ಮಂಗಳೂರು: ವರ್ಣರಂಜಿತ ಕರಾವಳಿ ಉತ್ಸವ ಮೆರವಣಿಗೆ


Team Udayavani, Jan 10, 2020, 6:59 PM IST

10-January-26

ಮಂಗಳೂರು: ತುಳುನಾಡು-ಹೊರ ಜಿಲ್ಲೆಗಳ ಸಾಂಸ್ಕೃತಿಕ ಕಲಾ ಲೋಕದ ಸಂಗಮ..ತುಳುನಾಡಿನ ಸಂಸ್ಕೃತಿ ಬಿಂಬಿಸುವ ಮುಟ್ಟಾಳೆ ತೊಡಿಸುವುದರ ಮೂಲಕ ಸ್ವಾಗತ..ಕರಾವಳಿ ಉತ್ಸವಕ್ಕೆ ರಾಜ್ಯದ ಸಾಂಸ್ಕೃತಿಕ ಕಲಾ ರಂಗದ ಹೊಸ ಕಳೆ.. ಇವು ಶುಕ್ರವಾರದಿಂದ 10 ದಿನಗಳ ಕಾಲ ಲಾಲ್‌ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ಕರಾವಳಿ ಉತ್ಸವದ ಮೆರವಣಿಗೆಯಲ್ಲಿ ಕಂಡು ಬಂದ ದೃಶ್ಯಗಳಿವು.

ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವರ್ಣರಂಜಿತ ಜಾನಪದ-ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಉತ್ಸವವನ್ನು ಇಡೀ ರಾಜ್ಯವೇ ಗಮನಿಸುತ್ತಿದೆ. ಇಲ್ಲಿನ ಸಾಂಸ್ಕೃತಿಕ-ಜಾನಪದ ಸೊಗಡನ್ನು ಆಸ್ವಾದಿಸಲು ಹೊರ ಜಿಲ್ಲೆಗಳಿಂದಲೂ ಜನ ಕರಾವಳಿ ಉತ್ಸವಕ್ಕೆ ಆಗಮಿಸುತ್ತಾರೆ. ತುಳುನಾಡಿನ ಸಂಸ್ಕೃತಿಯೊಂದಿಗೆ ಹೊರ ಜಿಲ್ಲೆಗಳ ಕಲಾ ಸಂಸ್ಕೃತಿಯನ್ನೂ ಬೆಸೆಯುವ ಮೂಲಕ ಕಲಾ ಸಿರಿವಂತಿಕೆ ಅಭಿವ್ಯಕ್ತಿಯಾಗಿದೆ ಎಂದರು.

ಶಾಸಕ ಡಿ. ವೇದವ್ಯಾಸ ಕಾಮತ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ, ಮನಪಾ ಆಯುಕ್ತ ಶಾನಾಡಿ ಅಜಿತ್‌ಕುಮಾರ್ ಹೆಗ್ಡೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.

ಮುಟ್ಟಾಳೆ ತೊಡಿಸಿ ಸ್ವಾಗತ
ತುಳುನಾಡಿನ ಸಂಪ್ರದಾಯದಂತೆ ಅತಿಥಿಗಳಿಗೆ ಮುಟ್ಟಾಳೆ ತೊಡಿಸಿ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಬಳಿಕ ಕಲ್ಲಿಗೆ ತೆಂಗಿನ ಕಾಯಿ ಒಡೆದು ದೀಪ ಬೆಳಗಿ ಮೆರವಣಿಗೆಗೆ ಅಧಿಕೃತ ಚಾಲನೆ ನೀಡಲಾಯಿತು. ಮೆರವಣಿಗೆಯು ನೆಹರೂ ಮೈದಾನದಿಂದ ಆರಂಭಗೊಂಡು ಕೆ. ಎಸ್. ರಾವ್ ರಸ್ತೆ, ನವಭಾರತ್ ವೃತ್ತ, ಪಿವಿಎಸ್, ಲಾಲ್‌ಭಾಗ್ ಮೂಲಕ ಕರಾವಳಿ ಉತ್ಸವ ಮೈದಾನ ತಲುಪಿತು.

ಉತ್ಸವದ ಕಲಾ ಸಿರಿವಂತಿಕೆ
ಜಿಲ್ಲೆ ಮತ್ತು ಹೊರ ಜಿಲ್ಲೆಗಳ ವಿವಿಧ ಕಲಾ ತಂಡಗಳು ಭಾಗವಹಿಸಿ ಕರಾವಳಿ ಉತ್ಸವ ಮೆರವಣಿಗೆಗೆ ಮೆರುಗು ನೀಡಿದವು. ಬಂಟ್ವಾಳ ತಾಲೂಕಿನ ಕನ್ಯಾನ ಗಿರಿ- ಸಿರಿ ಜಾನಪದ ಕಲಾ ತಂಡದ ಕೊರಗರ ಡೋಲು- ಕೋಲು ಕುಣಿತ, ಕನ್ಯಾನ ಶಿವಗಿರಿ ಹೊಯಿಗೆಗದ್ದೆಯ ಕರಡಿ- ಸಿಂಹ ನೃತ್ಯ, ರಾಮನಗರದ ಪೂಜಾ ಕುಣಿತ, ಕಾರವಾರದ ಸುಗ್ಗಿ ಕುಣಿತ, ಹಾವೇರಿ ಬೇಡರ ಕುಣಿತ, ಚಿಕ್ಕಮಗಳೂರು ಮಹಿಳಾ ವೀರಗಾಸೆ, ಮಾಗಡಿ ನಂದಿ ಧ್ವಜ, ಗದಗ ಕೋಲಾಟ, ಮೈಸೂರಿನ ವೀರಗಾಸೆ ಕುಣಿತ, ಶಿವಮೊಗ್ಗ ಮಹಿಳಾ ಡೊಳ್ಳು, ಚಾಮರಾಜನಗರ ಗೊರವರ ಕುಣಿತ, ತುಮಕೂರು ಸೋಮನ ಕುಣಿತ, ಧಾರವಾಡದ ಜಗ್ಗಲಿಗೆ, ಬಜಪೆ ಶ್ರೀ ಗುರು ವಿಜಯ ವಿಠಲ ಯಕ್ಷ ಕಲಾ ಕೇಂದ್ರ, ಬಿ.ಸಿ.ರೋಡು ಚಿಲಿಪಿಲಿ ಗೊಂಬೆ ಬಳಗ, ಪಾಣೆಮಂಗಳೂರು ಹಾಸ್ಯಗಾರ ಗೊಂಬೆ ತಂಡ, ಮಂಗಳೂರು ಮೂಕಾಂಬಿಕಾ ಚಂಡೆ ಬಳಗ, ಹಾವೇರಿ ಪುರವಂತಿಕೆ, ಮೊಂಟೆಪದವಿನ ಕಂಸಾಳೆ ಜಾನಪದ ನೃತ್ಯ, ತೊಕ್ಕೊಟ್ಟು ನಲಿಪು ಜನಪದ ಕೂಟದ ಕಂಗೀಲು ಜಾನಪದ ನೃತ್ಯ, ಉಡುಪಿ ಬಂಟಕಲ್ಲು ದುರ್ಗಾ ಮಹಿಳಾ ಚೆಂಡೆ ಬಳಗ, ತುಳುನಾಡಿನ ಪಂಚವಾದ್ಯ ವೈವಿಧ್ಯಮಯ, ತುಳು ಮಾತೆ ಪ್ರದರ್ಶನ ಟ್ಯಾಬ್ಲೊ, ಸುಳ್ಯ ರಮೇಶ್ ಮತ್ತು ಬಳಗದ ಆಟಿ ಕಳಂಜ, ಇಬ್ರಾಹಿಂ ಬಾತಿಷಾ ಅವರ ಒಪ್ಪನ ನೃತ್ಯ ಮೊದಲಾದವುಗಳು ಈ ಬಾರಿಯ ಉತ್ಸವ ಮೆರವಣಿಗೆಯ ಪ್ರಮುಖ ವಿಶೇಷ ಆಕರ್ಷಣೆಗಳು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.