ಹಳ್ಳಾಡಿ -ಹರ್ಕಾಡಿ : ಹಿತ್ತಲ ಗಿಡವೂ ಮದ್ದೇ !

ಕೆರೆ, ಮದಗ ಅಭಿವೃದ್ಧಿಯಾಗಲಿ, ಇನ್ನಷ್ಟು ಸೌಕರ್ಯಗಳು ಒದಗಲಿ

Team Udayavani, Jul 26, 2022, 12:09 PM IST

6

ತೆಕ್ಕಟ್ಟೆ: ಈ ಊರಿನಲ್ಲಷ್ಟೇ ಅಲ್ಲ; ಬಹುಗ್ರಾಮಗಳಲ್ಲಿ ಹಿತ್ತಲಲ್ಲೇ ಸಮಸ್ಯೆಗೆ ಮದ್ದಿರುತ್ತದೆ. ನಾವು ನೋಡುವುದಿಲ್ಲವಷ್ಟೇ. ಆಕಸ್ಮಾತ್‌ ನೋಡಿದರೂ ಗಮನಕೊಡುವುದಿಲ್ಲ. ಹಾಗೆಯೇ ಹಳ್ಳಾಡಿ ಹರ್ಕಾಡಿ ಗ್ರಾಮದಲ್ಲೂ ಈ ಗ್ರಾಮದಲ್ಲಿ ವಿಶೇಷ ಎನ್ನುವಂತೆ ದೊಡ್ಡದೆನಿಸುವ ಕೆರೆ ಇದೆ.

ಆದರೆ ಅದರ ಅಭಿವೃದ್ಧಿಯತ್ತ ಗಮನಹರಿಸಲೇಬೇಕಾದ ಹೊತ್ತಿದು. ಹಳ್ಳಾಡಿ ಹರ್ಕಾಡಿ ಗ್ರಾಮ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕುಗಳ ಸಂಗಮ ಸ್ಥಾನದಲ್ಲಿದೆ. ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ನ ವ್ಯಾಪ್ತಿಯಲ್ಲಿದೆ. ಕುಂದಾಪುರ ಇದಕ್ಕೆ ತಾಲೂಕು ಕೇಂದ್ರ.

ಈ ಗ್ರಾಮದಲ್ಲಿ ಕೃಷಿಕರೇ ಹೆಚ್ಚು. ಕೃಷಿಯ ಜತೆ ತೋಟಗಾರಿಕೆ, ಹೈನುಗಾರಿಕೆ ಇಲ್ಲಿ ಜೀವಂತಿಕೆ ತುಂಬಿರುವ ಚಟುವಟಿಕೆಗಳು. ಪ್ರಾಕೃತಿಕ ವನಸಿರಿಯನ್ನು ಹೊಂದಿದ ಗ್ರಾಮದಲ್ಲಿ ಕಾರಣಿಕ ಕ್ಷೇತ್ರದಲ್ಲಿ ಒಂದಾದ ಹೆಗ್ಡೆಕೆರೆ ಶ್ರೀ ನಂದಿಕೇಶ್ವರ ದೇವಸ್ಥಾನವಿದೆ. ಒಂದೇ ಸೂರಿನಡಿಯಲ್ಲಿ ದೈವ ಮತ್ತು ದೇವರ ಸಾನಿಧ್ಯವಿರುವುದು ಇಲ್ಲಿಯ ವಿಶೇಷ.

ಗ್ರಾಮದ ಜನಸಂಖ್ಯೆ 1,606, ವಿಸ್ತೀರ್ಣ 423.60 ಹೆಕ್ಟೇರ್‌ಗಳು. ಈ ಗ್ರಾಮದ ಪ್ರಮುಖ ರಸ್ತೆಗಳು ಕೊಂಚ ಪರವಾಗಿಲ್ಲ. ಆದರೆ ಬೇಸಗೆಯಲ್ಲಿ ಹಳ್ಳಾಡಿ ಮೇಲೆºಟ್ಟು ಪರಿಸರದಲ್ಲಿ ಅಂತರ್ಜಲಮಟ್ಟ ಕುಸಿತಗೊಂಡು, ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕಿದೆ.

ಈ ನಿಟ್ಟಿನಲ್ಲಿ ಇಲ್ಲಿರುವ ಜಲಮೂಲಗಳಲ್ಲಿ ಒಂದಾದ ಸುಮಾರು 1 ಎಕರೆಗೂ ಅಧಿಕ ವಿಸ್ತೀರ್ಣದ ಪುರಾತನ ಕೊಳ್ಕೆರೆ (ದೇವರ ಕೆರೆ) ಯನ್ನು ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಬೇಕು. ಅದರೊದಿಗೆ ವಾರಾಹಿ ಕಾಲುವೆ ನೀರನ್ನು ಇಲ್ಲಿಗೆ ಹರಿಸಿದರೆ ಬೇಸಗೆಯಲ್ಲಿ ಎದುರಾಗುವ ಶೇ.90ರಷ್ಟು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಇದು ಹಿತ್ತಲ ಮದ್ದು. ಈಗಲಾದರೂ ಬಳಸಿಕೊಳ್ಳಬೇಕು. ಇದರೊಂದಿಗೆ ಪರಿಶಿಷ್ಟ ಜಾತಿ, ಪಂಗಡದ ಕಾಲನಿ ಬಳಿ ಇರುವ ಮದಗವನ್ನೂ ಅಭಿವೃದ್ಧಿಪಡಿಸಬೇಕು.

ಜಲ ಜೀವನ್‌ ಮಿಷನ್‌ ಅಡಿಯಲ್ಲಿ ನೀರಾವರಿ ಯೋಜನೆ ಕಾಮಗಾರಿ ಚಾಲ್ತಿಯಲ್ಲಿದೆ. ಗಾವಳಿ ಸರಕಾರಿ ಪ್ರಾಥಮಿಕ ಶಾಲಾ ಸಮೀಪದಲ್ಲಿ ವಾಟರ್‌ ಟ್ಯಾಂಕ್‌ ಕೂಡಾ ನಿರ್ಮಾಣವಾಗಿದೆ.

ಆರೋಗ್ಯ ಕೇಂದ್ರ

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಸುಮಾರು 5 ಕಿ.ಮೀ. ದೂರದ ಬಿದ್ಕಲ್‌ಕಟ್ಟೆಗೆ ಕ್ರಮಿಸಬೇಕಾಗಿದೆ ಇಲ್ಲಿನ ಗ್ರಾಮಸ್ಥರು. ಇದಕ್ಕೆ ಒಂದು ಪರಿಹಾರ ಒದಗಿಸಬೇಕು. ಇದರೊಂದಿಗೆ ಸ್ಮಶಾನ ಸೌಕರ್ಯವೂ ಒದಗಬೇಕಿದೆ. ಪಶು ಚಿಕಿತ್ಸಾ ಕೇಂದ್ರದ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಿದರೆ ಮಾತ್ರ ಈ ಗ್ರಾಮ ಅಭಿವೃದ್ಧಿಯಾಗಲಿದೆ ಎಂಬುದು ಜನರ ಅಭಿಪ್ರಾಯ.

ಈ ಗ್ರಾಮದಲ್ಲಿ ವಿದ್ಯುತ್‌ ಸಮಸ್ಯೆಗಳಿಗಿಂತಲೂ ನೆಟ್‌ ವರ್ಕ್‌ ಸಮಸ್ಯೆ ದೊಡ್ಡದು. ನಗರ ಪ್ರದೇಶದಲ್ಲಿ ಖಾಸಗಿ ಕಂಪೆನಿಗಳಲ್ಲಿ ಕಾರ್ಯನಿರ್ವಹಿಸುವ ಅದೆಷ್ಟೋ ಮಂದಿ ಕೋವಿಡ್‌ ನಂತರದ ದಿನಗಳಲ್ಲಿ ವರ್ಕ್‌ ಫ್ರಾರ್ಮ್ ಹೋಂ ಗೆಂದು ಊರಿಗೆ ಬಂದಿದ್ದಾರೆ. ನೆಟ್‌ ವರ್ಕ್‌ ಸಮಸ್ಯೆಯೇ ಅವರೆಲ್ಲರ ಕಾರ್ಯ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ.

ಕಿರಿದಾದ ಹೆದ್ದಾರಿ

ಬಾರಕೂರು- ಜನ್ನಾಡಿ- ಹಾಲಾಡಿ ರಾಜ್ಯ ಹೆದ್ದಾರಿ ಈ ಗ್ರಾಮದ ಮಧ್ಯೆ ಹಾದು ಹೋಗುತ್ತಿದೆ. ರಸ್ತೆ ಇಕ್ಕೆಲಗಳಲ್ಲಿಯೇ ಅಂಗಡಿ ಮುಂಗಟ್ಟು ಹಾಗೂ ಈ ಮಾರ್ಗದಲ್ಲಿ ಘನವಾಹನಗಳ ಸಂಚಾರ ಅಧಿಕವಾಗಿದೆ. ಕೆಲವೊಮ್ಮೆ ಟ್ರಾಫಿಕ್‌ ಜಾಮ್‌ ಆಗುವುದೂ ಉಂಟು. ಈ ಕಿರಿದಾದ ಮಾರ್ಗ ರಸ್ತೆ ವಿಸ್ತರಣೆಗೊಂಡರೆ ಅನುಕೂಲವಾಗಲಿದೆ.

ಹಂತ ಹಂತವಾಗಿ ಅಭಿವೃದ್ಧಿ: ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ಕ್ರಮ ಕೈಗೊಳ್ಳಲಾಗಿದೆ. ಶ್ಮಶಾನ , ಎಸ್‌ ಎಲ್‌ಆರ್‌ಎಮ್‌ ಘಟಕ ಹಾಗೂ ಪ್ರಾಥಮಿಕ ಆರೊಗ್ಯ ಕೇಂದ್ರ ನಿರ್ಮಾಣಕ್ಕೆ ಜಾಗ ಕಾದಿರಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು. – ಚಿಟ್ಟೆಬೈಲು ಜಗನ್ನಾಥ ಶೆಟ್ಟಿ ಅಧ್ಯಕ್ಷರು, ಗ್ರಾ.ಪಂ. ಹಾರ್ದಳ್ಳಿ ಮಂಡಳ್ಳಿ

ಹಂತ ಹಂತವಾಗಿ ಅಭಿವೃದ್ಧಿ: ಹಳ್ಳಾಡಿ ಗ್ರಾಮದ ಮೇಲ್ಬಟ್ಟು ಪರಿಸರಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ಅಂತರ್ಜಲ ವೃದ್ದಿಗಾಗಿ ಪುರಾತನ ಕೊಳ್ಕೆರೆಗೆ ವಾರಾಹಿ ನೀರು ಹರಿಸಿದರೆ ಅನುಕೂಲವಾಗಲಿದೆ. ಗ್ರಾಮದಲ್ಲಿ ಶ್ಮಶಾನಗಳಿಲ್ಲದೇ ಖಾಸಗಿ ಜಾಗವನ್ನು ಅವಲಂಬಿಸಬೇಕಾದ ಸ್ಥಿತಿಯಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. – ಸುರೇಶ್‌ ಮೊಗವೀರ ಹಳ್ಳಾಡಿ , ಸ್ಥಳೀಯರು

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟೆ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.