ತೆಕ್ಕಟ್ಟೆ: 42 ಕೆರೆಗಳಿರುವ ಗ್ರಾಮದಲ್ಲಿ ನೀರಿಗೆ ಪರದಾಟ!

  ಕೆರೆಗಳ ಸಂರಕ್ಷಣೆಗೆ ಬೇಕಿದೆ ಮಾರ್ಗೋಪಾಯ , ನಿರ್ಲಕ್ಷ್ಯ ಒಳಗಾದ ಕೆರೆಗಳು

Team Udayavani, Jan 17, 2021, 2:20 AM IST

ತೆಕ್ಕಟ್ಟೆ: 42 ಕೆರೆಗಳಿರುವ ಗ್ರಾಮದಲ್ಲಿ ನೀರಿಗೆ ಪರದಾಟ!

ತೆಕ್ಕಟ್ಟೆ: ತೆಕ್ಕಟ್ಟೆ ಗ್ರಾಮದಲ್ಲಿ 42 ಕೆರೆಗಳಿವೆ. ಆದರೆ ನೀರಿನ ಬವಣೆ ಮಾತ್ರ ತಪ್ಪಿಲ್ಲ! ಇಲ್ಲಿ 10 ಕೆರೆಗಳನ್ನು ಮಾತ್ರ ಗ್ರಾಮಸ್ಥರು ಬಳಸುತ್ತಿದ್ದು  ಉಳಿದ ಕೆರೆಗಳು ತನ್ನ ಮೂಲ ಸ್ವರೂಪವನ್ನೇ ಕಳೆದುಕೊಂಡಿವೆ.

ನಿರ್ವಹಣೆ ಇಲ್ಲ :

ಭೌಗೋಳಿಕವಾಗಿ ಇಲ್ಲಿನ ಕರಾವಳಿ ಹೊಯಿಗೆ ಮಿಶ್ರಿತ ಮಣ್ಣಿಗೆ ಮಳೆ ನೀರನ್ನು ಹಿಡಿದಿಡುವ ಸಾಮರ್ಥ್ಯ ಇಲ್ಲವಾದ್ದರಿಂದ ಹಿಂದೆ ಸಾಗುವಳಿ ಕೃಷಿ ಚಟುವಟಿಕೆಗೆ ಕೆರೆಗಳೇ ಆಶ್ರಯವಾಗಿದ್ದವು. ಮಳೆಗಾಲದಲ್ಲಿ ಕೆರೆ ತುಂಬಿ ಅಂತರ್ಜಲ ಮಟ್ಟ ವೃದ್ಧಿಯಾಗುತ್ತಿತ್ತು. ಬದಲಾದ ಸಮಯದಲ್ಲಿ ಕೆರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ನಿರ್ವಹಣೆಯೂ ಇಲ್ಲದೆ, ಹೂಳು ತುಂಬಿ ಅಂತರ್ಜಲ ಮಟ್ಟವೂ ಕಡಿಮೆಯಾಗಿದೆ. ಈ ನಡುವೆ ಕೆರೆಗಳ ಅತಿಕ್ರಮಣ ಹಾಗೂ ಕಸ ಎಸೆಯುವ ತ್ಯಾಜ್ಯ ಘಟಕಗಳಾಗಿ ಮಾರ್ಪಟ್ಟಿವೆ.

ಬರಿದಾಗುತ್ತಿದೆ ನೀರ ಸೆಲೆಗಳು :

ಇಡೀ ಗ್ರಾಮ 42 ಕೆರೆಗಳನ್ನು ಸೇರಿಸಿದರೆ 31 ಎಕರೆ 30 ಸೆಂಟ್ಸ್‌ ವಿಸ್ತೀರ್ಣವಾಗುತ್ತದೆ. ಆದರೆ ನೀರಿಗೆ ಸಮಸ್ಯೆಯಿದೆ. ಪಂಚಾಯತ್‌ ವ್ಯಾಪ್ತಿಯ ಕೊಮೆ, ಕನ್ನುಕೆರೆ, ಮಾಲಾಡಿ, ಮಲ್ಯಾಡಿ ಸೇರಿದಂತೆ ಗ್ರಾಮದಲ್ಲಿ ಸುಮಾರು 5,590 ಸಾವಿರಕ್ಕೂ ಅಧಿಕ ಜನ ಸಂಖ್ಯೆಯನ್ನು ಹೊಂದಿದ್ದು ಸುಮಾರು 1638 ವಾಣಿಜ್ಯ ಕಟ್ಟಡ ಹಾಗೂ ಮನೆಗಳನ್ನು ಒಳಗೊಂಡಿದೆ. ಹೆಚ್ಚಿನ ಮನೆಗಳಲ್ಲಿ ಬಾವಿಗಳಿವೆ. ನೀರಿನ ಬಳಕೆಯೂ ಸಾಕಷ್ಟಿದೆ.ಆದರೆ ಅಂತರ್ಜಲ ವೃದ್ಧಿಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಇದರಿಂದ ಮಾರ್ಚ್‌ನಲ್ಲಿ ನೀರಿನ ಮಟ್ಟ ಕುಸಿಯುವ ಆತಂಕ ಕಾಡಿದೆ. ಆಲುಗುಡ್ಡೆ, ಮಾಲಾಡಿ, ಕೊಮೆ, ಶೇಡಿಗುಳಿ ಪರಿಸರದಲ್ಲಿ ನೀರಿನ ಕೊರತೆ ಬಿಗಡಾಯಿಸುವ ಸಾಧ್ಯತೆ ಇದೆ.

ಮೂಲಸ್ವರೂಪ  ಉಳಿಸಿ :

ಕುಂಭಾಶಿ ಹಾಗೂ ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯ ಗಡಿಭಾಗದಲ್ಲಿ  ಸುಮಾರು 3 ಎಕರೆ ವಿಸ್ತೀರ್ಣದ  ಶೇಡಿಗುಳಿ ಮದಗ ಹಿಂದೆ ಕೃಷಿಕರ ಪಾಲಿಗೆ ವರವಾಗಿದ್ದು, ಸುತ್ತಮುತ್ತಲಿನ ಸುಮಾರು ನೂರಾರು ಎಕರೆ ಕೃಷಿ ಭೂಮಿಗಳಿಗೆ ನೀರುಣಿಸುತ್ತಿತ್ತು. ಬದಲಾದ ಕಾಲದಲ್ಲಿ ಶೇಡಿಗುಳಿ ಮದಗ ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಗಿಡಗಂಟಿಗಳು ಆವರಿಸಿದೆ. ಈಗಾಗಲೇ ಮದಗದ ಸುತ್ತಮುತ್ತಲಿನ ಜಾಗಗಳು ಅತಿಕ್ರಮಣವಾಗುತ್ತಿದ್ದು  ಈ ನೀರಿನ ಮೂಲ ಸೆಲೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಂರಕ್ಷಿಸಬೇಕಾಗಿದೆ.

ಪ್ರಕೃತಿ ಮೇಲೆ ಮಾನವನ ನಿರಂತರ ಪ್ರಹಾರದಿಂದಾಗಿ ಹಿಂದೆಂದೂ ಕಾಣದ ಅಂತರ್ಜಲ ಕುಸಿತ ಗ್ರಾಮಗಳಲ್ಲಿ ಎದುರಾಗುವ ಭೀತಿ ಇದೆ. ಕೆರೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ಎಲ್ಲ  ಸರಕಾರಿ ಕೆರೆಗಳಿಗೆ ನಾಮಫಲಕ ಅಳವಡಿಸಿ ಅವುಗಳನ್ನು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ದುರಸ್ತಿಗೊಳಿಸಬೇಕು. -ಸತೀಶ್‌ ಕುಮಾರ್‌ ತೆಕ್ಕಟ್ಟೆ , ಸಾಮಾಜಿಕ ಕಾರ್ಯಕರ್ತ

ನೀರಿನ ಕೊರತೆ ನಿವಾರಣೆಗೆ ಮಳೆನೀರು ಕೊಯ್ಲು ಹಾಗೂ ಕೆರೆಗಳಿಗೆ ನೀರು ಇಂಗಿಸಿ ಅಂತರ್ಜಲವನ್ನು ಸಂರಕ್ಷಿಸುವ ಮಾರ್ಗೋಪಾಯ ಕಂಡುಕೊಳ್ಳಬೇಕಾಗಿದೆ. ಗ್ರಾಮದ ಪ್ರಮುಖ ಕೆರೆಗಳಾದ ಜೈನರ ಕೆರೆ ಸೇರಿದಂತೆ ನರೇಗಾ ಯೋಜನೆಯಡಿಯಲ್ಲಿಪುರಾತನ ಕೆರೆಗಳ ಪುನಶ್ಚೇತನಗೊಳಿಸುವ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದೇವೆ .- ಸುನಿಲ್‌ ಪಿಡಿಒ, ತೆಕ್ಕಟ್ಟೆ ಗ್ರಾಮ ಪಂಚಾಯತ್‌

 

-ಲೋಕೇಶ್‌  ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.