ಕಟ್ಟು ಕಿ.ಪ್ರಾ. ಶಾಲೆ ದುರಸ್ತಿಗೆ ಮುಂದಾದ ಊರವರು

ಪಂಚಾಯತ್‌ನಿಂದ ಸಿಗದ ತ್ವರಿತ ಸ್ಪಂದನೆ; ಪಿಡಿಒ ಕಾರ್ಯ ವೈಖರಿಗೆ ಸದಸ್ಯರ ಆಕ್ರೋಶ

Team Udayavani, Oct 15, 2022, 8:55 AM IST

1

ಹೆಮ್ಮಾಡಿ: ಕಟ್ಟು ಸರಕಾರಿ ಕಿ. ಪ್ರಾ. ಶಾಲೆಯ ಇದ್ದ ಎರಡು ಕೊಠಡಿಗಳಲ್ಲಿ ಒಂದು ಕೊಠಡಿಯ ಮಾಡು ಶಿಥಿಲಾವಸ್ಥೆಯಲ್ಲಿದ್ದು, ಅದರ ದುರಸ್ತಿಗೆ ಪಂಚಾಯತ್‌ನಿಂದ ತುರ್ತು ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಊರವರೇ ಸೇರಿ ದುರಸ್ತಿಗೆ ಮುಂದಾಗಿದ್ದಾರೆ.

ಹೆಮ್ಮಾಡಿ ಕಟ್ಟುವಿನ ಸರಕಾರಿ ಕಿ.ಪ್ರಾ. ಶಾಲೆಯ ಒಂದು ಕೊಠಡಿಯ ಮಾಡಿನ ಪಕ್ಕಾಸಿ ಮುರಿದು ಕುಸಿದು ಬೀಳುವುದರಲ್ಲಿ ಇತ್ತು. ಈಗ ಶಾಲೆಗೆ ದಸರಾ ರಜೆ ಇರುವುದರಿಂದ ಮತ್ತೆ ಶಾಲೆ ಆರಂಭವಾಗುವುದರ ಮೊದಲು ದುರಸ್ತಿ ನಡೆಸುವಂತೆ ಶಾಲೆಯ ವತಿಯಿಂದ ಪಂಚಾಯತ್‌ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಪಂಚಾಯತ್‌ ನಿಂದ ತುರ್ತು ಅನುದಾನ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಿಒ ಕಾರ್ಯವೈಖರಿ ಬಗ್ಗೆ ಗ್ರಾ.ಪಂ. ಅಧ್ಯಕ್ಷ, ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾನಿಗಳ ಸಹಕಾರ

ಈ ವಿಷಯ ಅರಿತ ದಾನಿಗಳು ಶಾಲೆಯ ಮಾಡನ್ನು ತುರ್ತಾಗಿ ದುರಸ್ತಿಪಡಿಸಲು ಧನ ಸಹಾಯ ನೀಡುವ ಮೂಲಕ ಸಹಕರಿಸಿದ್ದಾರೆ. ದಾನಿಗಳಾದ ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ದೇವಾಡಿಗ, ಉಪಾಧ್ಯಕ್ಷೆ ಶೋಭಾ ಡಿ. ಕಾಂಚನ್‌, ಮಾಜಿ ಅಧ್ಯಕ್ಷ ಸತ್ಯನಾರಾಯಣ, ಸದಸ್ಯ ರಿಚರ್ಡ್‌ ಡಯಾಸ್‌, ಸುರೇಶ್‌ ಪೂಜಾರಿ ಹೆಮ್ಮಾಡಿ, ಚಂದ್ರ ಪೂಜಾರಿ, ಗುರುರಾಜ್‌, ರಾಘವೇಂದ್ರ ಕುಲಾಲ್‌ ಅವರು ನೆರವಾಗಿದ್ದಾರೆ.

ಈಗ ಶಾಲೆಯ ಶಿಥಿಲಾವಸ್ಥೆಯಲ್ಲಿದ್ದ ಕೊಠಡಿಯ ಮಾಡಿನ ದುರಸ್ತಿ ಕಾರ್ಯ ಆರಂಭಗೊಂಡಿದ್ದು, ಸಂಪೂರ್ಣ ಮಾಡು ದುರಸ್ತಿಯಾಗಲಿದೆ. ದಾನಿಗಳಿಂದ ಸಂಗ್ರಹ ವಾದ ಸುಮಾರು 40 ಸಾವಿರ ರೂ. ವೆಚ್ಚದಲ್ಲಿ ದುರಸ್ತಿ ನಡೆಯಲಿದೆ.

ಒಂದೇ ಕೊಠಡಿ

ಬೆಳ್ಳಿ ಹಬ್ಬ ವರ್ಷಾಚರಣೆ ಸಂಭ್ರಮದಲ್ಲಿರುವ ಈ ಶಾಲೆಯಲ್ಲಿ ಪ್ರಸ್ತುತ ಒಂದ ರಿಂದ 5ನೇ ತರಗತಿಯವರೆಗೆ 27 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶೈಕ್ಷಣಿಕ ಸಾಲಿನಲ್ಲಿ 6 ಮಂದಿ ದಾಖಲಾತಿ ಮಾಡಿಕೊಂಡಿದ್ದಾರೆ. ಇಬ್ಬರು ಶಿಕ್ಷಕಿಯರಿದ್ದಾರೆ. ಇಲ್ಲಿ ಆರಂಭ ದಿಂದ ಎರಡು ಕೊಠಡಿಯಿದೆ. ಎಲ್ಲ 5 ತರಗತಿಗಳಿಗೂ ಇಲ್ಲಿಯೇ ಪಾಠ- ಪ್ರವಚನ ನಡೆಯುತ್ತಿದೆ. ಇನ್ನು ಶಿಕ್ಷಕರ ಕೊಠಡಿಯೂ ಇಲ್ಲ. ಈಗ ಎರಡರಲ್ಲಿ ಒಂದರ ಮಾಡು ಕುಸಿಯುವ ಭೀತಿ ಇದ್ದುದರಿಂದ ಆ ಕೊಠಡಿಯಲ್ಲಿ ತರಗತಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಕೊಠಡಿ ಕೊರತೆ ಎದುರಾಗಿತ್ತು.

ಶಾಸಕರ ಅನುದಾನ

ಈ ಶಾಲೆಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಮುತುವರ್ಜಿಯಲ್ಲಿ ಶಾಸಕರ ನಿಧಿಯಡಿ ಅನುದಾನ ಮಂಜೂ ರಾಗಿದ್ದು, ಅದನ್ನು ಹೊಸ ಕೊಠಡಿ ನಿರ್ಮಾಣಕ್ಕೆ ಬಳಸಿಕೊಳ್ಳುವ ಉದ್ದೇಶವನ್ನು ಶಾಲಾಡಳಿತ ಹೊಂದಿದೆ.

ನನ್ನ ತೀರ್ಮಾನವಲ್ಲ: ಶಾಲೆಯ ದುರಸ್ತಿ ಬಗ್ಗೆ ಅಧ್ಯಕ್ಷರು, ಸದಸ್ಯರು ಸಭೆ ನಡೆಸಿ, ಆ ಸಭೆಯಲ್ಲಿ ತುರ್ತು ಅನುದಾನ ಬಿಡುಗಡೆ ಬಗ್ಗೆ ತೀರ್ಮಾನವಾಗಬೇಕು. ಆ ಸಭೆಯಲ್ಲಿ ತೀರ್ಮಾನ ಕೈಗೊಂಡ ಅನಂತರ ಅನುದಾನ ಬಿಡುಗಡೆಗೆ ಅವಕಾಶವಿದೆ. ತುರ್ತು ಅನುದಾನ ಬಿಡುಗಡೆ ಆಗದಿರುವ ಬಗ್ಗೆ ನನ್ನ ಪಾತ್ರವಿಲ್ಲ. – ಮಂಜು ಬಿಲ್ಲವ, ಹೆಮ್ಮಾಡಿ ಪಿಡಿಒ

ಮನವಿ ನೀಡಲಾಗಿದೆ: ಕಟ್ಟು ಶಾಲಾ ದುರಸ್ತಿ ಸಂಬಂಧ ಈಗ ರಜೆ ಇರುವುದರಿಂದ ತುರ್ತು ದುರಸ್ತಿಗೆ ಅನುದಾನ ಬಿಡುಗಡೆ ಬಗ್ಗೆ ಪಿಡಿಒ ಗಮನಕ್ಕೆ ಅಧ್ಯಕ್ಷರಾದಿಯಾಗಿ ನಾವೆಲ್ಲ ಗಮನಕ್ಕೆ ತಂದಿದ್ದೇವೆ. ಆದರೆ ಅವರು ಈ ಬಗ್ಗೆ ನಮಗೆ ಸಹಕಾರ ನೀಡದಿರುವುದರಿಂದ ನಾವೇ ವೈಯಕ್ತಿಕ ನೆಲೆಯಲ್ಲಿ ಹಣ ಸಂಗ್ರಹಿಸಿ, ದುರಸ್ತಿ ಮಾಡುತ್ತಿದ್ದೇವೆ. -ಸತ್ಯನಾರಾಯಣ, ಮಾಜಿ ಅಧ್ಯಕ್ಷರು, ಹೆಮ್ಮಾಡಿ ಗ್ರಾ.ಪಂ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.