ಬಳ್ಕೂರಿನಲ್ಲಿ ರಸ್ತೆ ಅಪಘಾತ: ಯಕ್ಷಗಾನ ಭಾಗವತ ಸಾವು
Team Udayavani, Dec 31, 2018, 5:17 AM IST
ಕುಂದಾಪುರ: ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಳ್ಕೂರಿನಲ್ಲಿ ಶನಿವಾರ ರಾತ್ರಿ 9.45ರ ಸುಮಾರಿಗೆ ಬೊಲೆರೋ ಮತ್ತು ಬೈಕ್ ಢಿಕ್ಕಿಯಾಗಿ ಸಾವಿಗೀಡಾದವರು ಕಮಲಶಿಲೆ ಬಿ ಮೇಳದ ಭಾಗವತ ರವಿರಾಜ ಪೂಜಾರಿ (26) ಅವರಾಗಿದ್ದು, ಸ್ಥಳದಲ್ಲಿ ಸ್ವಲ್ಪ ಹೊತ್ತು ಗೊಂದಲದ ಸ್ಥಿತಿ ನೆಲೆಯಾಗಿತ್ತು.
ಸಿದ್ದಾಪುರ ಗ್ರಾಮದ ಜನ್ಸಾಲೆಯ ಲಕ್ಷ್ಮಣ ಪೂಜಾರಿ ಅವರ ಇಬ್ಬರು ಪುತ್ರರಲ್ಲಿ ಕಿರಿಯವರಾಗಿದ್ದ ಇವರು ಅಯ್ಯಪ್ಪ ಮಾಲೆ ಧರಿಸಿದ್ದರು. ಶನಿವಾರ ಹುಣ್ಸೆಮಕ್ಕಿಯಲ್ಲಿ ನಡೆದ ಯಕ್ಷಗಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದಾಗ ಅಪ ಘಾತ ಸಂಭವಿಸಿದೆ. ಅವರು ಭಾಗವತಿಕೆಯೊಂದಿಗೆ ಸಿದ್ದಾಪುರದಲ್ಲಿ ಸ್ಟಿಕ್ಕರ್ ಕಟ್ಟಿಂಗ್ ಕೆಲಸವನ್ನೂ ಮಾಡುತ್ತಿದ್ದರು.
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ
ಢಿಕ್ಕಿಯಾದ ಬೊಲೆರೋ ವಾಹನದ ಕುರಿತು ಸ್ಥಳೀಯರು ಕೆಲವು ರೀತಿಯ ಸಂಶಯ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಜನರು ನೆರೆದು ಸ್ವಲ್ಪ ಉದ್ವಿಗ್ನತೆ ನೆಲೆಯಾಗಿತ್ತು. ಬಳಿಕ ಕುಂದಾಪುರ ಡಿವೈಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ, ಕುಂದಾಪುರ, ಕಂಡೂರು, ಸಂಚಾರ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಬೊಲೆರೋ ಚಾಲಕ ಝಾಕಿರ್ ಹುಸೇನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ