ವಾರಾಹಿ ನೀರು ಬಿಡದೆ ಹಿಂಗಾರಿಗೆ ಹಿನ್ನಡೆ

ಬಿತ್ತನೆ ಬೀಜ ತಯಾರಿ, ಯಂತ್ರ ನಾಟಿಗೂ ಸಿದ್ಧತೆ

Team Udayavani, Nov 20, 2020, 5:20 AM IST

ವಾರಾಹಿ ನೀರು ಬಿಡದೆ ಹಿಂಗಾರಿಗೆ ಹಿನ್ನಡೆ

ವಾರಾಹಿ ಕಾಲುವೆ. (ಸಾಂದರ್ಭಿಕ ಚಿತ್ರ)

ಕುಂದಾಪುರ: ಹಿಂಗಾರು ಬೆಳೆಯ ಬಿತ್ತನೆಗೆ ವಾರಾಹಿ ಕಾಲುವೆಯಲ್ಲಿ ನೀರು ಯಾವಾಗ ಬಿಡುತ್ತಾರೆ ಎಂದು ರೈತರು ಕಾಯುತ್ತಿದ್ದಾರೆ. ನೀರು ಬಿಡದೇ 2ನೇ ಬೆಳೆ ಆರಂಭಕ್ಕೆ ಹಿನ್ನಡೆಯಾಗಿದೆ.

ನೀರಿಲ್ಲ
ಭತ್ತದ 2ನೇ ಬೆಳೆ ಬಿತ್ತನೆ ಸೇರಿದಂತೆ ಮುಂದುವರಿದ ಕೃಷಿ ಚಟುವಟಿಕೆಗೆ ವಾರಾಹಿ ನೀರು ಅಗತ್ಯವಾಗಿದೆ. ಮೊದಲ ನಾಲ್ಕು ವರ್ಷ ಪ್ರತಿವರ್ಷ ಡಿ.1ರ ಅಂದಾಜಿಗೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತಿತ್ತು. ಕಳೆದ ವರ್ಷ ಡಿ. 15ರ ಅಂದಾಜಿಗೆ ನೀರು ಬಿಡಲಾಗಿದೆ. ಆದರೆ ಈ ಬಾರಿ ಅನಿಶ್ಚಿತ ಮಳೆಯಿಂದಾಗಿ ಹಿಂಗಾರು ಹವಾಮಾನ ಕೂಡಾ ಅಕಾಲಿಕವಾದ ಹಿನ್ನೆಲೆಯಲ್ಲಿ ರೈತರು ನಾಲೆ ನೀರಿಗೆ ಕಾಯುತ್ತಿದ್ದಾರೆ. ಈ ವರೆಗೆ ನೀರು ಹರಿಸುವ ಕುರಿತು ಯಾವುದೇ ಮಾಹಿತಿ ಬಂದಿಲ್ಲ ಎಂದು ರೈತರು ಚಿಂತಿತರಾಗಿದ್ದಾರೆ. ವಾರಾಹಿ ನಾಲೆ ನೀರು ನಂಬಿದವರಿಗೆ ಎರಡನೆ ಬೆಳೆಗೆ ಇತರ ನೀರಿನಾಶ್ರಯವಿಲ್ಲ.

ವಾರಾಹಿ ಯೋಜನೆ
ವಾರಾಹಿ ಯೋಜನೆಗೆ ಭರ್ತಿ ನಲುವತ್ತೂಂದು ವರ್ಷ. 1979ರಲ್ಲಿ ಆರಂಭವಾದ ಯೋಜನೆ ಕುಂಟುತ್ತಾ ಸಾಗಿ ಎಡದಂಡೆಯಷ್ಟೇ ಉಪಯೋಗಕ್ಕೆ ದೊರೆತು ಬಲದಂಡೆ ಕಾಮಗಾರಿ ಪ್ರಗತಿಯಲ್ಲಿದೆ. 9.43 ಕೋ.ರೂ.ಗಳಲ್ಲಿ ಆರಂಭವಾದ ಯೋಜನೆ 650 ಕೋ.ರೂ.ಗೆ ತಲುಪಿದೆ. ಎಡದಂಡೆ ಕಾಲುವೆ 44.35 ಕಿ.ಮೀ. ಆಗಬೇಕಿದ್ದು 38 ಕಿ.ಮೀ. ರಚನೆಯಾಗಿದೆ. 2003ರಲ್ಲಿ ಯೋಜನೆಯ ಶೀಘ್ರ ಅನುಷ್ಠಾನದ ಸಲುವಾಗಿ ಕರ್ನಾಟಕ ನೀರಾವರಿ ನಿಗಮಕ್ಕೆ ಹಸ್ತಾಂತರಿಸಲಾಗಿತ್ತು.

ಸಿದ್ದಾಪುರದ ಹೊರಿಯಬ್ಬೆ ಎಂಬಲ್ಲಿ ಭೂಗರ್ಭ ಜಲ ವಿದ್ಯುದಾಗಾರ ಇದ್ದು ವಿದ್ಯುತ್‌ ಉತ್ಪಾದನೆಗೆ ಉಪಯೋಗಿಸಿದ ಬಳಿಕ 1,100 ಕ್ಯುಸೆಕ್‌ ನೀರು ಪ್ರತಿದಿನ ಎಡದಂಡೆ ಹಾಗೂ ಬಲದಂಡೆಗಳ ಮೂಲಕ ಹರಿಸಿ ಉಪಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರೊದಗಿಸಬೇಕೆನ್ನುವುದು ಯೋಜನೆಯ ಆಶಯ. 35 ವರ್ಷ ಕಳೆದರೂ ಎಡದಂಡೆ ಯೋಜನೆಯ ಮೂಲಕ ರೈತರಿಗೆ ನೀರು ದೊರೆಯಲಿಲ್ಲ.

ಕಾಲುವೆ ಮೂಲಕ ಹರಿದು ಬರುವ ನೀರು ಕೃಷಿಭೂಮಿ, ನದಿ, ಹಳ್ಳಗಳನ್ನು ಸೇರುವುದರಿಂದ ಭೂಮಿಯಲ್ಲಿ ನೀರಿನ ಒರತೆ ಹೆಚ್ಚಲಿದೆ. ನದಿ, ಹಳ್ಳಗಳಿಗೆ ಒಡ್ಡುಗಳನ್ನು ನಿರ್ಮಿಸಿ ನೀರನ್ನು ಸಂಗ್ರಹಿಸಿದಲ್ಲಿ ಅಂತರ್ಜಲ ವೃದ್ಧಿಗೂ ಸಹಕಾರಿಯಾಗಲಿದೆ.

ಎಡದಂಡೆ
276.66 ಕೋ. ರೂ. ವೆಚ್ಚದಲ್ಲಿ ಎಡದಂಡೆ ಕಾಮಗಾರಿ ನಡೆಯುತ್ತಿದ್ದು 26 ಕಿ.ಮೀ. ನಾಲೆ 1,921 ಹೆಕ್ಟೇರ್‌ (4,744 ಎಕರೆ ) ಪ್ರದೇಶಕ್ಕೆ ಹಾಗೂ 9 ಕಿ.ಮೀ. ನಾಲೆ 802 ಹೆಕ್ಟೇರ್‌ (1,980 ಎಕರೆಗೆ) ಒಟ್ಟು 6,724 ಎಕರೆ ಕೃಷಿಭೂಮಿಗೆ ನೀರುಣಿಸುವ ಯೋಜನೆ ಇದಾಗಿದೆ.

ಖರ್ಚೇ ಅಧಿಕ
ಉಡುಪಿ ಜಿಲ್ಲೆಯ 38,800 ಎಕರೆ ಭೂ ಪ್ರದೇಶಕ್ಕೆ ನೀರುಣಿಸಲು ಕುಂದಾಪುರ ಹಾಗೂ ಉಡುಪಿ ತಾಲೂಕನ್ನು ಕೇಂದ್ರೀಕರಿಸಿ ವಾರಾಹಿ ಯೋಜನೆ ಆರಂಭಿಸಲಾಗಿದೆ. ಯೋಜನೆ ಆರಂಭಗೊಂಡು 25 ವರ್ಷಗಳ ಕಾಲ 37 ಕೋ. ರೂ. ವ್ಯಯಿಸಲಾಗಿತ್ತು. ರೈತರಿಗೆ ಪ್ರಯೋಜನ ಮಾತ್ರ ಶೂನ್ಯ. 2005ರಲ್ಲಿ ಮರುಹುಟ್ಟು ಪಡೆದ ಯೋಜನೆ 2011ರ ವೇಳೆಗೆ 375 ಕೋ.ರೂ.ಗಳ ಖರ್ಚು ಮಾಡುವಲ್ಲಿಗೆ ತಲುಪಿತು. 2019ರ ಅವಧಿಗೆ 650 ಕೋ.ರೂ. ವರೆಗೆ ಖರ್ಚಾಗಿದ್ದು ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ.

ಅನಿಶ್ಚಿತ
ಮಳೆ-ಬಿಸಿಲು-ಚಳಿ ರೀತಿಯ ವಾತಾವರಣದಿಂದಾಗಿ ರೈತರು ಮುಂದಿನ ಬೆಳೆ ತೆಗೆಯುವ ಕುರಿತು ಅನಿಶ್ಚಿತ ಪರಿಸ್ಥಿತಿಯಲ್ಲಿದ್ದಾರೆ. ಈ ವರ್ಷ ಬೇಗನೆ ಹಿಂಗಾರು ಬೆಳೆಗೆ ಸಿದ್ಧತೆ ಆರಂಭಿಸಿದ್ದು ಈಗಾಗಲೇ ಕೃಷಿ ಇಲಾಖೆಯಿಂದ ಭತ್ತದ ಬಿತ್ತನೆ ಬೀಜಗಳನ್ನು ಪಡೆದುಕೊಂಡಿದ್ದಾರೆ. ಪ್ರತಿವರ್ಷ ನ.15ರಿಂದ ಬಿತ್ತನೆ ಬೀಜ ಪಡೆಯುವವರು ಈ ವರ್ಷ ನ.1ರಿಂದಲೇ ಪಡೆದಿದ್ದಾರೆ. ಯಂತ್ರನಾಟಿ ಮಾಡಲು ಕೂಡ ಬಿತ್ತನೆ ಮಾಡಲಾಗಿದೆ.

ನೀರು ಬೇಗ ಬಿಡಲಿ
ವಾರಾಹಿ ಕಾಲುವೆಯಲ್ಲಿ ನೀರು ಯಾವಾಗ ಬಿಡುತ್ತಾರೆ ಎಂದು ತಿಳಿಯದೇ ರೈತರು 2ನೇ ಭತ್ತದ ಬೆಳೆ ಬೆಳೆಯಲು ಸಿದ್ಧತೆ ಮಾಡಿಕೊಳ್ಳಲು ಕಷ್ಟವಾಗುತ್ತಿದೆ. ಬಿತ್ತನೆಗೆ ಎಲ್ಲ ಸಿದ್ಧತೆ ನಡೆದರೂ ನೀರಿಗಾಗಿ ಕಾಯುವಂತಾಗಿದೆ.
-ರಾಘವೇಂದ್ರ ಹಾಲಾಡಿ, ಕೃಷಿಕರು

ಡಿಸೆಂಬರ್‌ನಲ್ಲಿ ನೀರು
ಕಳೆದ ವರ್ಷ ಡಿಸೆಂಬರ್‌ ಮಾಸಾಂತ್ಯದಲ್ಲಿ ನೀರು ಹರಿಸಲಾಗಿದ್ದು ಈ ವರ್ಷ ಇನ್ನೂ ತೀರ್ಮಾನವಾಗಿಲ್ಲ. ಡಿಸೆಂಬರ್‌ 2ನೇ ವಾರದ ವೇಳೆಗೆ ಅಥವಾ ಮೊದಲ ವಾರ ನೀರು ಬಿಡುವ ಸಾಧ್ಯತೆಯಿದೆ. ಈ ಬಗ್ಗೆ ಇನ್ನೂ ಸಭೆ ನಡೆದಿಲ್ಲ. ನಡೆದ ಬಳಿಕ ರೈತರಿಗೆ ಮಾಹಿತಿ ನೀಡಲಾಗುವುದು.
 -ಪ್ರಸನ್ನ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌, ವಾರಾಹಿ ನೀರಾವರಿ ನಿಗಮ

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.