ಉಡುಪಿ: ಪಂಚಾಯತ್‌ಗೊಂದು ಹೃದಯ ಕೇಂದ್ರ

5 ಕಿ.ಮೀ.ಗೊಂದು ಟೆಲಿಮೆಡಿಸಿನ್‌ ಕೇಂದ್ರ ಹೊಂದಿದ ದೇಶದ ಮೊದಲ ಜಿಲ್ಲೆ

Team Udayavani, Nov 24, 2021, 7:55 AM IST

ಉಡುಪಿ: ಪಂಚಾಯತ್‌ಗೊಂದು ಹೃದಯ ಕೇಂದ್ರ

ಕುಂದಾಪುರ: ಹಳ್ಳಿಗಾಡಿನ ಮಂದಿ ಎದೆನೋವು, ಹೃದಯಾ ಘಾತವಾದಾಗ ಇನ್ನು ಮುಂದೆ ಆ್ಯಂಬುಲೆನ್ಸ್‌ಗೆ ಒದ್ದಾಡಿ, ಆಸ್ಪತ್ರೆಗೆ ಹೋಗಲು ಪರದಾಡಬೇಕಿಲ್ಲ. ಪಂಚಾಯತ್‌ ಕಚೇರಿಗಳಲ್ಲಿ ತುರ್ತು ಸಂದರ್ಭಕ್ಕೆ ಒದಗುವಂತೆ ಹೃದ್ರೋಗ, ರಕ್ತದೊತ್ತಡ, ಮಧುಮೇಹ ತಪಾಸಣೆ ಮಾಡಿ ಜೀವ ಉಳಿಸುವ ಕಾಯಕಕ್ಕೆ ಚಾಲನೆ ದೊರೆತಿದೆ. ಪ್ರತೀ 5 ಕಿ.ಮೀ.ಗೊಂದು ಟೆಲಿಮೆಡಿಸಿನ್‌ ಕೇಂದ್ರ ಹೊಂದಿದ ದೇಶದ ಮೊದಲ ಜಿಲ್ಲೆ ಉಡುಪಿ ಎನಿಸಿಕೊಳ್ಳಲಿದೆ.

ಸ್ವತಃ ವೈದ್ಯರಾದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ನೇತೃತ್ವದಲ್ಲಿ ಯೋಜನೆ ಜಾರಿಯಾಗುತ್ತಿದ್ದು ಮಂಗಳೂರು ಕೆಎಂಸಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ| ಪದ್ಮನಾಭ ಕಾಮತ್‌ ವೈದ್ಯಕೀಯ ನೆರವಿಗೆ ಒಪ್ಪಿದ್ದಾರೆ.

ಸದಾಶಯ
ಕೊರೊನೋತ್ತರ ದಿನಗಳಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆ, ಹೃದಯ ಸಮಸ್ಯೆಗಳ ಆತಂಕಕ್ಕೆ ಇದು ಕಡಿವಾಣ ಹಾಕಲಿದೆ. ಹೃದಯ ಸಂಬಂಧಿ ತೊಂದರೆಉಂಟಾದಾಗ 50-75 ಕಿ.ಮೀ. ದೂರದ ಆಸ್ಪತ್ರೆಗೆ ಬಂದು ತಪಾಸಣೆ ನಡೆದು ಚಿಕಿತ್ಸೆ ಸಿಗುವ ವೇಳೆ ಪರಿಸ್ಥಿತಿ ಶೋಚನೀಯವಾಗಿರುತ್ತದೆ. ಇಂತಹ ಸಂಕಟದಿಂದ ಪಂಚಾಯತ್‌ ಹೃದಯ ಕೇಂದ್ರ ಪಾರು ಮಾಡಲಿದೆ.

ತರಬೇತಿ
ಆಸಕ್ತ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಪಂಚಾಯತ್‌ ಪಿಡಿಒ, ಡಾಟಾ ಎಂಟ್ರಿ ಆಪರೇಟರ್‌, ಸಿಬಂದಿ, ಅಧ್ಯಕ್ಷ, ಸದಸ್ಯರಿಗೆ ಇಸಿಜಿ ನಿರ್ವಹಣೆಯ ತರಬೇತಿ ನೀಡಲಾಗುವುದು. ಯಂತ್ರವನ್ನು ಪಂಚಾಯತ್‌ ಕಚೇರಿಯಲ್ಲಿಯೇ ಇಡಲಾಗುವುದು. ಜನತೆ ಹಗಲು-ರಾತ್ರಿ ಎನ್ನದೇ ಆಪತ್ಕಾಲದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಪರೀಕ್ಷಾ ವರದಿಯನ್ನು ಹೃತ್ಕುಕ್ಷಿ ಆ್ಯಪ್‌ನಲ್ಲಿ ವೈದ್ಯರು ನೋಡಿ ಟೆಲಿಮೆಡಿಸಿನ್‌ ಮಾದರಿಯಲ್ಲಿ ಸಲಹೆ ನೀಡುತ್ತಾರೆ. ಸಮೀಪದ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಬಹುದು.

ಯಂತ್ರ ಒದಗಣೆ
ಜಿಲ್ಲೆಯಲ್ಲಿ 155 ಗ್ರಾ.ಪಂ.ಗಳಿದ್ದು, ಮೊದಲ ಹಂತದಲ್ಲಿ 50ರಲ್ಲಿ ತುರ್ತು ಪರೀಕ್ಷಾ ಸಲಕರಣೆಗಳನ್ನು ಇಡಲಾಗುತ್ತಿದೆ. ಕುಂದಾಪುರ ತಾಲೂಕಿನ 29 ಪಂಚಾಯತ್‌ಗಳಿಗೆ ನೀಡಲಾಗಿದೆ. ಉಡುಪಿಯ 21 ಪಂಚಾಯತ್‌ಗಳಿಗೆ ಈ ವಾರ ವಿತರಿಸಲಾಗುತ್ತಿದೆ. ಕಾರ್ಕಳ ಹಾಗೂ ಕಾಪು ತಾಲೂಕಿಗೆ ವ್ಯವಸ್ಥೆಯಾಗಬೇಕಿದೆ. ಜಿಲ್ಲೆಯ 50 ಪಂಚಾಯತ್‌ಗಳಿಗೆ ಕರ್ಣಾಟಕ ಬ್ಯಾಂಕ್‌ ಏಕಕಂತಿನಲ್ಲಿ ಇಸಿಜಿ ಯಂತ್ರಗಳನ್ನು ನೀಡಿದೆ. ಉಳಿದ ಯಂತ್ರಗಳಿಗೆ ಇತರ ಕಾರ್ಪೊರೆಟ್‌ ಕಂಪೆನಿಗಳ ಸಿಎಸ್‌ಆರ್‌ ನಿಧಿಯನ್ನು ಬಳಸಲಾಗುತ್ತದೆ. ಅದೇ ರೀತಿ ಟೆಲಿಮೆಡಿಸಿನ್‌ಗೆ ಡಾ| ಪದ್ಮನಾಭ ಕಾಮತ್‌ ಅವರೇ ನೆರವಾಗಲಿದ್ದಾರೆ. ಡಾ| ಕಾಮತ್‌ ಕಾರ್ಡಿಯೋ ಅಟ್‌ ಡೋರ್‌ಸ್ಟೆಪ್‌ ಯೋಜನೆಯಲ್ಲಿ 25 ಜಿಲ್ಲೆಗಳಲ್ಲಿ 500 ಯಂತ್ರಗಳನ್ನು ದಾನಿಗಳ ಮೂಲಕ ನೀಡಿದ್ದಾರೆ.

ರಾಜ್ಯಕ್ಕೆ ವಿಸ್ತರಣೆ
2019-20ರಲ್ಲಿ ರಾಜ್ಯ ಸರಕಾರ ಗ್ರಾಮೀಣ ಆರೋಗ್ಯ ಕೇಂದ್ರ ಯೋಜನೆಯಲ್ಲಿ ಶಾಲೆ ಇತ್ಯಾದಿಗಳಿಗೆ ಮಧುಮೇಹ, ರಕ್ತದೊತ್ತಡ ಪರೀಕ್ಷೆಗೆ ಯಂತ್ರಗಳನ್ನು ನೀಡಿತ್ತು. ಅದು ನಿರೀಕ್ಷಿತ ಫ‌ಲ ನೀಡಲಿಲ್ಲ. ಉಡುಪಿ ಜಿಲ್ಲೆಯಲ್ಲಿ ಈಗ ಹೃದಯ ಕೇಂದ್ರ ಪೈಲಟ್‌ ಮಾದರಿಯಲ್ಲಿ ಯೋಜನೆ ಜಾರಿಯಾಗುತ್ತಿದ್ದು 6 ತಿಂಗಳು ಸಾಧಕ, ಬಾಧಕ ಗಮನಿಸಲಾಗುತ್ತದೆ. ಪರಿಣಾಮಕಾರಿ ಎನಿಸಿದರೆ ಬಳಿಕ ರಾಜ್ಯದ ಎಲ್ಲ (6,008) ಪಂಚಾ ಯತ್‌ಗಳಲ್ಲಿ ಜಾರಿಗೊಳಿ ಸಲು ಪಂಚಾಯತ್‌ ರಾಜ್‌ ಇಲಾಖೆ ಆಸಕ್ತಿ ತೋರಿಸಿದೆ.

ಪೈಲಟ್‌ ಯೋಜನೆಯಾಗಿ ಜಾರಿಯಾಗುತ್ತಿದೆ. ಆರೋಗ್ಯ ರಕ್ಷಾ ಸಮಿತಿ ಮೂಲಕ ಆರೋಗ್ಯ ತಪಾಸಣೆ ಪರಿಕರಗಳ ನಿರ್ವಹಣೆ ಮಾಡಲಾಗುವುದು. ಅಗತ್ಯವುಳ್ಳ ಸಿಬಂದಿಗೆ ತರಬೇತಿ ನೀಡಲಾಗುವುದು. ದಾನಿಗಳು, ವೈದ್ಯರು, ಆಸ್ಪತ್ರೆಗಳು ಮುಂದೆ ಬಂದರೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು.
– ಡಾ| ನವೀನ್‌ ಭಟ್‌,
ಉಡುಪಿ ಜಿ.ಪಂ. ಸಿಇಒ

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.