ಉಪ್ಪುಂದ: ಹಾಲು ಕುಡಿಸಿ ಮಲಗಿಸಿದ 4 ತಿಂಗಳ ಮಗು ಸಾವು
Team Udayavani, Aug 29, 2022, 9:12 PM IST
ಉಪ್ಪುಂದ: ಹಾಲು ಕುಡಿಸಿ ಮಲಗಿಸಿದ ಮಗುವಿನ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಪರಿಣಾಮ ಮಗು ಮೃತಪಟ್ಟ ಘಟನೆ ಆ. 27ರಂದು ಸಂಭವಿಸಿದೆ.
ಉಪ್ಪುಂದ ಗ್ರಾಮದ ಜನತಾ ಕಾಲನಿ ಗಣೇಶನ ಮನೆಯ ಸಾನ್ವಿತಾ (4 ತಿಂಗಳು) ಮೃತಪಟ್ಟ ಮಗು. ತಾಯಿ ಶೈಲಾ ಅವರು ಆ. 27ರಂದು ರಾತ್ರಿ 11 ಗಂಟೆಗೆ ಮಗುವಿಗೆ ಹಾಲು ಕುಡಿಸಿ ಮಲಗಿಸುವ ವೇಳೆ ಸಾನ್ವಿತಾಳು ಒಮ್ಮೆಲೇ ಜೋರಾಗಿ ಅಳುತ್ತಿದ್ದು, ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಬೈಂದೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಮಗುವನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಕುಂದಾಪುರಕ್ಕೆ ಹೋಗುವಂತೆ ತಿಳಿಸಿದ್ದರು.
ಅದರಂತೆ ಕುಂದಾಪುರ ಖಾಸಗಿ ಆಸ್ಪತ್ರೆಗೆ ರಾತ್ರಿ 12.15ಗಂಟೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ದಾರಿ ಮಧ್ಯದಲ್ಲಿಯೇ ಸಾನ್ವಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ