2 ಕುಟುಂಬ ಸ್ಥಳಾಂತರ, ರಸ್ತೆ ಸಮುದ್ರ ಪಾಲು
ಚಿತ್ರಾಪುರ, ಉಳ್ಳಾಲ, ಸೋಮೇಶ್ವರ ಉಚ್ಚಿಲ, ಪಡುಬಿದ್ರಿ, ಎರ್ಮಾಳು ಪರಿಸರದಲ್ಲಿ ಕಡಲ್ಕೊರೆತ ತೀವ್ರ
Team Udayavani, Aug 5, 2019, 1:19 PM IST
ಉಳ್ಳಾಲ: ಬಟ್ಟಪ್ಪಾಡಿ ಬಳಿಯ ರಸ್ತೆ ಸಮುದ್ರಪಾಲಾಗುವ ಭೀತಿ ಎದುರಿಸುತ್ತಿದೆ.
ಸುರತ್ಕಲ್ : ಚಿತ್ರಾಪುರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಎರಡು ಕುಟುಂಬಗಳನ್ನು ರವಿವಾರ ಸ್ಥಳಾಂತಗೊಳಿಸಿ ಸಮೀಪದ ಭಜನ ಮಂದಿರದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.
ಶಾಸಕ ಡಾ| ವೈ. ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಮನೆಗಳನ್ನು ಉಳಿಸಲು ಮರಳು ಚೀಲ ಅಳವಡಿಕೆ ಸಹಿತ ಸಾಧ್ಯವಾದ ಪ್ರಯತ್ನ ನಡೆಸಲಾಗುವುದು ಎಂದರು. ಚಿತ್ರಾಪುರ ಬಳಿ ರಸ್ತೆ ಭಾಗಶಃ ನೀರು ಪಾಲಾಗಿದ್ದು ಶಾಲೆಯ ಆಟದ ಮೈದಾನವನ್ನು ಉಳಿಸಿಕೊಳ್ಳಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತ ನಾಡಿ, ಸುಮಾರು 350 ಕೋಟಿ ರೂ. ವೆಚ್ಚದಲ್ಲಿ ಉಳಿದ ಭಾಗದಲ್ಲಿ ಕಲ್ಲು ಹಾಕುವ ಯೋಜನೆಯ ಪ್ರಸ್ತಾವನೆಯಿದೆ. ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಈ ಬಗ್ಗೆ ಹಣ ಬಿಡುಗಡೆಗೆ ಒತ್ತಾಯಿಸ ಲಾಗುವುದು ಎಂದರು.
ಮಾಜಿ ಮೇಯರ್ ಗಣೇಶ ಹೊಸಬೆಟ್ಟು, ರಘುವೀರ ಪಣಂಬೂರು, ಕಂದಾಯ ಅಧಿಕಾರಿ ನವೀನ ಉಪಸ್ಥಿತರಿದ್ದರು. ಚಿತ್ರಾಪುರ ಬಳಿ ಮನೆ, ಶೆಡ್ ಕುಸಿಯದಂತೆ ರವಿವಾರ ಮರಳು ಚೀಲ ಹಾಕುವ ತುರ್ತು ಕಾರ್ಯ ನಡೆಯಿತು. ಮಲ್ಲಮಾರ್, ಬೈಕಂಪಾಡಿ ಬಳಿಯೂ ಸಮುದ್ರದಕೊರೆತ ಮುಂದುವರಿದ್ದು ಹಲವು ವರ್ಷಗಳ ಬಳಿಕ ಸಮುದ್ರಭಾಗ ವಿಸ್ತಾರಗೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ