ಕಡಲಾಮೆ ತಾಣವಾಗುತ್ತಿರುವ ಕೋಡಿ


Team Udayavani, Jan 27, 2021, 3:00 AM IST

ಕಡಲಾಮೆ ತಾಣವಾಗುತ್ತಿರುವ ಕೋಡಿ

ಕುಂದಾಪುರ: ಕೋಡಿ ಕಡಲತೀರದ ಲೈಟ್‌ಹೌಸ್‌ ಬಳಿ ಮಂಗಳವಾರ ಮತ್ತೂಮ್ಮೆ ಕಡಲಾಮೆಯ ಮೊಟ್ಟೆಗಳು ಪತ್ತೆಯಾಗಿದ್ದು ಸ್ಥಳೀಯರು ರಕ್ಷಿಸಿದ್ದಾರೆ.

ಈಗಾಗಲೇ ಜ. 21,   24ರಂದು ಮೊಟ್ಟೆಗಳು ದೊರೆತಿದ್ದು ಜ. 26ರಂದು ಕೂಡ ಪತ್ತೆಯಾಗಿವೆ. ಸ್ಥಳೀಯ ಮೀನು ಗಾರರಾದ ಬಾಬು ಮೊಗವೀರ ಹಾಗೂ ಗಣಪತಿ ಖಾರ್ವಿ ಅವರಿಗೆ ಬೆಳಗ್ಗೆ 6.30ರ ವೇಳೆಗೆ, ಈ ಮೊದಲು ಪತ್ತೆಯಾದ ಸ್ಥಳಕ್ಕಿಂತ 50 ಮೀ. ದೂರದಲ್ಲಿ ಮೊಟ್ಟೆಗಳು ದೊರೆತಿವೆ. ಮೊಟ್ಟೆ ಇಟ್ಟು ಹೋದ ಆಮೆ ಮೀನಿನ ಬಲೆಯೊಂದರಲ್ಲಿ ಸಿಲುಕಿದ್ದು ಅದನ್ನು ರಕ್ಷಿಸಲಾಯಿತು. ತತ್‌ಕ್ಷಣ ಅವರು ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಹಾಗೂ ಎಫ್ಎಸ್‌ಎಲ್‌ ಇಂಡಿಯಾದ ಸದಸ್ಯರಿಗೆ ಮಾಹಿತಿ ನೀಡಿದರು.

ಪತ್ತೆಯಾದ ಮೊಟ್ಟೆಗಳನ್ನು ಸಂರಕ್ಷಿಸ ಲಾಯಿತು. ಅರಣ್ಯ ಇಲಾಖೆ ಎಸಿಎಫ್ ಲೋಹಿತ್‌, ಆರ್‌ಎಫ್ಒ ಪ್ರಭಾಕರ ಕುಲಾಲ್‌, ಅರಣ್ಯ ರಕ್ಷಕ ಆನಂದ ಬಳೆಗಾರ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್‌ನ  ಭರತ್‌ ಬಂಗೇರ, ಎಫ್ಎಸ್‌ಎಲ್‌ ಇಂಡಿಯಾದ ವೆಂಕಟೇಶ್‌ ಶೇರುಗಾರ್‌, ದಿನೇಶ್‌ ಸಾರಂಗ, ಮೀನುಗಾರರಾದ ಉದಯ ಖಾರ್ವಿ, ಸಚಿನ್‌ ಪೂಜಾರಿ, ಲಕ್ಷ್ಮಣ ಪೂಜಾರಿ, ಸಂಪತ್‌ ಪೂಜಾರಿ, ರಾಘವೇಂದ್ರ ಮೊಗವೀರ, ಸಂದೇಶ ಅಮೀನ್‌, ಲಕ್ಷ್ಮಣ ಖಾರ್ವಿ, ಅಶೋಕ್‌ ಮೊಗವೀರ, ನರಸಿಂಹ ಖಾರ್ವಿ, ಮಾಧವ ಖಾರ್ವಿ, ಸತೀಶ್‌ ಅಮೀನ್‌, ಗೋಪಾಲ ಖಾರ್ವಿ  ಮೊದಲಾದವರು ಇದ್ದರು.

ಕೋಡಿ ಕಡಲತೀರ ಕಳೆದ 78 ವಾರಗಳಿಂದ ಸತತವಾಗಿ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್, ಎಫ್ಎಸ್‌ಎಲ್‌ ಇಂಡಿಯಾ ಹಾಗೂ ಸ್ವಯಂಸೇವಕರ ಶ್ರಮದಿಂದ ಸ್ವತ್ಛಗೊಳ್ಳುತ್ತಿದೆ. ಇದರ ಫ‌ಲಶ್ರುತಿಯಾಗಿ ಸ್ವತ್ಛವಾದ ಕಡಲತಡಿಯಲ್ಲಿ ಕಡಲಾಮೆ ಗಳು ಮೊಟ್ಟೆ ಇಡುತ್ತಿವೆ. ಅರಣ್ಯ ಇಲಾಖೆ ಈ ಕಾರ್ಯದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದು ಸ್ಥಳೀಯವಾಗಿ ಮೊಟ್ಟೆಗಳನ್ನು ರಕ್ಷಿಸುತ್ತಿರುವವರನ್ನು ಅಭಿನಂದಿಸಿ ಪ್ರೋತ್ಸಾಹ ನೀಡುತ್ತಿದೆ. ಮಂಗಳೂರು ಡಿಸಿಪಿ ಹರಿರಾಮ್‌ ಶಂಕರ್‌ ಅವರು ಕೂಡ ಸ್ಥಳೀಯರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.

ಸ್ವತ್ಛ ಕಡಲ ತೀರದಲ್ಲಿ ಮೂರು ವರ್ಷಗಳ ಅನಂತರ ಕಡಲಾಮೆಗಳು ಮೊಟ್ಟೆ ಇಡಲು ಆಗಮಿಸುತ್ತಿರುವುದು ಸಂತಸದ ವಿಚಾರವಾಗಿದ್ದು ಮೊಟ್ಟೆ ಇಟ್ಟು ಮರಳಿ ಹೋಗುವಾಗ ಬಲೆಗೆ ಸಿಲುಕಿಕೊಳ್ಳುತ್ತಿವೆ. ಆದ್ದರಿಂದ ಈ ಭಾಗದಲ್ಲಿ ಬಲೆ ಹಾಕುವಾಗ ತುಸು ಎಚ್ಚರಿಕೆಯಿಂದ ಮೀನುಗಾರಿಕೆ ಮಾಡಬೇಕೆಂದು ಎಫ್ಎಸ್‌ಎಲ್‌ ಇಂಡಿಯಾ ವಿನಂತಿಸಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.