ಗಾಳಿ ಮಳೆಗೆ ಮರ ಉರುಳಿ ಬಿದ್ದು ಮನೆ ಜಖಂ
Team Udayavani, May 12, 2020, 5:30 AM IST
ಕೊಲ್ಲೂರು: ಇಲ್ಲಿನ ಸುಬ್ಬರಸನ ತೊಪ್ಲು ಎಂಬಲ್ಲಿ ಮೇ 10ರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಮರವೊಂದು ಬುಡ ಸಮೇತ ಮನೆಯ ಮೇಲೆ ಉರುಳಿ ಬಿದ್ದು ಮನೆ ಜಖಂ ಗೊಂಡಿದೆ.
ಇಲ್ಲಿನ ನಿವಾಸಿ ಬಾಬು ಭಂಡಾರಿ ಅವರ ಮನೆಯ ಸನಿ ಹದ ಭಾರೀ ಗಾತ್ರದ ಮರವೊಂದು ರವಿವಾರ ಬೀಸಿದ ಸುಂಟರ ಗಾಳಿಗೆ ಬುಡ ಸಮೇತ ಉರುಳಿ ಮನೆಯ ಮೇಲೆ ಬಿದ್ದು ಮನೆಯ ಮುಂಭಾಗವು ಸಂಪೂರ್ಣವಾಗಿ ಹಾನಿಗೊಂಡಿದೆ. ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಕೊಲ್ಲೂರು ಗ್ರಾಪಂ ಅಧ್ಯಕ್ಷ ಕೆ. ಪ್ರಕಾಶ್ ಪೂಜಾರಿ, ಗ್ರಾಮ ಲೆಕ್ಕಿಗ ವಿರೇಶ್ ಸ್ಥಳಕ್ಕೆ ಭೇಟಿಯಿತ್ತು ಉಂಟಾದ ನಷ್ಟದ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ