ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ


Team Udayavani, Jan 21, 2022, 3:40 AM IST

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ಗುಲ್ವಾಡಿ: ಗ್ರಾಮಸ್ಥರಿಗೆ ತಳಮಟ್ಟದ ಕಂದಾಯ ಇಲಾಖೆಯ ಎಲ್ಲ ಕೆಲಸ- ಕಾರ್ಯಗಳನ್ನು ಕಾರ್ಯಗತಗೊಳಿಸಿ ಕೊಡಬೇಕಾದ ಗುಲ್ವಾಡಿ ಗ್ರಾಮದ ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕ ಎರಡು ಹುದ್ದೆಗಳೂ ಖಾಲಿಯಿವೆ. ಇಲ್ಲಿಗೆ ಬೇರೆ ಕಡೆಯ ಗ್ರಾಮ ಕರಣಿಕರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಗ್ರಾಮ ಕರಣಿಕರ ಕಚೇರಿ ವಾರದಲ್ಲಿ ಎರಡು ದಿನ ಮಾತ್ರ ತೆರೆದಿರುತ್ತದೆ.

ಗುಲ್ವಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಗ್ರಾಮ ಕರಣಿಕರ ಕಚೇರಿಯಲ್ಲಿ ಕಳೆದ 6 ತಿಂಗಳಿನಿಂದ ಖಾಯಂ ಗ್ರಾಮ ಕರಣಿಕರ ಹುದ್ದೆ ಖಾಲಿಯಿದೆ. ಈಗ ಪ್ರಭಾರ ನೆಲೆಯಲ್ಲಿ ಹಟ್ಟಿಯಂಗಡಿ ಹಾಗೂ ಚಿತ್ತೂರು ಗ್ರಾಮ ಕರಣಿಕರಿಗೆ ಗುಲ್ವಾಡಿಯನ್ನು ಸಹ ಹೆಚ್ಚುವರಿಯಾಗಿ ವಹಿಸಲಾಗಿದೆ. ಇನ್ನು ಗ್ರಾಮ ಸಹಾಯಕರ ಹುದ್ದೆ ಖಾಲಿಯಾಗಿ ಒಂದೂವರೆ ವರ್ಷ ಕಳೆದಿದೆ. ಇದರಿಂದಾಗಿ ವಾರದಲ್ಲಿ ಬುಧವಾರ ಹಾಗೂ ಶುಕ್ರವಾರ ಈ ಎರಡು ದಿನ ಬಿಟ್ಟರೆ ಬಾಕಿ ಎಲ್ಲ ದಿನ ಗ್ರಾಮ ಕರಣಿಕರ ಬೀಗ ಹಾಕುವಂತಾಗಿದೆ.

ಗ್ರಾಮಸ್ಥರ ಪರದಾಟ :

ಗ್ರಾಮ ಕರಣಿಕರ ಕಚೇರಿಯು ಬಹುತೇಕ ದಿನ ಬೀಗ ಹಾಕಿಯೇ ಇರುವುದರಿಂದ ಜಾಗದ ವಿಚಾರ, ಜಾತಿ, ಜನನ ಪ್ರಮಾಣ ಪತ್ರ, ವಿವಿಧ ಪಿಂಚಣಿ, ವೃದ್ಧಾಪ್ಯ ವೇತನ ಸಹಿತ ಅನೇಕ ಮಾಸಾಶನ ಕಾರ್ಯಗಳಿಗೆಲ್ಲ ಬಂದು ದಿನವಿಡೀ ಕಾದು, ವಾಪಾಸು ತೆರಳುವಂತಹ ಪರಿಸ್ಥಿತಿ ಗ್ರಾಮಸ್ಥರದ್ದಾಗಿದೆ. ವಾರದಲ್ಲಿ ಎರಡು ದಿನ ಕಚೇರಿಗೆ ಗ್ರಾಮ ಕರಣಿಕರು ಬಂದರೂ, ಅವರು ಆ ದಿನ ಸಭೆ, ಸ್ಥಳ ಪರಿಶೀಲನೆ ಸಹಿತ ಅನ್ಯ ಕಾರ್ಯದಲ್ಲಿಯೂ ತೊಡಗಿಸಿಕೊಂಡಿರುವುದರಿಂದ ಕಚೇರಿ ಕೆಲಸಕ್ಕಾಗಿ ಬಂದ ಗ್ರಾಮಸ್ಥರಿಗೆ ಸಿಗದಂತಾಗಿದೆ. ಗ್ರಾಮ ಸಹಾಯಕರ ಹುದ್ದೆಯೂ ಖಾಲಿ ಇರುವುದರಿಂದ ವೃದ್ಧರು, ಮಹಿಳೆಯರು, ಅಶಕ್ತರು ಕಚೇರಿ ಕೆಲಸದ ವಿಚಾರದಲ್ಲಿ ಪರದಾಡುವಂತಾಗಿದೆ.

ಗುಲ್ವಾಡಿಯಲ್ಲಿ ಗ್ರಾಮ ಕರಣಿಕರ ಕಚೇರಿಗೆ ಬಹುತೇಕ ಎಲ್ಲ ದಿನ ಬೀಗ ಹಾಕಿರುವುದರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗುತ್ತಿದೆ. ಬೆಳಗ್ಗಿನಿಂದ ಸಂಜೆಯವರೆಗೂ ಬಂದು ಕಾಯುವಂತಹ ಪರಿಸ್ಥಿತಿಯಿದೆ. ಅನೇಕ ಬಾರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರೂ, ಖಾಯಂ ಗ್ರಾಮ ಕರಣಿಕರು ಹಾಗೂ ಗ್ರಾಮ ಸಹಾಯಕರನ್ನು ನಿಯೋಜಿಸಿಲ್ಲ.  ಸುಧೀಶ್‌ ಕುಮಾರ್‌ ಶೆಟ್ಟಿ, ಅಧ್ಯಕ್ಷರು, ಗುಲ್ವಾಡಿ ಗ್ರಾ.ಪಂ.

ಗ್ರಾಮ ಕರಣಿಕರ ಕೊರತೆಯಿಂದಾಗಿ ಈ ರೀತಿಯ ತೊಂದರೆಯಾಗುತ್ತಿದ್ದು, ಈಗ ಹೊಸದಾಗಿ ಎರಡು ಗ್ರಾಮ ಕರಣಿಕರನ್ನು ನೀಡಿದ್ದು, ಅವರನ್ನು ಗುಲ್ವಾಡಿ ಸಹಿತ ತುರ್ತು ಅಗತ್ಯ ಇರುವ ಕಡೆಗಳಿಗೆ ಶೀಘ್ರ ವ್ಯವಸ್ಥೆ ಮಾಡಲಾಗುವುದು.  ಕಿರಣ್‌ ಜಿ. ಗೌರಯ್ಯ, ಕುಂದಾಪುರ ತಹಶೀಲ್ದಾರ್‌

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.