ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಸಂತೆಯಲ್ಲಿ ಧನ ಸಂಗ್ರಹ


Team Udayavani, Dec 11, 2021, 7:05 PM IST

Untitled-1

ಕುಂದಾಪುರ: ಎರಡು ವರ್ಷವಿದ್ದಾಗಲೇ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಬೈಂದೂರು ತಾಲೂಕಿನ ಹೇರೂರು ಗ್ರಾಮದ ಯರುಕೋಣೆಯ ರವೀಂದ್ರ ಪೂಜಾರಿ ಹಾಗೂ ಸುಶೀಲಾ ದಂಪತಿಯ ಪುತ್ರ, 6 ವರ್ಷದ ವಂಶಿಕ್‌ನ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಆವಶ್ಯಕತೆಯಿದ್ದು, ಅದಕ್ಕಾಗಿ ಶನಿವಾರ ಕುಂದಾಪುರದ ವಾರದ ಸಂತೆಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಬೆಂಕಿ ಮಣಿ ಸಂತು ಅರೆಹೊಳೆ ಅವರು ಮಾರಣಕಟ್ಟೆ ಕ್ಷೇತ್ರ ಮಹಾತ್ಮೆಯಲ್ಲಿ ಬರುವ “ಮೈಧಾವಿನಿ’ ಎನ್ನುವ ವೇಷ ಧರಿಸಿ, ಹಣ ಸಂಗ್ರಹಿಸಿದರು.

ಬೆಂಕಿ ಮಣಿ ಸಂತು ಹಾಗೂ ಅವರೊಂದಿಗೆ ವಂಶಿಕ್‌ನ ತಂದೆ ರವೀಂದ್ರ, ನಾಗೇಶ್‌ ಹಾಗೂ ಸುಜಿತ್‌ ಸೇರಿ ಕುಂದಾಪುರದ ವಾರದ ಸಂತೆ ಹಾಗೂ ಕುಂದಾಪುರದ ಪೇಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಧನ ಸಂಗ್ರಹಿಸಿದರು. ಅವರಿಗೆ ರಾಘವೇಂದ್ರ ಉಳ್ಳೂರು 74 ಹಾಗೂ ರಾಘವೇಂದ್ರ ಶೆಟ್ಟಿ ಮಡಾಮಕ್ಕಿ ಅವರು ಸಹಕರಿಸಿದರು.

ಕಳೆದ ಎ.10 ರಂದು ಸಹ ಕುಂದಾಪುರದ ವಾರದ ಸಂತೆಯಲ್ಲಿ ತಲೆಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕ ರಿಷಿಕ್‌ ಆಚಾರ್ಯ ಪಡುಕೋಣೆ ಅವರ ಚಿಕಿತ್ಸೆಗಾಗಿ ಹೊಯ್ಸಳ ಟ್ರಸ್ಟ್‌ ನಾಡ ನೇತೃತ್ವದಲ್ಲಿ ಬೆಂಕಿ ಮಣಿ ಸಂತು ಅವರು “ಮಹಿಷಾಸುರ’ನ ವೇಷ ಧರಿಸಿ ಕುಂದಾಪುರದ ವಾರದ ಸಂತೆ ಹಾಗೂ ಅಂಗಡಿಗಳಿಗೆ ತೆರಳಿ ಹಣ ಸಂಗ್ರಹಿಸಿದ್ದರು.

ನೆರವಿಗೆ ಮನವಿ: 

ವಂಶಿಕ್‌ ಅವರು ಎರಡು ವರ್ಷವಿದ್ದಾಗಲೇ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸತತ ಎರಡೂವರೆ ವರ್ಷದ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ. ಆದರೆ ಈಗ ಮತ್ತೆ ರೋಗ ಉಲ್ಬಣಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಿಕಿತ್ಸೆಗೆ ಅಂದಾಜು 10 ಲಕ್ಷ ರೂ. ಆಗಬಹುದು ಎಂದು ವೈದ್ಯರು ತಿಳಿಸಿದ್ದು, ಇವರದು ಬಡ ಕುಟುಂಬವಾಗಿದ್ದು, ಅಷ್ಟೊಂದು ಹಣವನ್ನು ಒಟ್ಟು ಮಾಡಲು ಕಷ್ಟವಾಗಿದ್ದು, ಅದಕ್ಕಾಗಿ ಈ ಕುಟುಂಬವು ಸಹೃದಯಿ ದಾನಿಗಳಿಂದ ನೆರವಿಗಾಗಿ ಮನವಿ ಮಾಡಿಕೊಂಡಿದೆ.

ಬ್ಯಾಂಕ್‌ ವಿವರ:

ಈ ಬಾಲಕನ ಚಿಕಿತ್ಸೆಗೆ ಮುಂದಾಗುವವರು ತಂದೆಯ ಹೆಸರಲ್ಲಿರುವ ಕೆನರಾ ಬ್ಯಾಂಕ್‌ ಖಾತೆಗೆ ಹಣವನ್ನು ಜಮೆ ಮಾಡಬಹುದು.

ಹೆಸರು: ರವೀಂದ್ರ, ಬ್ಯಾಂಕ್‌ : ಕೆನರಾ ಬ್ಯಾಂಕ್‌, ಶಾಖೆ: ನಾವುಂದ, ಖಾತೆ ಸಂಖ್ಯೆ : 01732200124764, ಐಎಫ್‌ಎಸ್‌ಸಿ ಸಂಖ್ಯೆ: ಸಿಎನ್‌ಆರ್‌ಬಿ0010173, ಹೆಚ್ಚಿನ ಮಾಹಿತಿಗೆ – 9108414570 ಸಂಖ್ಯೆಯನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.