ಅನಿರೀಕ್ಷಿತ ಲಾಕ್‌ಡೌನ್‌: ಹಳ್ಳಿಯಲ್ಲೇ ಬದುಕು ಕಂಡ ಸ್ಪೇನ್‌ ಯುವತಿ


Team Udayavani, Jul 28, 2020, 12:12 PM IST

ಅನಿರೀಕ್ಷಿತ ಲಾಕ್‌ಡೌನ್‌: ಹಳ್ಳಿಯಲ್ಲೇ ಬದುಕು ಕಂಡ ಸ್ಪೇನ್‌ ಯುವತಿ

ಬೈಂದೂರು: ಲಾಕ್‌ ಡೌನ್‌ ಹಲವು ಸಮಸ್ಯೆಗಳಿಗೆ ನಾಂದಿಯಾದರೆ ಇನ್ನು ಕೆಲವರಿಗೆ ಹೊಸ ಅನುಭವ ನೀಡಿದೆ. ಸ್ಪೇನ್‌ ದೇಶದಿಂದ ದಕ್ಷಿಣ ಭಾರತ ಪ್ರವಾಸಕ್ಕೆ ಬಂದು ಲಾಕ್‌ಡೌನ್‌ ಕಾರಣದಿಂದ ಹಿಂದಿರುಗಲಾಗದೆ ಬೈಂದೂರು ಸಮೀಪದ ಹೇರಂಜಾಲಿನಲ್ಲಿ ವಿದೇಶಿ ಮಹಿಳೆ ನಾಲ್ಕು ತಿಂಗಳಿಂದ ಉಳಿದುಬಿಟ್ಟಿದ್ದಾರೆ.

ಇಲ್ಲಿನ ಕೃಷ್ಣ ಪೂಜಾರಿ ಅವರ ಮನೆಯಲ್ಲಿ ತಂಗಿರುವ ತೆರೆಸಾ ಹಳ್ಳಿ ಬದುಕಿನೊಂದಿಗೆ ಬೆರೆತು ಹೋಗಿದ್ದಾರೆ. ಕ್ರಿಯಾಶೀಲ ವ್ಯಕ್ತಿತ್ವದ ಇವರು ಮನೆಮಂದಿ ಜತೆ ಕೃಷಿ ಕಾರ್ಯದಲ್ಲಿ ಭಾಗಿಯಾಗುತ್ತಾರೆ. ಗೊಬ್ಬರ ಹೊತ್ತು ಗದ್ದೆ, ತೋಟಕ್ಕೆ ಹಾಕುತ್ತಾರೆ. ಪೂಜಾರಿ ಅವರ ತಾಯಿ ಚಿಕ್ಕಮ್ಮ ಪೂಜಾರಿ ಅವರಿಂದ ರಂಗೋಲಿ ಹಾಕಲು, ದನದ ಹಾಲು ಕರೆಯಲು, ಮಡಲು (ತೆಂಗಿನ ಗರಿ) ನೇಯಲು ಕಲಿತಿದ್ದಾರೆ. ಊರಿನ ಜನ ಮಾತನಾಡುವ ಕುಂದಾಪ್ರ ಕನ್ನಡದ ಹಲವು ಪದಗಳನ್ನು ಆಡಲು, ಮಕ್ಕಳಿಂದ ಕನ್ನಡ ಅಕ್ಷರಗಳನ್ನು ಬರೆಯಲು ಪ್ರಯತ್ನಪಡುತ್ತಿದ್ದಾರೆ. ಮನೆಯಲ್ಲಿ ಮಾಡುವ ತಿಂಡಿಗಳಾದ ಕೊಟ್ಟೆಕಡುಬು, ಇಡ್ಲಿ, ದೋಸೆ, ಚಿಕ್ಕನ್‌ ಸುಕ್ಕ, ಮೀನುಸಾರು, ತರಕಾರಿ ಸಾಂಬಾರು ನನಗೆ ಇಷ್ಟವಾಗಿಬಿಟ್ಟಿದೆ ಎಂದು ಬಾಯಿ ಚಪ್ಪರಿಸುತ್ತಾರೆ.

ಹೊಸಬರನ್ನು ಕಂಡೊಡನೆ ಮುಖವಿಡೀ ಅರಳಿಸಿ ನಗೆಯಾಡುವ ತೆರೆಸಾ ‘ಹಾಯ್‌ ಹೇಂಗಿದ್ರಿ’ ಅಂತ ಕೇಳುತ್ತಾರೆ. ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಹಿನ್ನೆಲೆಯಲ್ಲಿ ಮನೆಯವರು ಕಲಿಸಿಕೊಟ್ಟ ‘ಕುಂದಾಪ್ರ ಭಾಸಿ ಚೆಂದ್‌ ಗೋಂಪಿ’ (ಕುಂದಾಪ್ರ ಭಾಷೆ ಅತ್ಯಂತ ಸುಂದರ) ಎಂದು ಸ್ಪೇನಿಶ್‌ ಧಾಟಿಯಲ್ಲಿ ಉತ್ತರಿಸುತ್ತಾರೆ.

ಮುಂಬಯಿಯಲ್ಲಿ ಅಮೆರಿಕದ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಕೃಷ್ಣ ಪೂಜಾರಿ ಜತೆಗೆ ತೆರೆಸಾ ಅಣ್ಣನೂ ದುಡಿಯುತ್ತಿದ್ದಾರೆ. ಹಾಗಾಗಿ ಎಂಟು ವರ್ಷಗಳಿಂದ ತೆರೆಸಾ ಪರಿಚಯ. ‘ನಮ್ಮದು ದೇಶದ ಗಡಿಗಳನ್ನು ಮೀರಿದ ಮಾನವೀಯ ಸಂಬಂಧ. ಸ್ವದೇಶಕ್ಕೆ ಮರಳಲಾಗದೆ ತೊಂದರೆಗೆ ಸಿಲುಕಿರುವ ಅವರು ಆ ಕಾರಣದಿಂದ ನಮ್ಮಲ್ಲಿಗೆ ಬಂದಿದ್ದಾರೆ. ಅಲ್ಪಸ್ವಲ್ಪ ಕನ್ನಡ ಕಲಿತಿದ್ದರಿಂದ, ನಮ್ಮ ಎಲ್ಲ ಚಟುವಟಿಕೆಗಳಲ್ಲಿ ಸಂತಸದಿಂದ ಭಾಗಿಯಾಗುತ್ತಿರುವುದರಿಂದ ಅವರು ನಾಲ್ಕು ತಿಂಗಳಿನಿಂದ ನಮ್ಮೂರ, ನಮ್ಮ ಮನೆಯ ಹುಡುಗಿ ಆಗಿದ್ದಾರೆ. ಸದ್ಯ ಲಾಕ್‌ಡೌನ್‌ ಕಾರಣದಿಂದ ಅವರು ಮನೆಯಲ್ಲೇ ಇರುತ್ತಾರೆ ಎಂದು ಕೃಷ್ಣ ಪೂಜಾರಿ ಹೇಳುತ್ತಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.