ಗುಜ್ಜಾಡಿ ಶಾಲೆಯಲ್ಲಿ ತರಕಾರಿ ತೋಟ: ಮಕ್ಕಳಿಗೆ ಕೃಷಿ ಪಾಠ

10 ಸೆಂಟ್ಸ್‌ ಜಾಗದಲ್ಲಿ ತರಹೇವಾರಿ ತರಕಾರಿ ಬೆಳೆ

Team Udayavani, Oct 3, 2022, 12:07 PM IST

news-1

ಗಂಗೊಳ್ಳಿ: ಬೈಂದೂರು ವಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಮಕ್ಕಳ ದಾಖಲಾತಿ ಹಾಗೂ ಶೈಕ್ಷಣಿಕ ಸಾಧನೆಗಳಿಂದ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈಗ ಮಕ್ಕಳಿಗೆ ಕಲಿಕೆಯ ಜತೆಗೆ ಕೃಷಿ ಪಾಠವನ್ನು ಸ್ವತಃ ಹೇಳಿಕೊಡುವ ಮೂಲಕ ಸುದ್ದಿಯಲ್ಲಿದೆ.

ಶಾಲೆಯ ವಠಾರದಲ್ಲಿ ಸುಮಾರು 10 ಸೆಂಟ್ಸ್‌ ಜಾಗದಲ್ಲಿ ಮಾಡಿರುವ ತರಕಾರಿ ತೋಟದಲ್ಲಿ ಉತ್ತಮ ಗುಣಮಟ್ಟದ ತರಕಾರಿ ಬೆಳೆಯಲಾಗಿದ್ದು, ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ಇಲ್ಲಿ ಬೆಳೆದ ತರಕಾರಿಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಈಗ ಒಂದು ಕ್ವಿಂಟಾಲ್‌ಗ‌ೂ ಮಿಕ್ಕಿ ತರಕಾರಿ ಬೆಳೆದಿದೆ. ಇದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಊರವರ ಪ್ರಶಂಸೆಗೆ ಪಾತ್ರವಾಗಿದೆ.

ಎಸ್‌ಡಿಎಂಸಿ, ಪೋಷಕರ ಸಹಕಾರ ಸಾವಯವ ಕೃಷಿಗೆ ಉತ್ತೇಜನ ನೀಡುವ ಹಾಗೂ ಬಿಸಿಯೂಟಕ್ಕಾಗಿ ತರಕಾರಿ ಅಗತ್ಯ ಮನಗಂಡು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ ಪೂಜಾರಿ, ಸದಸ್ಯೆ ಶಾಂತಾ ಹಾಗೂ ವಿದ್ಯಾರ್ಥಿ ಪೋಷಕರಾದ ಉಷಾ ಅವರು ಶಾಲಾ ವಠಾರದಲ್ಲಿ ಸುಮಾರು 10 ಸೆಂಟ್ಸ್‌ ಜಾಗದಲ್ಲಿ ತರಕಾರಿ ತೋಟ ಮಾಡಲು ಮುಂದಾದರು. ಸ್ಥಳೀಯ ಕೃಷಿಕ ಜಿ. ನರಸಿಂಹ ನಾಯಕ್‌ ಟ್ರಾಕ್ಟರ್ ಮೂಲಕ ಹದ ಮಾಡಿಕೊಟ್ಟಿದ್ದು, ಅದರಲ್ಲಿ ಸೌತೆ ಕಾಯಿ, ಹೀರೆಕಾಯಿ, ಬೆಂಡೆಕಾಯಿ, ಮುಳ್ಳುಸೌತೆ, ಬಸಳೆ ಮೊದಲಾದ ತರಕಾರಿ ಬೆಳೆಸಲಾಗಿದೆ. ಈಗ ತೋಟದಲ್ಲಿ ಉತ್ತಮ ಫಸಲು ಬಂದಿದೆ. ಇವರೊಂದಿಗೆ ಬಿ.ಕೆ. ರಮೇಶ್‌, ಮಹೇಶ ಆಚಾರಿ, ಅಮರ್‌ ಪೂಜಾರಿ ಹಾಗೂ ಸುಧಾಕರ ಪೂಜಾರಿ, ಮುಖ್ಯ ಶಿಕ್ಷಕ ಆನಂದ ಜಿ., ಶಿಕ್ಷಕ ವಿಶ್ವನಾಥ ಸಹಕರಿಸಿದ್ದಾರೆ.

ಶಾಲೆಯ ವಠಾರದಲ್ಲಿ ತರಕಾರಿ ತೋಟ ಮಾಡುವಲ್ಲಿ ವಿಶೇಷ ಶ್ರಮವಹಿಸಿದ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ ಪೂಜಾರಿ, ಎಸ್‌ಡಿಎಂಸಿ ಸದಸ್ಯೆ ಶಾಂತಾ ಹಾಗೂ ವಿದ್ಯಾರ್ಥಿ ಪೋಷಕರಾದ ಉಷಾ ಹಾಗೂ ಈ ಕಾರ್ಯದಲ್ಲಿ ಕೈಜೋಡಿಸಿದ ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ಶಾಲೆಯ ಶಿಕ್ಷಕರನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಪ್ರಶಂಸಿಸಿದ್ದಾರೆ.

ಬಿಸಿಯೂಟಕ್ಕೆ ಬಳಕೆ: ಶಾಲೆಯ ವಠಾರದಲ್ಲಿ ಮಾಡಿರುವ ತರಕಾರಿ ಕೃಷಿಗೆ ಆದಷ್ಟು ಮನೆಯ ಗೊಬ್ಬರವನ್ನೇ ಬಳಸಲಾಗಿದ್ದು, ಈಗ ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ಈ ತರಕಾರಿಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಒಂದು ಕ್ವಿಂಟಾಲ್‌ಗ‌ೂ ಮಿಕ್ಕಿ ತರಕಾರಿ ಬೆಳೆಯಲಾಗಿದೆ. ಎಸ್‌ಡಿಎಂಸಿ, ಊರವರು, ಪೋಷಕರ ಸಹಕಾರದಿಂದ ಇದು ಸಾಧ್ಯವಾಗಿದೆ. ಮಕ್ಕಳಿಗೂ ಪಾಠದೊಂದಿಗೆ ಕೃಷಿಯ ಬಗ್ಗೆಯೂ ಈ ಮೂಲಕ ತಿಳಿಸಿ ಕೊಡಲು ಇದು ನೆರವಾಗಿದೆ. – ಆನಂದ ಜಿ., ಮುಖ್ಯ ಶಿಕ್ಷಕ, ಗುಜ್ಜಾಡಿ ಸರಕಾರಿ ಹಿ.ಪ್ರಾ. ಶಾಲೆ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.