ರೈತರ ಗದ್ದೆಗೆ ಇನ್ನೂ ಹರಿದಿಲ್ಲ ವಾರಾಹಿ ನೀರು

 1979ರಲ್ಲಿ ವಾರಾಹಿ ಯೋಜನೆ ಆರಂಭ , 42 ವರ್ಷಗಳು ಕಳೆದರೂ ಸಮಯಕ್ಕೆ ದೊರಕದ ಎಡದಂಡೆ ನೀರು

Team Udayavani, Dec 17, 2021, 8:00 AM IST

ರೈತರ ಗದ್ದೆಗೆ ಇನ್ನೂ ಹರಿದಿಲ್ಲ ವಾರಾಹಿ ನೀರು

ಕುಂದಾಪುರ: ಸಕಾಲದಲ್ಲಿ ಬಂದ ಮಳೆ ಅಕಾಲದಲ್ಲಿಲ್ಲೂ ಸುರಿದು ಚಂಡಮಾರುತದ ದೆಸೆಯಿಂದ ಇನ್ನಷ್ಟು ಹಾನಿ ಮಾಡಿದ್ದು ಈ ವರ್ಷ ಕೃಷಿಕರ ಪಾಲಿಗೆ ಹೊಡೆತ. ಭತ್ತದ ಕೃಷಿಗೆ ಅಪಾರ ಹಾನಿಯಾಗಿದ್ದು ಮೊದಲ ಬೆಳೆ ಬೆಳೆದ ರೈತನ ಭತ್ತ ಕಟಾವು ಮಾಡಲು ಸಾಧ್ಯವಾಗದೆ ಗದ್ದೆಯಲ್ಲೇ ಮತ್ತೆ ಮೊಳಕೆಯೊಡೆದ ಉದಾಹರಣೆಯೂ ಇದೆ. ಇಂತಹ ಸನ್ನಿವೇಶದಲ್ಲಿ ಎರಡನೇ ಬೆಳೆಯಾದರೂ ಸರಿಯಾಗಿ ಮಾಡಬಹುದೇ ಎಂಬ ನಿರೀಕ್ಷೆಯಲ್ಲಿ ಇರುವ ರೈತನ ಪಾಲಿಗೆ ವಾರಾಹಿ ನೀರಾವರಿ ನಿಗಮ ಇನ್ನೂ ಕಣ್ತೆರೆದಿಲ್ಲ.

ನೀರು ಹರಿಸಿಲ್ಲ:

ವಾರಾಹಿ ನೀರಾವರಿ ಯೋಜನೆಯ ಮೂಲಕ ಹಿಂಗಾರು ಕೃಷಿಗೆ ಮತ್ತು ತೋಟಗಾರಿಕೆ  ಮತ್ತು ಇತರ ಕೃಷಿ ಉದ್ದೇಶಗಳಿಗೆ ಪ್ರತೀ ವರ್ಷ ಡಿಸೆಂಬರ್‌ 1ರಂದು  ಕಾಲುವೆಗೆ ನೀರು ಹಾಯಿಸುವುದಾಗಿ ಇಲಾಖೆ ಈ ಹಿಂದೆ ಭರವಸೆ ನೀಡಿತ್ತು.ಆದರೆ ಈ ವರ್ಷ ಈ ತನಕ  ಕಾಲುವೆಗೆ ನೀರು ಹಾಯಿಸಿಲ್ಲ. ಭತ್ತದ 2ನೇ ಬೆಳೆ ಬಿತ್ತನೆ ಸೇರಿದಂತೆ ಮುಂದುವರಿದ ಕೃಷಿ ಚಟುವಟಿಕೆಗೆ ವಾರಾಹಿ ಕಾಲುವೆ ನೀರು ಅಗತ್ಯವಾಗಿದೆ. ಮೊದಲ ನಾಲ್ಕು ವರ್ಷ ಪ್ರತೀ ಸಲ ಡಿ.1ರ ಅಂದಾಜಿಗೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತಿತ್ತು. 2019ರಲ್ಲಿ  ಡಿ. 15ರ ಅಂದಾಜಿಗೆ ನೀರು ಬಿಡಲಾಗಿತ್ತು. ಕಳೆದ ವರ್ಷ ಡಿಸೆಂಬರ್‌ ಅಂತ್ಯದಲ್ಲಿ ನೀರು ಹರಿದಿತ್ತು.  ಈ ಬಾರಿ ಇನ್ನೂ ದಿನ ಘೋಷಿಸಿಲ್ಲ.

ರೈತರಲ್ಲಿ  ಆತಂಕ:

ಮುಂಗಾರು  ಭತ್ತದ  ಬೆಳೆ ಬೆಳೆದು ಅಕಾಲಿಕ ಮಳೆಯಿಂದ ರೈತರು ನಷ್ಟ ಅನುಭವಿಸಿದ್ದು, ಹಿಂಗಾರು ಬೆಳೆಗೆ  ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಭತ್ತದ ಸಸಿ ಸಹ ತಯಾರಿ ಮಾಡಿಕೊಂಡಾಗಿದೆ. ಇತರ ಕೃಷಿಕರೂ ವಾರಾಹಿ ನೀರಿನ ದಾರಿ ನೋಡುತ್ತಿದ್ದಾರೆ. ಹಾಗಿದ್ದರೂ ವಾರಾಹಿ ಇಲಾಖೆಯು ಕಾಲುವೆಗೆ ನೀರು ಹಾಯಿಸಲು ವಿಳಂಬ ಮಾಡುತ್ತಿರುವುದರಿಂದ ರೈತರು ಆತಂಕಗೊಂಡಿರುತ್ತಾರೆ.

ವಿದ್ಯುದಾಗರ:

ಸಿದ್ದಾಪುರದ ಹೊರಿಯಬ್ಬೆ ಎಂಬಲ್ಲಿ ಭೂಗರ್ಭ ಜಲ ವಿದ್ಯುದಾಗಾರ ಇದ್ದು ವಿದ್ಯುತ್‌ ಉತ್ಪಾದನೆಗೆ ಉಪಯೋಗಿಸಿದ ಬಳಿಕ 1,100 ಕ್ಯುಸೆಕ್ಸ್‌ ನೀರು ಪ್ರತಿದಿನ ಎಡದಂಡೆ ಹಾಗೂ ಬಲದಂಡೆಗಳ ಮೂಲಕ ಹರಿಸಿ ಉಪಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರೊದಗಿಸಬೇಕೆನ್ನುವುದು ಯೋಜನೆಯ ಆಶಯ. 35 ವರ್ಷ ಕಳೆದರೂ ಎಡದಂಡೆ ಯೋಜನೆಯ ಮೂಲಕ ರೈತರಿಗೆ ನೀರು ಸಮ ಯಕ್ಕೆ ದೊರೆಯಲಿಲ್ಲ.

ರೈತ ಸಂಘ ಪತ್ರ:

ರೈತರು ಈ ಕುರಿತು ಇಲಾಖೆಗೆ ಅನೇಕ ಬಾರಿ ಮನವಿ ಮಾಡಿದರೂ ಇಲಾಖೆ ಸ್ಪಂದಿಸದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ  ರೈತ ಸಂಘಕ್ಕೆ ಮನವಿ ಸಲ್ಲಿಸಿದ್ದು, ಉಡುಪಿ ಜಿಲ್ಲಾ  ರೈತ ಸಂಘದಿಂದ ಕೂಡಲೇ  ಕಾಲುವೆಗೆ ನೀರು  ಹಾಯಿಸುವಂತೆ ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದೆ.

ಅನುಮಾನ:

ಪ್ರತೀ ವರ್ಷ ಹೀಗೆ  ಕಾಡಿ ಬೇಡಿ ನೀರು ಪಡೆಯುವ ಪರಿಸ್ಥಿತಿ ರೈತರದ್ದಾಗಿದ್ದು ಕಾಲುವೆಗೆ  ನೀರು ಹರಿಸುವ ದಿನಾಂಕದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಕೂಡ  ಇಲಾಖೆಯವರು ರೈತರಿಗೆ ನೀಡದೆ ಇರುವುದು ದುರದೃಷ್ಟಕರ. ಇದರ ಹಿಂದೆ ಗುತ್ತಿಗೆದಾರರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕೈವಾಡವಿರುವ ಬಗ್ಗೆ ಸಾರ್ವಜನಿಕರಿಗೆ ಅನುಮಾನ ವ್ಯಕ್ತವಾಗುತ್ತಿದೆ. ಯಾವುದೇ ಸುಳ್ಳು ಕಾರಣ ಕೊಡದೆ ಕೂಡಲೇ ಕಾಲುವೆಗೆ ನೀರು ಹಾಯಿಸಬೇಕು ಎಂದು ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್‌ ಶೆಟ್ಟಿ  ಹೇಳುತ್ತಾರೆ.

42  ವರ್ಷ :

ವಾರಾಹಿ ಯೋಜನೆಗೆ ಭರ್ತಿ ನಲುವತ್ತೆರಡು ವರ್ಷ. 1979ರಲ್ಲಿ ಆರಂಭವಾದ ಯೋಜನೆ ಕುಂಟುತ್ತಾ ಸಾಗಿ ಎಡದಂಡೆಯಷ್ಟೇ ಉಪಯೋಗಕ್ಕೆ ದೊರೆತಿದೆ. ಅದೂ ರೈತ ಸಂಘದ ಹೋರಾಟದ ಫ‌ಲದಿಂದ. ಬಲದಂಡೆ ಕಾಮಗಾರಿ ಪ್ರಗತಿಯಲ್ಲಿದೆ.  ಉಡುಪಿ ಜಿಲ್ಲೆಯ 38,800 ಎಕರೆ ಭೂ ಪ್ರದೇಶಕ್ಕೆ ನೀರುಣಿಸಲು ಕುಂದಾಪುರ ಹಾಗೂ ಉಡುಪಿ ತಾಲೂಕನ್ನು ಕೇಂದ್ರೀಕರಿಸಿ ವಾರಾಹಿ ಯೋಜನೆ ಆರಂಭಿಸಲಾಗಿದೆ. ಯೋಜನೆ ಆರಂಭಗೊಂಡು 25 ವರ್ಷಗಳ ಕಾಲ 37 ಕೋ. ರೂ. ವ್ಯಯಿಸಲಾಗಿತ್ತು. ರೈತರಿಗೆ ಪ್ರಯೋಜನ ಮಾತ್ರ ಶೂನ್ಯ. 2005ರಲ್ಲಿ ಮರುಹುಟ್ಟು ಪಡೆದ ಯೋಜನೆ 2011ರ ವೇಳೆಗೆ 375 ಕೋ.ರೂ. ಗಳ ಖರ್ಚು ಮಾಡುವಲ್ಲಿಗೆ ತಲುಪಿತು. 2019ರ ಅವಧಿಗೆ 650 ಕೋ.ರೂ. ವರೆಗೆ ಖರ್ಚಾಗಿದೆ. 9.43 ಕೋ.ರೂ.ಗಳಲ್ಲಿ ಆರಂಭವಾದ ಯೋಜನೆ 650 ಕೋ.ರೂ.ಗೆ ತಲುಪಿದೆ. ಎಡದಂಡೆ ಕಾಲುವೆ 44.35 ಕಿ.ಮೀ. ಆಗಬೇಕಿದ್ದು 38 ಕಿ.ಮೀ. ರಚನೆಯಾಗಿದೆ. 2003ರಲ್ಲಿ ಯೋಜನೆಯ ಶೀಘ್ರ ಅನುಷ್ಠಾನದ ಸಲುವಾಗಿ ಕರ್ನಾಟಕ ನೀರಾವರಿ ನಿಗಮಕ್ಕೆ ಹಸ್ತಾಂತರಿಸಲಾಗಿತ್ತು.

ಕಾಲುವೆಯ 3ನೇ ಕಿ.ಮೀ.ನಲ್ಲಿ ರಿಟರ್ನಿಂಗ್‌ ವಾಲ್‌ನಲ್ಲಿ ಕಾಮಗಾರಿ ನಡೆಯುತ್ತಿದೆ. ಮಳೆ, ಚಂಡಮಾರುತದ ಕಾರಣದಿಂದ ಕಾಮಗಾರಿ ನಡೆಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ತರಾತುರಿಯಲ್ಲಿ ಕಾಮಗಾರಿ ಮುಗಿಸಲಾಗುತ್ತಿದ್ದು 10 ದಿನಗಳಲ್ಲಿ ನೀರು ಹರಿಸಲಾಗುವುದು. -ಜಿ. ಭೀಮಾ ನಾಯ್ಕ, ಸುಪರಿಂಡೆಂಟ್‌ ಎಂಜಿನಿಯರ್‌ ವಾರಾಹಿ ನೀರಾವರಿ ನಿಗಮ

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.