ಸಾಗಾಟ ಸಮಸ್ಯೆ: ಹಣ್ಣು- ತರಕಾರಿ ದರ ಏರಿಕೆ


Team Udayavani, Apr 30, 2021, 4:00 AM IST

ಸಾಗಾಟ ಸಮಸ್ಯೆ: ಹಣ್ಣು- ತರಕಾರಿ ದರ ಏರಿಕೆ

ಕುಂದಾಪುರ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬಿಗಿ ಕರ್ಫ್ಯೂ ನಿಯಮವನ್ನು ಜಾರಿಗೊಳಿಸಿದ್ದರಿಂದ ಹಣ್ಣು, ತರಕಾರಿಯಂತಹ ಅಗತ್ಯ ವಸ್ತುಗಳ ಸಾಗಾಟ ಹಾಗೂ ಪೂರೈಕೆಯಲ್ಲಿ ವ್ಯತ್ಯಯ, ಜತೆಗೆ ಆಗಾಗ ಬರುತ್ತಿರುವ ಮಳೆಯಿಂದಾಗಿ ತರಕಾರಿ, ಹಣ್ಣುಗಳ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದರ ನೇರ ಪರಿಣಾಮ ಗ್ರಾಹಕರ ಮೇಲೆ ಬೀಳುವಂತಾಗಿದೆ.

ಕುಂದಾಪುರದಲ್ಲಿ ಕೆಲವೇ ಕೆಲವು ಹಣ್ಣು, ತರಕಾರಿ ವ್ಯಾಪಾ ರಿಗಳಿರುವುದರಿಂದ ಇಲ್ಲಿಗೆ ಯಾವುದೇ ಹೋಲ್‌ಸೇಲ್‌ ಹಣ್ಣು, ತರಕಾರಿ ಸಾಗಾಟ ವಾಹನಗಳು ಬರುತ್ತಿಲ್ಲ. ಇಲ್ಲಿನ ವರ್ತಕರು ಪ್ರತೀ ದಿನ ಬೆಳಗ್ಗೆ ಬೇಗ ಆದಿ ಉಡುಪಿಯ ಎಪಿಎಂಸಿ ಮಾರುಕಟ್ಟೆಗೆ ಹೋಗಿ ಅಲ್ಲಿಂದ ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಈ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಮತ್ತಿತರ ಕಡೆಗಳಿಂದ ಕುಂದಾಪುರ, ಕೋಟೇಶ್ವರ, ಬೈಂದೂರಿಗೆ ಹಣ್ಣು, ತರಕಾರಿಯನ್ನು ಸಾಗಾಟ ಮಾಡಲಾಗುತ್ತಿತ್ತು. ಇದಲ್ಲದೆ ಕುಂದಾಪುರ, ಉಡುಪಿ, ಬ್ರಹ್ಮಾವರ ಸಂತೆಯಿಂದಲೂ ಇಲ್ಲಿನ ವ್ಯಾಪಾರಿಗಳು ಹಣ್ಣು, ತರಕಾರಿಗಳನ್ನು ತರುತ್ತಿದ್ದರು. ಆದರೆ ಈಗ ಇಲ್ಲಿಗೆ ಯಾವುದೇ ತರಕಾರಿ, ಹಣ್ಣು- ಹಂಪಲುಗಳು ಪೂರೈಕೆಯಾಗುತ್ತಿಲ್ಲ.

ದರ ಏರಿಕೆಗೆ ಕಾರಣಗಳೇನು? :

ಕೆಲವು ವ್ಯಾಪಾರಿಗಳು ಕೋವಿಡ್ ಕಾರಣಕ್ಕೆ ಜನ ಎಷ್ಟೇ ದರ ನಿಗದಿಪಡಿಸಿದರೂ, ಅಗತ್ಯ ವಸ್ತುಗಳನ್ನು ಖರೀದಿ ಮಾಡುತ್ತಾರೆ ಎನ್ನುವ ನೆಪವೊಡ್ಡಿ ದರ ಏರಿಸುತ್ತಿದ್ದಾರೆ. ಆದರೆ

ಕುಂದಾಪುರದ ವರ್ತ ಕರು ಉಡುಪಿಗೆ ಹೋಗಿ ತರಕಾರಿ, ಹಣ್ಣು ತರಬೇಕಿದ್ದು, ಅದರ ಸಾಗಾಟ, ಕೂಲಿಯಾಳುಗಳು, ವೇಸ್ಟೇಜ್‌ ವೆಚ್ಚ ಇವುಗಳನ್ನೆಲ್ಲ  ಗಮನದಲ್ಲಿಟ್ಟುಕೊಂಡು ಕಳೆದ ಒಂದು ವಾರದಿಂದ ವಿವಿಧ ತರಕಾರಿ ಬೆಲೆಯನ್ನು ಏರಿಸಲಾಗಿದೆ. ಇನ್ನು ಹಸಿ ಮೆಣಸು, ಕ್ಯಾರೆಟ್‌, ಕ್ಯಾಲಿಫÉವರ್‌, ಕ್ಯಾಬೇಜ್‌ಗಳೆಲ್ಲ ಮಳೆ ಬಿದ್ದ ತತ್‌ಕ್ಷಣ ಕೊಳೆತು ಹೋಗುತ್ತಿದ್ದು, ಅಗತ್ಯದಷ್ಟು ಇಲ್ಲದ್ದರಿಂದ ಏಕಾಏಕಿ ಬೆಲೆ ಏರಿಕೆಯಾಗುತ್ತದೆ. ಇದಲ್ಲದೆ ಹಿಂದೆ ಉಡುಪಿಗೆ ಬೇರೆ ಬೇರೆ ಜಿಲ್ಲೆಗಳಿಂದ 15-20 ಮಂದಿ ಹೋಲ್‌ಸೇಲ್‌ ವ್ಯಾಪಾರಿಗಳು ಹಣ್ಣು, ತರಕಾರಿ ತರುತ್ತಿದ್ದರು. ಆದರೆ ಈಗ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ 4-5 ಮಂದಿ ಮಾತ್ರ ಬರುತ್ತಿದ್ದು, ಕಡಿಮೆ ಸಾಮಗ್ರಿಯಿಂದಾಗಿ ಬೇಡಿಕೆ ಹೆಚ್ಚಿದ್ದು, ಅವರಿಂದಲೇ ನಾವು ದುಬಾರಿ ಬೆಲೆ ಕೊಟ್ಟು ಖರೀದಿಸಬೇಕಾಗಿದೆ ಎನ್ನುತ್ತಾರೆ ವರ್ತಕರು.

ಹಳ್ಳಿಗಳಿಂದಲೂ ಬರುತ್ತಿಲ್ಲ : ಕುಂದಾಪುರ ನಗರಕ್ಕೆ ಕುಂದಬಾರಂದಾಡಿ, ನೂಜಾಡಿ, ಹಳ್ಳಿಹೊಳೆ, ಅಮಾಸೆಬೈಲು ಮತ್ತಿತರ ಕಡೆಗಳಿಂದ ರೈತರು ತಾವು ಬೆಳೆದ ತರಕಾರಿಗಳನ್ನು ತರುತ್ತಿದ್ದರು. ಆದರೆ ಈಗ ಪ್ರಮುಖವಾಗಿ ಅವರಿಗೆ ಬರಲು ಬಸ್‌ ಇಲ್ಲ. ಕುಂದಾಪುರದಿಂದ ತುಂಬಾ ದೂರ ಇರುವುದರಿಂದ ಬಾಡಿಗೆ ಮಾಡಿಕೊಂಡು ಬಂದರೆ ಅದರಲ್ಲೇನು ಲಾಭವೂ ಇಲ್ಲ. ಹೀಗಾಗಿ ರೈತರು ತಾವು ಬೆಳೆದ ಬೆಂಡೆ, ತೊಂಡೆ, ಅಲಸಂಡೆ, ಬಸಳೆ, ಸೌತೆಕಾಯಿ, ಬದನೆ, ಮತ್ತಿತರ ತರಕಾರಿಗಳನ್ನು ಕುಂದಾಪುರಕ್ಕೆ ತರಲಾಗದೇ, ಮನೆ ಅಕ್ಕ- ಪಕ್ಕ ಮಾತ್ರ ಮಾರುವಂತಾಗಿದ್ದು, ಕೆಲವೆಲ್ಲ ಕೊಳೆತು ಹೋಗುವಂತಹ ಸ್ಥಿತಿ ಇದೆ. ಹಳ್ಳಿಗಳಿಂದ ಊರ ತಾಜಾ ತರಕಾರಿಗಳ ಪೂರೈಕೆಯಾಗದಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಇದು ಎಲ್ಲರಿಗೂ ಕಷ್ಟದ ಸಮಯವಾಗಿದ್ದು, ಆದಷ್ಟು ಎಲ್ಲ ವರ್ತಕರಲ್ಲಿಯೂ ಭಾರೀ ಪ್ರಮಾಣದಲ್ಲಿ ಬೆಲೆ ಏರಿಸದಂತೆ ಮನವಿ ಮಾಡಿಕೊಳ್ಳಲಾಗಿದೆ. ಅದಾಗಿಯೂ ದರ ಮಿತಿಗಿಂತ ಗರಿಷ್ಠ ಪ್ರಮಾಣದಲ್ಲಿ ತರಕಾರಿ, ಹಣ್ಣು ಬೆಲೆ ಏರಿಸುತ್ತಿದ್ದರೆ, ಆ ಬಗ್ಗೆ ನಿಗಾ ವಹಿಸಲಾಗುವುದು. ಕೆ. ರಾಜು, ಕುಂದಾಪುರ 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.