ಹೊಸಂಗಡಿ-ಮುತ್ತಿನಕಟ್ಟೆ ರಸ್ತೆ ಅಭಿವೃದ್ಧಿ ಎಂದು?

2 ಕಿ.ಮೀ. ಕಲ್ಲು-ಮಣ್ಣಿನ ದುರ್ಗಮ ಹಾದಿ

Team Udayavani, May 13, 2022, 10:24 AM IST

mullikatte

ಹೊಸಂಗಡಿ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಹೊಸಂಗಡಿ ಪೇಟೆ ಬಳಿಯಿಂದ ಮುತ್ತಿನಕಟ್ಟೆ ಕಡೆಗೆ ಸಂಚರಿಸುವ 2 ಕಿ.ಮೀ. ದೂರದ ರಸ್ತೆಯು ದುರ್ಗಮವಾಗಿದ್ದು, ಇನ್ನೂ ಅಭಿವೃದ್ಧಿಗೆ ಮಾತ್ರ ಕಾಲವೇ ಕೂಡಿ ಬಂದಿಲ್ಲ.

ಹೊಸಂಗಡಿ ಪೇಟೆ ಬಳಿಯಿಂದ ಮುತ್ತಿನಕಟ್ಟೆ ಕಡೆಗೆ 2 ಕಿ.ಮೀ. ದೂರವಿದ್ದು, ಈ ಪೈಕಿ ಆರಂಭದಲ್ಲಿ ಸುಮಾರು 500 ಮೀ.ವರೆಗೆ ಡಾಮರು ಮಾಡಲಾಗಿತ್ತು. ಈಗ ಆ ಡಾಮರೆಲ್ಲ ಕಿತ್ತು ಬರೀ ಜಲ್ಲಿ ಕಲ್ಲಿನ ರಸ್ತೆಯಾಗಿ ಮಾತ್ರ ಉಳಿದಿದೆ. ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ.

10 ವರ್ಷದ ಹಿಂದೆ ಡಾಮರು

ಮುತ್ತಿನಕಟ್ಟೆ ಕಡೆಗೆ ಸಂಚರಿಸುವ ಮಾರ್ಗಕ್ಕೆ ಅರ್ಧ ಕಿ.ಮೀ.ವರೆಗೆ ಸುಮಾರು 10 ವರ್ಷಗಳ ಹಿಂದೆ ಒಮ್ಮೆ ಜಿ.ಪಂ. ಅನುದಾನದಿಂದ ಡಾಮರು ನಡೆಸಲಾಗಿತ್ತು. ಅದಾದ ಬಳಿಕ ಈವರೆಗೆ ಅಲ್ಲಿಂದ ಮುಂದಕ್ಕೆ ರಸ್ತೆ ಅಭಿವೃದ್ಧಿಪಡಿಸಿಲ್ಲ. ಆಗ ಹಾಕಿದ ಡಾಮರೆಲ್ಲ ಕಿತ್ತು ಹೋಗಿದ್ದರೂ, ಮರು ಡಾಮರು ಆಗಿಲ್ಲ. ಹೊಂಡಮಯ, ಜಲ್ಲಿಕಲ್ಲಿನ ರಸ್ತೆಯಲ್ಲಿ ಸಂಚರಿಸುವುದೇ ಅಪಾಯಕಾರಿಯಾಗಿದೆ.

ಬೀದಿ ದೀಪವೂ ಇಲ್ಲ

ಈ ಮಾರ್ಗಕ್ಕೆ ವರ್ಷದ ಹಿಂದೆ ಪಂಚಾಯತ್‌ ಅನುದಾನವನ್ನು ಬೀದಿದೀಪದ ಅಳವಡಿಕೆಗೆ ಮೀಸಲಿಟ್ಟರೂ, ಇನ್ನೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಬೀದಿದೀಪವಿಲ್ಲದೆ ಕತ್ತಲಿನಲ್ಲಿ ಈ ಮಾರ್ಗದಲ್ಲಿ ನಡೆದುಕೊಂಡು ಹೋಗುವುದು ಸಹ ಕಷ್ಟ. ಸುಮಾರು 80 ಸಾವಿರ ರೂ. ಅನುದಾನವಿದ್ದು, ಇನ್ನು ಅನುದಾನ ಬರಲಿದ್ದು, ಒಟ್ಟಿಗೆ ಕಾಮಗಾರಿ ನಡೆಸುವ ಯೋಜನೆ ಪಂಚಾಯತ್‌ನದ್ದು. ಆದರೆ ಈಗ ಇದ್ದಷ್ಟು ಅನುದಾನದಲ್ಲಿ ಒಂದಷ್ಟಾದರೂ ದೀಪ ಅಳವಡಿಸಿದರೆ ಈ ಮಾರ್ಗದಲ್ಲಿ ಸಂಚರಿಸುವವರಿಗೆ ಅನುಕೂಲವಾಗಬಹುದು ಎನ್ನುವುದು ಜನರ ಒತ್ತಾಯವಾಗಿದೆ.

ಈ ಮಾರ್ಗದಲ್ಲಿ ಸುಮಾರು 50 ಕ್ಕೂ ಮಿಕ್ಕಿ ಮನೆಗಳಿದ್ದು, ಇವರೆಲ್ಲ ಎಲ್ಲದಕ್ಕೂ ಹೊಸಂಗಡಿ ಪೇಟೆಯನ್ನೇ ಆಶ್ರಯಿಸಿದ್ದಾರೆ. ಆದರೆ ಹೊಸಂಗಡಿ ಪೇಟೆಗೆ ಬರುವುದೇ ಕಷ್ಟ. ಏನಾದರೂ ಪಡಿತರ, ದಿನಸಿ ತೆಗೆದುಕೊಂಡು ಹೋಗಲು ಈ ರಸ್ತೆಯ ಅವ್ಯವಸ್ಥೆ ನೋಡಿ ವಾಹನ ಬಾಡಿಗೆಗೆ ಕರೆದರೂ ಹೆಚ್ಚಿನವರು ಹಿಂದೇಟು ಹಾಕುತ್ತಾರೆ. ಇದರಿಂದ ನಿತ್ಯ ಇಲ್ಲಿನ ಜನ ಸಂಕಷ್ಟ ಪಡುವಂತಾಗಿದೆ.

ಎಲ್ಲರಿಗೂ ಸಂಕಷ್ಟ

ಹೊಸಂಗಡಿ – ಮುತ್ತಿನಕಟ್ಟೆ ರಸ್ತೆ ಹಲವು ವರ್ಷಗಳಿಂದ ಹಾಳಾಗಿದೆ. ಈ ಮಾರ್ಗದಲ್ಲಿ ಸಂಚರಿಸುವುದೇ ಸವಾಲಾಗಿದೆ. ಎಲ್ಲರಿಗೂ ಈ ಮಾರ್ಗದ ಸಂಚಾರ ಕಷ್ಟ. ಯಾರಿಗಾದರೂ ಅನಾರೋಗ್ಯ ಉಂಟಾದರೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇಲ್ಲಿನ ಜನಪಡುವ ಕಷ್ಟ ಅವರಿಗೆ ಗೊತ್ತು. ಆದಷ್ಟು ಬೇಗ ಈ ಮಾರ್ಗವನ್ನು ಅಭಿವೃದ್ಧಿಪಡಿಸಲಿ. -ಆನಂದ ಕಾರೂರು, ಸ್ಥಳೀಯರು

ಮನವಿ ಸಲ್ಲಿಕೆ

ಪಂಚಾಯತ್‌ ಅನುದಾನದಲ್ಲಿ ಈ ರಸ್ತೆಯ ಅಭಿವೃದ್ಧಿ ಕಷ್ಟ. ಹಿಂದೆ ಜಿ.ಪಂ. ಅನುದಾನದಿಂದ ರಸ್ತೆ ಡಾಮರು ಕಾಮಗಾರಿ ಮಾಡಲಾಗಿತ್ತು. ಈ ಮುತ್ತಿನಕಟ್ಟೆ ರಸ್ತೆ ಅಭಿವೃದ್ಧಿಪಡಿಸುವ ಸಲುವಾಗಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. ಈ ಬಾರಿಯಾದರೂ ಆಗಬಹುದು ಅನ್ನುವ ನಿರೀಕ್ಷೆಯಿದೆ. -ಸಂತೋಷ್‌ ಶೆಟ್ಟಿ, ಸ್ಥಳೀಯ ಗ್ರಾ.ಪಂ. ಸದಸ್ಯರು

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.