ಬತ್ತಿ ಹೋಗುವ ಹಂತದಲ್ಲಿದೆ ಬಂದಾರು ಕೆರೆ

ಗಂಧಕದ ಅಂಶವಿರುವ ಔಷಧೀಯ ಗುಣ ಸಮೃದ್ಧ ನೀರು

Team Udayavani, Apr 1, 2019, 12:28 PM IST

01-April-7

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಬಂದಾರು ಎನ್ನುವಲ್ಲಿನ ಬಿಸಿ ನೀರ ಚಿಲುಮೆಯ ಕೆರೆಯು ಈ ಬಾರಿಯ ಸುಡು ಬಿಸಿಲ ತಾಪಕ್ಕೆ ಬತ್ತಿ ಹೋಗುವ ಹಂತಕ್ಕೆ ತಲುಪಿದೆ.

ಬಂದಾರಿನ ಈ ಕೆರೆಯು ವರ್ಷದ ಮಳೆಗಾಲ, ಚಳಿಗಾಲ, ಬೇಸಗೆ ಕಾಲದುದ್ದಕ್ಕೂ ಸುಮಾರು 36 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದೊಂದಿಗೆ ಬಿಸಿಯಾಗಿದ್ದು, ಈ ನೀರಿನಲ್ಲಿ ಗಂಧಕದ ಅಂಶ ಹೇರಳವಾಗಿರುವುದರಿಂದ ಹಲವಾರು ಬಗೆಯ ಚರ್ಮವ್ಯಾಧಿಗಳು ನಿವಾರಣೆಯಾಗುತ್ತಿವೆ.

ಈ ಹಿನ್ನೆಲೆಯಲ್ಲಿ ದೂರದ ಕೇರಳ, ತಮಿಳುನಾಡು, ಬೆಂಗಳೂರು ಸೇರಿದಂತೆ ವಿವಿಧೆಡೆಗಳಿಂದ ಹಲವಾರು ಮಂದಿ ಬಂದು ಈ ಕೆರೆಯಲ್ಲಿ ಸ್ನಾನ ಮಾಡಿ ಇಲ್ಲಿನ ನೀರನ್ನು ಕೊಂಡೊಯ್ಯುತ್ತಾರೆ.

ಈ ಕೆರೆಯ ನೀರನ್ನು ಕೃಷಿಗೆ ಬಳಸಿದಾಗ ಯಾವುದೇ ಅನ್ಯ ಗೊಬ್ಬರ ಬಳಕೆ ಮಾಡದೆ ಹೆಚ್ಚಿನ ಕೃಷಿ ಇಳುವರಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಎಲ್ಲ ಕಾರಣಗಳಿಂದ ಕೇಂದ್ರೀಯ ಅಧ್ಯಯನ ವಿಭಾಗದ ವಿಜ್ಞಾನಿಗಳು ಇಲ್ಲಿಗೆ ಆಗಮಿಸಿ ಕೆರೆಯ ನೀರನ್ನು ಅಧ್ಯಯನಕ್ಕೆ ಒಳಪಡಿಸಿದ್ದರು.

ಪ್ರಾಕೃತಿಕ ಅಸಮತೋಲನ
ಈ ಎಲ್ಲ ವೈಶಿಷ್ಟ್ಯಗಳನ್ನು ಹೊಂದಿರುವ ಕೆರೆಯು ಈ ವರ್ಷ ಸಂಪೂರ್ಣ ಬತ್ತುವ ಭೀತಿಗೆ ಒಳಗಾಗಿರುವುದು ಪ್ರಕೃತಿಯಲ್ಲಿ ಸಮತೋಲನ ತಪ್ಪುತ್ತಿರುವ ವಿದ್ಯಮಾನವಾಗಿದೆ ಎಂದು ಪರಿಸರ ಪ್ರೇಮಿ, ಗೃಹರಕ್ಷಕ ದಳದ ಘಟಕಾಧಿಕಾರಿ ದಿನೇಶ್‌ ಅವರು ಹೇಳಿದ್ದಾರೆ.

ವರ್ಷದ ಎಲ್ಲ ದಿನಗಳಲ್ಲಿಯೂ ನೀರಿನ ಮಟ್ಟವನ್ನು ಕಾಯ್ದುಕೊಂಡಿದ್ದ ಈ ಕೆರೆಯ ನೀರು ಈ ಬಾರಿ ಬತ್ತಿ ಹೋಗುವ ಹಂತಕ್ಕೆ ಸಿಲುಕಿರುವುದು ಕಳವಳಕಾರಿ ಎಂದು ಸ್ಥಳೀಯ ನಿವಾಸಿ ಮಹಮ್ಮದ್‌ ಬಂದಾರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.