ಭತ್ತದ ರೈತರ ಕೈ ಹಿಡಿದ ಯಂತ್ರ ಶ್ರೀ ಯೋಜನೆ; ರಾಜ್ಯದ 30 ಜಿಲ್ಲೆಗಳಲ್ಲಿ ಅನುಷ್ಠಾನ


Team Udayavani, Aug 14, 2020, 6:24 AM IST

ಭತ್ತದ ರೈತರ ಕೈ ಹಿಡಿದ ಯಂತ್ರ ಶ್ರೀ ಯೋಜನೆ; ರಾಜ್ಯದ 30 ಜಿಲ್ಲೆಗಳಲ್ಲಿ ಅನುಷ್ಠಾನ

ಕುಂದಾಪುರ: ಲಾಭ- ನಷ್ಟದ ತಖೆ¤ಯಿಲ್ಲದೇ ಭತ್ತ ಕೃಷಿ ಮಾಡ ಲಾಗುತ್ತಿತ್ತು. ಕೂಲಿ ಅಲಭ್ಯತೆ, ವೆಚ್ಚ ಅಧಿಕ ಎಂದು ಕೆಲವರು ಕೃಷಿಯಿಂದ ವಿಮುಖರಾಗುತ್ತಿದ್ದರು. ರೈತರನ್ನು ಭತ್ತ ಬೇಸಾಯದತ್ತ ಸೆಳೆಯಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೃಷಿ ಇಲಾಖೆ ಜತೆಗೂಡಿ ಬೆಂಬಲ ನೀಡುತ್ತಿದ್ದು “ಯಂತ್ರಶ್ರೀ ಯೋಜನೆ’ಯನ್ನು ರಾಜ್ಯದ 30 ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದೆ.

2,200 ಎಕರೆ ಗುರಿ
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಿಯಾಯಿತಿ ದರದಲ್ಲಿ ಬಾಡಿಗೆ ಆಧಾರಿತ ಕೃಷಿ ಯಂತ್ರಗಳನ್ನು ರೈತರಿಗೆ ದೊರಕಿಸುವ ವ್ಯವಸ್ಥೆ ಮಾಡಿದೆ. ಪ್ರಸಕ್ತ¤ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 2,200 ಎಕರೆ ಗುರಿ ಹೊಂದಿ 1,902 ಎಕರೆ ಪ್ರದೇಶದಲ್ಲಿ ರೈತರು ಯಾಂತ್ರಿಕ ಪದ್ಧತಿಯ ಶ್ರೀ ಭತ್ತ ಬೇಸಾಯ ಕ್ರಮವನ್ನು ಅನುಷ್ಠಾನಗೊಳಿಸಿದ್ದಾರೆ.

ಪ್ರೋತ್ಸಾಹಧನ
ಕುಂದಾಪುರ ತಾಲೂಕಿನಲ್ಲಿ 279 ರೈತರು 480 ಎಕರೆಯಲ್ಲಿ ಮುಂಗಾರಿನಲ್ಲಿ ಯಂತ್ರಶ್ರೀ ಅನುಷ್ಠಾನಿಸಿದ್ದು, 50 ಲಕ್ಷ ರೂ. ಪ್ರಗತಿನಿಧಿ ವಿತರಿಸಲಾಗಿದೆ. ಜತೆಗೆ 5 ಲಕ್ಷ ರೂ. ಪ್ರೋತ್ಸಾಹಧನ ಮೀಸಲಿಡಲಾಗಿದೆ. ರೈತರಿಗೆ ನರ್ಸರಿ ತಯಾರಿಗೆ ಅನುಕೂಲವಾಗುವಂತೆ 7,700 ಟ್ರೇ
ಒದಗಿಸಲಾಗಿದೆ ಎಂದು ಯೋಜನೆಯ ತಾ| ಹಿರಿಯ ನಿರ್ದೇಶಕ ಮುರಳೀಧರ ಕೆ. ಶೆಟ್ಟಿ ತಿಳಿಸಿದ್ದಾರೆ.

ಧರ್ಮಸ್ಥಳ ಯೋಜನೆ, ರಾಜ್ಯ ಸರಕಾರದ ಕೃಷಿ ಇಲಾಖೆಯ ‘ಕೃಷಿ ಯಂತ್ರಧಾರಾ’ ಮೂಲಕ ಉಳುಮೆಯಿಂದ ಹಿಡಿದು ಕಟಾವಿನ ತನಕ ಯಂತ್ರಗಳನ್ನು ಬಾಡಿಗೆ ನೀಡಲಾಗುತ್ತಿದೆ ಎನ್ನುತ್ತಾರೆ ಕೃಷಿ ಯಂತ್ರಧಾರೆ ಕೇಂದ್ರದ ಪ್ರಬಂಧಕ ರಾಜೇಶ್‌. ಅಧಿಕ ಖರ್ಚು ಹಾಗೂ ಕೂಲಿ ಸಮಸ್ಯೆಯಿಂದ ನನ್ನ ಜಾಗವನ್ನು ಹಡಿಲು ಬಿಟ್ಟದ್ದನ್ನು ಈಗ ಕೃಷಿ ಮಾಡಿದ್ದೇನೆ ಎನ್ನುತ್ತಾರೆ ಪ್ರಗತಿಪರ ಕೃಷಿಕ ಸುಜೀತ್‌ ಕುಮಾರ್‌ ಶೆಟ್ಟಿ ಅಸೋಡು.

ಜಿಲ್ಲೆಯಲ್ಲಿ 3 ಕೋ.ರೂ. ಪ್ರಗತಿನಿಧಿ , 25 ಲಕ್ಷ ರೂ. ಪ್ರೋತ್ಸಾಹಧನವನ್ನು ಕ್ರಿಯಾ ಯೋಜನೆಯಲ್ಲಿ ನಿಗದಿಗೊಳಿಸಲಾಗಿದೆ. ಯಾಂತ್ರಿಕ ಪದ್ಧತಿ ಅಳವಡಿಸಿಕೊಂಡ ರೈತರಿಗೆ 20,000 ರೂ. ಬೆಳೆ ಸಾಲ, ಎಕರೆಗೆ 500ರಿಂದ 2,500 ರೂ.ವರೆಗೆ ಪ್ರೋತ್ಸಾಹಧನ ನೀಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸುಮಾರು 750 ಎಕರೆಯಲ್ಲಿ ಹಡಿಲು ಭೂಮಿಗೆ ಹಸುರುಸ್ಪರ್ಶ ನೀಡಲಾಗಿದೆ. ಕುಂದಾಪುರ-480 ಎಕರೆ, ಬೈಂದೂರು -650 ಎಕರೆ, ಬ್ರಹ್ಮಾವರ- 250 ಎಕರೆ, ಉಡುಪಿ – 250 ಎಕರೆ, ಕಾರ್ಕಳ-172 ಎಕರೆ, ಮೂಡಬಿದಿರೆ-100 ಎಕರೆಯಲ್ಲಿ ಅನುಷ್ಠಾನಿಸಲಾಗಿದೆ.

ಹಡಿಲು ಭೂಮಿಯಲ್ಲೂ ಕೃಷಿ
ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಸುಮಾರು 2,200 ಎಕರೆಯಲ್ಲಿ ಯಾಂತ್ರೀಕೃತ ಭತ್ತ ಬೇಸಾಯದ ಗುರಿ ಇಟ್ಟುಕೊಳ್ಳಲಾಗಿದೆ. ಹಲವು ಕಾರಣಗಳಿಂದ ಬೇಸಾಯ ಮಾಡಲಾಗದೇ ಹಡಿಲು ಬಿಟ್ಟ ಸುಮಾರು 750 ಎಕ್ರೆಯಲ್ಲಿ ಭತ್ತ ಬೇಸಾಯ ಮಾಡಿಸಲಾಗಿದೆ.
-ಗಣೇಶ್‌ ಬಿ., ಹಿರಿಯ ನಿರ್ದೇಶಕರು, ಧ.ಗ್ರಾ. ಯೋಜನೆ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.