ಉಪ್ಪುಂದ ; ರೈಲು ಢಿಕ್ಕಿ, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು
Team Udayavani, May 5, 2022, 9:40 PM IST
ಉಪ್ಪುಂದ ; ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಗೆ ಆಕಸ್ಮಿಕವಾಗಿ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮೇ.4ರಂದು ಸೇನಾಪುರ ಗ್ರಾಮದ ಗುಡ್ಡೆಯಂಗಡಿಯಲ್ಲಿ ನಡೆದಿದೆ.
ಆಲೂರು ಗ್ರಾಮದ ಮೂಡು ತಾರಿಬೇರು ಗುಡ್ಡಿಮನೆ ಶ್ರೀದೇವಿ ನಿಲಯ ಸೂರ ದೇವಾಡಿಗ (85) ಮೃತಪಟ್ಟ ವ್ಯಕ್ತಿ.
ಮೇ.4ರಂದು ಗುಡ್ಡೆಯಂಗಡಿ ಪೇಟೆಯಲ್ಲಿರುವ ಅಳಿಯನ ಹೋಟೆಲ್ ಗೆ ಹೋಗಿ ಮಾತನಾಡಿ ಹೋಟೆಲ್ ನಿಂದ ಮನೆಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ. ಸೇನಾಪುರ ಗ್ರಾಮದ ಗುಡ್ಡೆಯಂಗಡಿ ಬಳಿ ರೈಲ್ವೆ ಟ್ರಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೂರ ದೇವಾಡಿಗರವರಿಗೆ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದು ಮೃತಪಟ್ಟಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇದನ್ನೂ ಓದಿ : ಕೊರಟಗೆರೆ : ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಮೂವರು ಅಂತರಾಜ್ಯ ಕಳ್ಳಿಯರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು