ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು
Team Udayavani, Jul 6, 2022, 1:21 AM IST
ಸಿದ್ದಾಪುರ: ಪಶ್ಚಿಮ ಘಟ್ಟದ ತಪ್ಪಲಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳವಾರ ಕುಬ್ಜಾ ನದಿ ಉಕ್ಕಿ ಹರಿದು ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರೀ
ದೇವ ಸ್ಥಾನದ ಒಳಪ್ರಾಂಗಣಕ್ಕೆ ಪ್ರವೇಶಿಸಿತು.
ಗರ್ಭಗುಡಿಯ ಪ್ರವೇಶಕ್ಕೆ ಕೆಲವೇ ಅಡಿಗಳ ನೀರು ಬಾಕಿ ಇದ್ದು, ಕುಬ್ಜಾ ನದಿಯ ನೀರು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದಲ್ಲಿ ಪ್ರತೀ ವರ್ಷದಂತೆ ಕುಬ್ಜಾ ನದಿಯು ಶ್ರೀ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರೀಯನ್ನು ಸ್ನಾನಗೈಯುವ ಸಾಧ್ಯತೆ ಇದೆ. ಪಶ್ಚಿಮಘಟ್ಟದ ತಪ್ಪಲಲ್ಲಿ ಮಳೆ ಮುಂದುವರಿದಿದೆ.
ಮಾರಣಕಟ್ಟೆ ದೇಗುಲ ಜಲಾವೃತ
ವಂಡ್ಸೆ: ಕಳೆೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲವು ಮಂಗಳವಾರ ಸಂಪೂರ್ಣವಾಗಿ ಜಲಾವೃತಗೊಂಡಿತು.ದೇಗುಲ ಸನಿಹದ ಬ್ರಹ್ಮಕುಂಡ ನದಿಯೂ ಉಕ್ಕಿ ಹರಿಯುತ್ತಿದ್ದು, ಬೃಹತ್ ಭೋಜನಶಾಲೆಯೂ ಜಲಾವೃತ ಗೊಂಡಿದೆ.
ಪಶ್ಚಿಮಘಟ್ಟದ ತಪ್ಪಲಿನ ಜನಜೀವನ ಅಸ್ತವ್ಯಸ್ತ
ಸಿದ್ದಾಪುರ: ನಿರಂತರ ಮಳೆಯಿಂದಾಗಿ ಪಶ್ಚಿಮಘಟ್ಟದ ತಪ್ಪಲಿನಲ್ಲಿ ಜನಜೀವನ ಅಸ್ತವ್ಯಸ್ತ ಗೊಂಡಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಹೆದ್ದಾರಿಗಳ ಮೇಲೆ ಬಿದ್ದ ಮರಗಳಿಂದಾಗಿ ರಸ್ತೆ ಸಂಚಾರ ಸ್ಥಗಿತವಾಗಿದೆ.
ಪಂಚಗಂಗಾವಳಿಯಲ್ಲಿ ಸಮುದ್ರ ಸೇರುವ ಪಂಚ ನದಿಗಳು ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತ ಗೊಂಡಿವೆ. ಶಾನ್ಕಟ್ಟು ಬಳಿ ಹತ್ತಾರು ಎಕರೆ ಭತ್ತದ ಗದ್ದೆ ಹಾಗೂ ಕೃಷಿ ಭೂಮಿ ಜಲಾವೃತಗೊಂಡಿವೆ. ಸಿದ್ದಾಪುರ- ಅಮಾಸೆಬೈಲು ಮುಖ್ಯ ರಸ್ತೆ ಕಾನುಹೊಳೆ ಎಂಬಲ್ಲಿ ರಸ್ತೆ ಮಳೆ ನೀರಿನಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ.
ಬಾಳೆಬರೆ ಘಾಟಿ ಜರ್ಝರಿತ: ಭಾರೀ ಮಳೆಯ ಪರಿಣಾಮ ಬಾಳೆಬರೆ ಘಾಟಿರಸ್ತೆ ಜರ್ಜರಿತವಾಗಿದೆ. ಅಲ್ಲಲ್ಲಿ ಹೊಂಡ ಗುಂಡಿಗಳು ಬಿದ್ದಿವೆ. ರಸ್ತೆಯ ಇಕ್ಕೆಲಗಳ ಮರಗಳ ಬುಡದ ಮಣ್ಣು ಸಡಿಲಗೊಂಡು ಬೀಳುವ ಭೀತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ