Udayavani, Jan 22, 2022, 7:27 PM IST

ನಗರ ಯೋಜನ ಪ್ರಾಧಿಕಾರದ ಮಾಸ್ಟರ್‌ ಪ್ಲ್ಯಾನ್ ಇನ್ನೂ ಇಲ್ಲ!

ಕುಂದಾಪುರ: ಇಲ್ಲಿ ನಗರ ಯೋಜನ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 13 ವರ್ಷಗಳಾದರೂ ನಗರದ ಸಮಗ್ರ ನಕ್ಷೆ ಮಹಾಯೋಜನೆ ಮಾಸ್ಟರ್‌ ಪ್ಲ್ಯಾನ್ ಇನ್ನೂ ಅಂತಿಮವಾಗಿಲ್ಲ. ಪರಿಣಾಮವಾಗಿ ಕಳೆದ ಎರಡು ವರ್ಷಗಳಿಂದ ಕಟ್ಟಡ ಕಟ್ಟುವವರಿಗೆ ನಿರಾಕ್ಷೇಪಣ ಪತ್ರ, ಭೂ ಪರಿವರ್ತನೆಗೆ ಅನುಮತಿ ದೊರೆಯುತ್ತಿಲ್ಲ. ಇದರಿಂದ ಕುಂದಾಪುರ ಪುರಸಭೆ ವ್ಯಾಪ್ತಿ, ಹಂಗಳೂರು ಪಂಚಾಯತ್‌ ವ್ಯಾಪ್ತಿಯ ವರಿಗೆ ತೊಂದರೆಯಾಗಿದೆ.

ಮಾಸ್ಟರ್‌ ಪ್ಲ್ಯಾನ್
ಸ್ಥಳೀಯ ಯೋಜನ ಪ್ರದೇಶ ಘೋಷಣೆ ಗೊಂಡಿರುವ ಸಂಬಂಧಿಸಿದ ಸ್ಥಳೀಯ ಯೋಜನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆಯಾಯ ಯೋಜನ ಪ್ರಾಧಿಕಾರಗಳ ಮಹಾ ಯೋಜನೆಯನ್ನು ತಯಾರಿಸಿ ಸರಕಾರದ ಅನುಮೋದನೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಯೋಜನ ಪ್ರದೇಶಗಳ ಸದಸ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ. ಕುಂದಾಪುರದಿಂದ ಮಾಸ್ಟರ್‌ ಪ್ಲ್ಯಾನ್ ಸಲ್ಲಿಸಲಾಗಿದ್ದರೂ ಸರಕಾರದಿಂದ ಇನ್ನೂ ಅಂತಿಮ ಮೊಹರು ಬಿದ್ದಿಲ್ಲ.

ಏನೇನಿರುತ್ತದೆ?
ಮಾಸ್ಟರ್‌  ಪ್ಲ್ಯಾನ್ ನಲ್ಲಿ ಏನೇನಿರುತ್ತದೆ ಎಂದರೆ ನಗರದ ಸಮಗ್ರ ಮಾಹಿತಿ ಇರುತ್ತದೆ. ವಸತಿ, ವಾಣಿಜ್ಯ, ಕೈಗಾರಿಕೆ, ಆಟದ ಮೈದಾನ, ಸಾರ್ವಜನಿಕ, ಅರೆ ಸಾರ್ವಜನಿಕ, ಉದ್ಯಾನವನ, ಬಯಲು ಪ್ರದೇಶ, ಸಾರಿಗೆ ಸಂವಹನ, ಖಾಲಿ ಪ್ರದೇಶ, ಕೆರೆ, ಕೃಷಿ ಭೂಮಿ ಹೀಗೆ ಸಮಗ್ರ ಮಾಹಿತಿ ಇರುತ್ತದೆ. ಇದರ ಅನ್ವಯ ಮುಂದಿನ ಯೋಜನೆಗಳನ್ನು ಸಿದ್ಧಪಡಿಸಲು, ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗುತ್ತದೆ.

ಸ್ಥಗಿತ ಸ್ಥಳೀಯ ಯೋಜನ ಪ್ರದೇಶ ಘೋಷಣೆ ಗೊಂಡು ಮಹಾಯೋಜನೆ ತಯಾರಿಸದೇ ಇರುವ ಪ್ರಗತಿಯಲ್ಲಿರುವ ಪ್ರದೇಶಗಳಲ್ಲಿ ಮಹಾಯೋಜನೆ ಅಂತಿಮ ಅನುಮೋದನೆಯಾಗುವವರೆಗೆ ಭೂ ಪರಿವರ್ತನೆಗೆ ನಿರಾಕ್ಷೇಪಣ ಪತ್ರ ನೀಡುವುದನ್ನು ಸರಕಾರ 2 ವರ್ಷಗಳ ಹಿಂದೆ ನಿಲ್ಲಿಸಿದೆ. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನ ಕಾಯ್ದೆ 1961ರಡಿಯಲ್ಲಿ ರಾಜ್ಯದಲ್ಲಿ ಹಲವಾರು ಸ್ಥಳೀಯ ಯೋಜನ ಪ್ರದೇಶಗಳನ್ನು ಘೋಷಿಸಲಾಗಿದೆ. ಹೊಸದಾಗಿ ಸ್ಥಳೀಯ ಯೋಜನ ಪ್ರದೇಶಗಳನ್ನು ಆಗಿಂದಾಗ್ಗೆ ಘೋಷಿಸಲಾಗುತ್ತದೆ. ರಾಜ್ಯದಲ್ಲಿ ಸ್ಥಳೀಯ ಯೋಜನ ಪ್ರದೇಶ ಘೋಷಣೆಗೊಂಡು ಮಹಾಯೋಜನೆ ತಯಾರಿಸದೇ ಇರುವ ಪ್ರದೇಶಗಳಲ್ಲಿ ಮಹಾಯೋಜನೆ ಅಂತಿಮ ಅನುಮೋದನೆಯಾಗುವವರೆಗೆ ಭೂ ಪರಿವರ್ತನೆಗೆ ನಿರಾಕ್ಷೇಪಣ ಪತ್ರ ನೀಡುವುದನ್ನು ನಿಲ್ಲಿಸಲು ಸೂಚಿಸಲಾಗಿದೆ.

ಬಾಕಿ
ಸಾರ್ವಜನಿಕರಿಗೆ ಆಗುವ ಅನನು ಕೂಲತೆಯನ್ನು ತಡೆಯಲು ಆದ್ಯತೆ ಮೇಲೆ ಸ್ಥಳೀಯ ಯೋಜನ ಪ್ರದೇಶಗಳು ಮಹಾ ಯೋಜನೆ ತಯಾರಿಸಿ, ಯೋಜನ ಪ್ರಾಧಿಕಾರ ರಚನೆಯಾದ ವರ್ಷಗಳೊಳಗೆ ಮಹಾಯೋಜನೆಯನ್ನು ಸರಕಾರದ ಅನು ಮೋದನೆಗೆ ಸಲ್ಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ನಿಯಮ ಇದೆ. ಆದರೆ ಪಾಲನೆ ಮಾತ್ರ ಆಗುತ್ತಿಲ್ಲ ಎನ್ನುವುದು ಅಷ್ಟೇ ಸತ್ಯ. ಕೆಲವು ಪ್ರಾಧಿಕಾರಿಗಳು ಮಾಡುವುದಿಲ್ಲ, ಪ್ರಾಧಿಕಾರ ಮಾಡಿದ್ದನ್ನು ಸರಕಾರ ಸಕಾಲದಲ್ಲಿ ಅನುಮೋದಿಸುವುದಿಲ್ಲ ಎಂದಾಗಿದೆ.

ಯಾಕಾಗಿ?
ಮಹಾಯೋಜನೆ ತಯಾರಿಸದೆ ಇರುವ, ಪ್ರಗತಿಯಲ್ಲಿರುವ ಪ್ರದೇಶಗಳಿಗೆ ಭೂ ಪರಿವರ್ತನೆಗೆ ಅವಕಾಶ ನೀಡಿದರೆ, ಹೊಸ ಅಭಿವೃದ್ಧಿಗಳಿಗೆ ಅನುಮತಿ ತಡೆಯದೆ ಇದ್ದಲ್ಲಿ ಮಹಾಯೋಜನೆಯ ತಯಾರಿಗೆ ತೊಂದರೆಯಾಗುತ್ತದೆ. ಮಹಾಯೋಜನೆ ಅಂತಿಮ ಅನುಮೋದನೆಯಾಗುವವರೆಗೆ ಭೂ ಪರಿವರ್ತನೆಗೆ ನಿರಾಕ್ಷೇಪಣ ಪತ್ರ ನೀಡುವುದು ಸೂಕ್ತವಲ್ಲ ಎಂದು 15.7.2019ರಂದು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನೂರಾರು ಮಂದಿ ನಿರಾಕ್ಷೇಪಣ ಪತ್ರ ದೊರೆಯದೆ ಅರ್ಜಿ ಸಲ್ಲಿಸಿ ಬಾಕಿಯಾಗಿದ್ದಾರೆ.

ವಾರದೊಳಗೆ ಅನುಮತಿ
ಈ ಸಮಸ್ಯೆ ಕುರಿತು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಅವರು ಸರಕಾರದ ಗಮನ ಸೆಳೆದಿದ್ದು ನಿರಾಕ್ಷೇಪಣ ಪತ್ರ ನೀಡುವಂತೆ ವಾರದೊಳಗೆ ಸೂಚನೆ ಬರಲಿದೆ. ಮಹಾಯೋಜನೆ ಸರಕಾರಕ್ಕೆ ಕಳುಹಿಸಿದ್ದು ಅನುಮತಿ ದೊರೆತಿಲ್ಲ. ಹಾಗಿದ್ದರೂ ಎನ್‌ಒಸಿ ನೀಡಲು ತೊಂದರೆಯಾಗದಂತೆ ಮೌಖಿಕ ಆದೇಶ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.
-ವಿಜಯ್‌ ಎಸ್‌. ಪೂಜಾರಿ,
ಅಧ್ಯಕ್ಷರು, ನಗರ ಯೋಜನಾ ಪ್ರಾಧಿಕಾರ, ಕುಂದಾಪುರ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.